ಬಿಬಿಎಂಪಿ ವಿಭಜನೆ ಕುರಿತು ಜೂ.17ಕ್ಕೆ ವಿಶೇಷ ಸಭೆ
ಬೆಂಗಳೂರು, ಜೂ. 12 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು ವಿಭಜಿಸುವ ಪ್ರಸ್ತಾಪ ಮತ್ತೊಮ್ಮೆ ಕೇಳಿ ಬಂದಿದೆ. ಜೂನ್ 17ರಂದು ಬಿಬಿಎಂಪಿ ವಿಭಜನೆ ಕುರಿತು ಚರ್ಚಿಸಲು ವಿಶೇಷ ಕೌನ್ಸಿಲ್ ಸಭೆಯನ್ನು ಕರೆಯಲಾಗಿದೆ.
ಕಳೆದ ವಾರ ಬಿಬಿಎಂಪಿ ಮೇಯರ್ ಕಟ್ಟೆ ಸತ್ಯನಾರಾಯಣ ಬಿಬಿಎಂಪಿ ವಿಭಜನೆ ಕುರಿತು ಚರ್ಚೆ ನಡೆಸಲು ವಿಶೇಷ ಕೌನ್ಸಿಲ್ ಸಭೆಯನ್ನು ಕರೆಯಲಾಗುತ್ತದೆ ಎಂದು ಮಾಹಿತಿ ನೀಡಿದ್ದರು. ಸದ್ಯ ಜೂನ್ 17ರಂದು ಸಭೆಯನ್ನು ಕರೆಯಲಾಗಿದ್ದು, ವಿಭಜನೆ ಕುರಿತು ಚರ್ಚೆ ನಡೆಯಲಿದೆ. [ಬಿಬಿಎಂಪಿ ವಿಭಜನೆ ಪ್ರಸ್ತಾಪ ಸರ್ಕಾರಕ್ಕೆ]

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಮಾಡುವ ಕುರಿತು ವರದಿ ನೀಡುವಂತೆ ರಚಿಸಿದ್ದ ಸಮಿತಿ ಸರ್ಕಾರಕ್ಕೆ ಬಿಬಿಎಂಪಿಯನ್ನು ಎರಡು ಅಥವ ಮೂರು ವಿಭಾಗಗಳಾಗಿ ವಿಂಗಡಿಸಬಹುದು ಎಂದು ವರದಿ ನೀಡಿದೆ. ಬಿಬಿಎಂಪಿ ಕೌನ್ಸಿಲ್ ಸಭೆಯೂ ವಿಭಜನೆಗೆ ಒಪ್ಪಿಗೆ ನೀಡಿದರೆ, ಮುಂದಿನ ಕಾರ್ಯ ಆರಂಭವಾಗಲಿದೆ. [ಬಿಬಿಎಂಪಿ ವಿಭಜನೆಯ ಸುಳಿವು ಕೊಟ್ಟ ಸಿದ್ದರಾಮಯ್ಯ]
ಹಳೆಯ ಪ್ರಸ್ತಾಪ : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರವಹಿಸಿಕೊಂಡ ನಂತರ ಬಿಬಿಎಂಪಿ ವಿಭಜನೆ ವಿಚಾರ ಕೇಳಿಬರುತ್ತಿದೆ. ಸಿದ್ದರಾಮಯ್ಯ ಅವರು ಸಹ ಆಡಳಿತದ ಅನುಕೂಲದ ದೃಷ್ಠಿಯಿಂದ 198 ವಾರ್ಡ್ ಗಳನ್ನು ಹೊಂದಿರುವ ಬಿಬಿಎಂಪಿಯನ್ನು ಎರಡು ಅಥವ ಮೂರು ವಿಭಾಗಗಳಾಗಿ ವಿಂಗಡಿಸುವುದು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದರು.
ಸರ್ಕಾರ ನಗರಾಭಿವೃದ್ಧಿ ಇಲಾಖೆ ಮತ್ತು ಬಿಬಿಎಂಪಿಯ ಮಾಜಿ ಆಯುಕ್ತರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿ, ಬಿಬಿಎಂಪಿ ವಿಭಜನೆ ಮಾಡುವ ಕುರಿತು ವರದಿ ನೀಡುವಂತೆ ಸೂಚಿಸಿತ್ತು. ಸಮಿತಿ ಸಹ ಬಿಬಿಎಂಪಿ ವಿಭಜಿಸಿದರೆ, ಆಡಳಿತಕ್ಕೆ ಅನುಕೂಲವಾಗಲಿದೆ ಮತ್ತು ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ಹೊಸ ವಾರ್ಡ್ ಗಳನ್ನು ಬಿಬಿಎಂಪಿಗೆ ಸೇರಿಸಿಕೊಳ್ಳಬಹುದು ಎಂದು ಶಿಫಾರಸು ಮಾಡಿತ್ತು.
198 ವಾರ್ಡ್ ಗಳಿರುವ ಬಿಬಿಎಂಪಿಯನ್ನು ಒಬ್ಬರು ಆಯುಕ್ತರು ಮತ್ತು ಮೇಯರ್ ಗಳಿಂದ ನಿರ್ವಹಿಸುವುದು ಕಷ್ಟ. ಎರಡು ಅಥಮ ಮೂರು ಭಾಗಗಳಾಗಿ ವಿಭಜನೆ ಆದರೆ, ಅಷ್ಟು ಮೇಯರ್ ಮತ್ತು ಆಯುಕ್ತರು ನೇಮಕವಾಗುತ್ತಾರೆ. ಆಗ ಉಸ್ತುವಾರಿ ನೋಡಿಕೊಳ್ಳುವುದು ಸುಲಭವಾಗಲಿದೆ ಎಂಬ ಚಿಂತನೆಯೂ ಇದೆ.
ಜೂನ್ 17ರಂದು ನಡೆಯಲಿರುವ ಬಿಬಿಎಂಪಿಯ ವಿಶೇಷ ಕೌನ್ಸಿಲ್ ಸಭೆಯಲ್ಲಿ ಸಮಿತಿಯ ವರದಿ ಸೇರಿದಂತೆ ಹಲವಾರು ವಿಚಾರಗಳ ಕುರಿತಾಗಿ ಚರ್ಚೆ ನಡೆಯಲಿದೆ. ಸಭೆ ಅಂತಿಮವಾಗಿ ಯಾವ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಸಲ್ಲಿಸುತ್ತದೆ ಎಂದು ಕಾದು ನೋಡಬೇಕು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications