Special MEMU Train: ಬೆಂಗಳೂರು-ಮೈಸೂರು ನಡುವೆ ವಿಶೇಷ ಮೆಮು ರೈಲು ಸೇವೆ: ದಿನಾಂಕ, ಸಮಯಗಳ ವಿವರ
Special MEMU Train: ಭಾರತೀಯ ರೈಲ್ವೆ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ನಿಯಂತ್ರಿಸಲು ಹೆಚ್ಚುವರಿ ರೈಲುಗಳನ್ನು ಘೋಷಣೆ ಮಾಡುತ್ತಲಿರುತ್ತದೆ. ಹಾಗೆಯೇ ಇದೀಗ ಬೆಂಗಳೂರು-ಮೈಸೂರು ನಡುವೆ ವಿಶೇಷ ಮೆಮು ರೈಲು ಸಂಚರಿಸಲಿ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹಾಗಾದ್ರೆ ಕಾರಣ ಏನು? ಹಾಗೂ ದಿನಾಂಕ, ಸಮಯಗಳ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಬ್ಬ-ಹರಿ ದಿನಗಳು ಸೇರಿದಂತೆ ಹಲವು ವಿಶೇಷ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಪ್ರಯಾಣಿಕರ ದಟ್ಟಣೆ ಇದ್ದೇ ಇರುತ್ತದೆ. ಆದ್ದರಿಂದ ಇಂತಹ ಸಂದರ್ಭಗಳಲ್ಲಿ ಪ್ರಯಾಣಿಕರಿಗೆ ಅನುಕೂಲ ಆಗುವಂತೆ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಹೆಚ್ಚುವರಿ ರೈಲುಗಳ ಸೇವೆ ನೀಡುತ್ತಾ ಬಂದಿದೆ. ಹಾಗೆಯೇ ಇದೀಗ ಬೆಂಗಳೂರು-ಮೈಸೂರು ನಡುವೆ ವಿಶೇ ಮೆಮು ರೈಲುಗಳನ್ನು ಘೋಷಣೆ ಮಾಡಿದೆ. ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ನೋಡಿ.

ವಾರಾಂತ್ಯಗಳಲ್ಲಿ ಹಾಗೂ ಶ್ರೀ ಸತ್ಯ ಸಾಯಿ ಬಾಬಾ ಶತಮಾನೋತ್ಸವ ಆಚರಣೆ ಹಿನ್ನೆಲೆ ಪ್ರಯಾಣಿಕರ ದಟ್ಟಣೆ ಇರುತ್ತದೆ. ಈ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕೆಎಸ್ಆರ್ ಬೆಂಗಳೂರು ಮತ್ತು ಮೈಸೂರು ಅಶೋಕಪುರಂ ನಡುವೆ ವಿಶೇಷ ಮೆಮು ರೈಲು ಸಂಚಾರ ಮಾಡಲಿದೆ ನೈರುತ್ಯ ಎಂದು ಘೋಷಿಸಿದೆ.
ಈ ರೈಲು ಸೇವೆ ಇಂದಿನಿಂದ ಅಂದರೆ, ನವೆಂಬರ್ 14ರ ಶುಕ್ರವಾರದಿಂದ ಆರಂಭವಾಗಿದ್ದು, ಡಿಸೆಂಬರ್ 28ರ ವರೆಗೆ ಈ ಮಾರ್ಗದಲ್ಲಿ ಶುಕ್ರವಾರ, ಶನಿವಾರ ಮತ್ತು ಭಾನುವಾರ ಸಂಚಾರ ಮಾಡಲಿದೆ. ಆದರೆ, ನವೆಂಬರ್ 21, 22 ಮತ್ತು 23 ರಂದು ಈ ರೈಲಿನ ಸೇವೆ ಇರುವುದಿಲ್ಲ ಎಂದು ತಿಳಿಸಿದೆ.
ರೈಲು ಸಂಚಾರ ಸಮಯಗಳ ವಿವರ: ರೈಲು ಸಂಖ್ಯೆ 06213 ಕೆಎಸ್ಆರ್ ಬೆಂಗಳೂರಿನಿಂದ ಮಧ್ಯಾಹ್ನ 12:15 ಗಂಟೆಗೆ ಹೊರಡಲಿದ್ದು, ಅಶೋಕಪುರಂಗೆ ಮಧ್ಯಾಹ್ನ 3:40 ಗಂಟೆಗೆ ತಲುಪಲಿದೆ. ಮತ್ತೆ ಅಶೋಕಪುರಂನಿಂದ ಸಂಜೆ 4:10ಕ್ಕೆ ಹೊರಡಲಿರುವ ರೈಲು ಸಂಖ್ಯೆ 06214, ಕೆಎಸ್ಆರ್ ಬೆಂಗಳೂರಿಗೆ ರಾತ್ರಿ 8 ಗಂಟೆಗೆ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?: ಈ ಮೆಮು ರೈಲು ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಜ್ಞಾನಭಾರತೀ ಹಾಲ್ಟ್, ಕೆಂಗೇರಿ, ಹೆಜ್ಜಾಲ, ಬಿಡದಿ, ಕೇತೋಹಳ್ಳಿ, ರಾಮನಗರ, ಚನ್ನಪಟ್ಟಣ, ಸತ್ತಿಹಳ್ಳಿ, ನಿಡಘಟ್ಟ ಹಾಲ್ಟ್, ಮದ್ದೂರು, ಹನಕೇರಿ, ಮಂಡ್ಯ, ಯಲಿಯೂರು, ಬ್ಯಾದರಹಳ್ಳಿ, ಪಾಂಡವಪುರ, ಶ್ರೀರಂಗಪಟ್ಟಣ, ನಾಗನಹಳ್ಳಿ, ಮೈಸೂರು ಮತ್ತು ಚಾಮರಾಜಪುರಂನಲ್ಲಿ ನಿಲುಗಡೆ ಹೊಂದಿರಲಿದೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ. ಹೀಗೆ ವಿಶೇಷ ಸಂದರ್ಭಗಳಲ್ಲಿ ಪ್ರಯಾಣಿಕರ ಅನುಕೂಲಕ್ಕೆ ತಕ್ಕಂತೆ ವಿಶೇಷ ರೈಲು ಸೇವೆಯನ್ನು ನೀಡುತ್ತಲಿರುತ್ತದೆ.
ಭಾರತವು ವಿವಿಧ ಸಂಸ್ಕೃತಿ, ಜನಾಂಗಗಳು, ಧರ್ಮಗಳನ್ನು ಒಳಗೊಂಡಿದ್ದು, ಜೊತೆಗೆ ಇಲ್ಲಿ ವಿವಿಧ ಹಬ್ಬಗಳನ್ನು ಸಹ ಆಚರಣೆ ಮಾಡಲಾಗುತ್ತದೆ. ಆದ್ದರಿಂದ ಭಾರತವನ್ನು ವೈವಿದ್ಯಮಯ ದೇಶವೆಂದು ಕರೆಯಲಾಗುತ್ತದೆ. ರಾಷ್ಟ್ರೀಯ ಹಬ್ಬಗಳನ್ನು ಹೊರತುಪಡಿಸಿ ಸ್ಥಳೀಯವಾಗಿ ಹಬ್ಬಗಳನ್ನು ಆಚರಣೆ ಮಾಡಲಾಗುತ್ತದೆ. ಈ ವೇಳೆ ಒಂದು ಕಡೆಯಿಂದ ಮತ್ತೊಂದು ಕಡೆಗೆ ಪ್ರಯಾಣ ಮಾಡುವವರ ಸಂಖ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಅದರಲ್ಲೂ ಕಡಿಮೆ ದರ ಹಿನ್ನೆಲೆ ರೈಲಿನಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ತುಸು ಹೆಚ್ಚಾಗಿಯೇ ಇರುತ್ತದೆ. ಆದ್ದರಿಂದ ಯಾವುದೇ ವಿಶೇಷ ಹಬ್ಬಗಳ ಸಂದರ್ಭಗಳಲ್ಲಿ ಭಾರತೀಯ ರೈಲ್ವೆ ಪ್ರಯಾಣಿಕರ ದಟ್ಟಣೆ ನಿವಾರಣೆ ಮಾಡಲು ಹೆಚ್ಚುವರಿ ವಿಶೇಷ ರೈಲುಗಳನ್ನು ಘೋಷಿಸುತ್ತಲೇ ಬಂದಿದೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications