ಜಯಲಲಿತಾ ಪ್ರಕರಣ: ಜಪ್ತಿ ಮಾಡಲಾಗಿದ್ದ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ಎಸ್ಪಿಪಿ ನೇಮಕ
ಬೆಂಗಳೂರು. ಏಪ್ರಿಲ್ 8: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಸಿಎಂ ಜೆ.ಜಯ ಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ಕಾನೂನು ಪ್ರಕ್ರಿಯೆ ಕೈಗೊಳ್ಳಲು ರಾಜ್ಯ ಸರ್ಕಾರಿ ಅಭಿಯೋಜಕ ಕಿರಣ್ ಎಸ್. ಜವಳಿ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರನ್ನಾಗಿ ಸರ್ಕಾರ ನೇಮಿಸಿದೆ.
ಜಯ ಲಲಿತಾ ವಿರುದ್ಧದ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನಗರದ ವಿಶೇಷ ನ್ಯಾಯಾಲಯ (ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ) ಬರೆದ ಪತ್ರ ಆಧರಿಸಿ ರಾಜ್ಯ ಕಾನೂನು ಇಲಾಖೆ ಅಧೀನ ಕಾರ್ಯದರ್ಶಿ ಆದಿ ನಾರಾಯಣ ಅವರು ಮಾ.27ರಂದು ಈ ಆದೇಶ ಹೊರಡಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂಪಾಯಿ ದಂಡ ವಿಧಿಸಿ 2014ರ ಸೆಪ್ಟೆಂಬರ್ 27ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆಬಾಳುವ ವಸ್ತುಗಳನ್ನು ಆರ್ಬಿಐ, ಎಸ್ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿದ್ದ ವಸ್ತುಗಳು ಯಾವುವು?
7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರ ಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11, 344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ರೇಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂಪಾಯಿ ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು. ಸದ್ಯ ಅವುಗಳನ್ನು ವಿಲೇವಾರಿ ಮಾಡಬೇಕಿದೆ.
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ











Click it and Unblock the Notifications