Get Updates
Get notified of breaking news, exclusive insights, and must-see stories!

ಬೆಂಗಳೂರು : ಶಬರಿಮಲೆಗೆ ರಾಜಹಂಸ ಬಸ್ ಸೇವೆ

ಬೆಂಗಳೂರು, ಡಿ. 6 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಪಂಪಾಗೆ ರಾಜಹಂಸ ಬಸ್ ಸೇವೆಯನ್ನು ಆರಂಭಿಸುತ್ತಿದೆ. ಡಿ. 12 ರಿಂದ ಜ. 12ರವರೆಗೆ ಈ ಬಸ್ ಸಂಚರಿಸಲಿದೆ.

ಎರಡು ತಿಂಗಳ ಪವಿತ್ರ ಶಬರಿಮಲೆ ಯಾತ್ರೆ ಈಗಾಗಲೇ ಆರಂಭಗೊಂಡಿದ್ದು, ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ. ಆದ್ದರಿಂದ ಕೆಎಸ್‌ಆರ್‌ಟಿಸಿ ಭಕ್ತರ ಅನುಕೂಲಕ್ಕಾಗಿ ರಾಜಹಂಸ ಬಸ್ ಸೇವೆಯನ್ನು ಆರಂಭಿಸಲಿದೆ. [ಸ್ವಾಮಿಯೇ ಅಯ್ಯಪ್ಪ, ಭಕ್ತಿ ಪರವಶತೆಯ ಮಹಾಪೂರ]

Sabarimala

ಬಸ್ ಮಾರ್ಗ : ಡಿ. 12 ರಿಂದ ಜ. 12ರವರೆಗೆ ಈ ಬಸ್ ಸಂಚರಿಸಲಿದ್ದು, ಮೈಸೂರು, ಗುಂಡ್ಲುಪೇಟೆ, ಕ್ಯಾಲಿಕಟ್, ಗುರುವಾಯೂರು, ಕೊಟ್ಟಾಯಂ ಮಾರ್ಗವಾಗಿ ಪಂಪಾಗೆ ತೆರಳಲಿದೆ. [ಚಿತ್ರಗಳಲ್ಲಿː ಶಬರಿಮಲೆಗೆ ಭಕ್ತರ ತಂಡ]

ಸಮಯ : ರಾಜಹಂಸ ಬಸ್ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 8.30ಕ್ಕೆ ಪಂಪಾ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 10ಕ್ಕೆ ಬೆಂಗಳೂರಿಗೆ ಮರಳಲಿದೆ ಅಂದಹಾಗೆ ಬಸ್ ಪ್ರಯಾಣ ದರ 825. ರೂ ಗಳಾಗಿದೆ. [ಟಿಕೆಟ್ ಬುಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ]

20 ತಾಸು ಸಂಚಾರ ಬಂದ್ : ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಸಮೀಪದ ಗುರುವಾರ ಮಧ್ಯರಾತ್ರಿ ಗ್ಯಾಸ್ ಟ್ಯಾಂಕರ್‌ವೊಂದು ಅಪಘಾತಕ್ಕೀಡಾದ ಪರಿಣಾಮ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆ ಉಂಟಾಗಿತ್ತು. ಇದರಿಂದಾಗ ಗುರುವಾರ ಮಧ್ಯರಾತ್ರಿಯಿಂದ ಶುಕ್ರವಾರ ರಾತ್ರಿ 7 ಗಂಟೆ ವರೆಗೆ ಸುಮಾರು 20 ತಾಸುಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಟ್ಯಾಂಕರ್ ಬಿದ್ದ ಸ್ಥಳದ ಪಕ್ಕದಲ್ಲೇ ರೈಲು ಹಳಿ ಇರುವುದರಿಂದ ಈ ಮಾರ್ಗವಾಗಿ ಸಾಗುವ ಎಲ್ಲ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+