ಬೆಂಗಳೂರು : ಶಬರಿಮಲೆಗೆ ರಾಜಹಂಸ ಬಸ್ ಸೇವೆ
ಬೆಂಗಳೂರು, ಡಿ. 6 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಪಂಪಾಗೆ ರಾಜಹಂಸ ಬಸ್ ಸೇವೆಯನ್ನು ಆರಂಭಿಸುತ್ತಿದೆ. ಡಿ. 12 ರಿಂದ ಜ. 12ರವರೆಗೆ ಈ ಬಸ್ ಸಂಚರಿಸಲಿದೆ.
ಎರಡು ತಿಂಗಳ ಪವಿತ್ರ ಶಬರಿಮಲೆ ಯಾತ್ರೆ ಈಗಾಗಲೇ ಆರಂಭಗೊಂಡಿದ್ದು, ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ತೆರಳುತ್ತಿದ್ದಾರೆ. ಆದ್ದರಿಂದ ಕೆಎಸ್ಆರ್ಟಿಸಿ ಭಕ್ತರ ಅನುಕೂಲಕ್ಕಾಗಿ ರಾಜಹಂಸ ಬಸ್ ಸೇವೆಯನ್ನು ಆರಂಭಿಸಲಿದೆ. [ಸ್ವಾಮಿಯೇ ಅಯ್ಯಪ್ಪ, ಭಕ್ತಿ ಪರವಶತೆಯ ಮಹಾಪೂರ]

ಬಸ್ ಮಾರ್ಗ : ಡಿ. 12 ರಿಂದ ಜ. 12ರವರೆಗೆ ಈ ಬಸ್ ಸಂಚರಿಸಲಿದ್ದು, ಮೈಸೂರು, ಗುಂಡ್ಲುಪೇಟೆ, ಕ್ಯಾಲಿಕಟ್, ಗುರುವಾಯೂರು, ಕೊಟ್ಟಾಯಂ ಮಾರ್ಗವಾಗಿ ಪಂಪಾಗೆ ತೆರಳಲಿದೆ. [ಚಿತ್ರಗಳಲ್ಲಿː ಶಬರಿಮಲೆಗೆ ಭಕ್ತರ ತಂಡ]
ಸಮಯ : ರಾಜಹಂಸ ಬಸ್ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಿಂದ ಹೊರಡಲಿದ್ದು, ಮರುದಿನ ಬೆಳಗ್ಗೆ 8.30ಕ್ಕೆ ಪಂಪಾ ತಲುಪಲಿದೆ. ಅಲ್ಲಿಂದ ಮಧ್ಯಾಹ್ನ 3ಕ್ಕೆ ಹೊರಡುವ ಬಸ್ ಮರುದಿನ ಬೆಳಗ್ಗೆ 10ಕ್ಕೆ ಬೆಂಗಳೂರಿಗೆ ಮರಳಲಿದೆ ಅಂದಹಾಗೆ ಬಸ್ ಪ್ರಯಾಣ ದರ 825. ರೂ ಗಳಾಗಿದೆ. [ಟಿಕೆಟ್ ಬುಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ]
20 ತಾಸು ಸಂಚಾರ ಬಂದ್ : ಕಾಸರಗೋಡು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಸಮೀಪದ ಗುರುವಾರ ಮಧ್ಯರಾತ್ರಿ ಗ್ಯಾಸ್ ಟ್ಯಾಂಕರ್ವೊಂದು ಅಪಘಾತಕ್ಕೀಡಾದ ಪರಿಣಾಮ ಸಣ್ಣ ಪ್ರಮಾಣದಲ್ಲಿ ಅನಿಲ ಸೋರಿಕೆ ಉಂಟಾಗಿತ್ತು. ಇದರಿಂದಾಗ ಗುರುವಾರ ಮಧ್ಯರಾತ್ರಿಯಿಂದ ಶುಕ್ರವಾರ ರಾತ್ರಿ 7 ಗಂಟೆ ವರೆಗೆ ಸುಮಾರು 20 ತಾಸುಗಳ ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಟ್ಯಾಂಕರ್ ಬಿದ್ದ ಸ್ಥಳದ ಪಕ್ಕದಲ್ಲೇ ರೈಲು ಹಳಿ ಇರುವುದರಿಂದ ಈ ಮಾರ್ಗವಾಗಿ ಸಾಗುವ ಎಲ್ಲ ರೈಲು ಸಂಚಾರವನ್ನೂ ಸ್ಥಗಿತಗೊಳಿಸಲಾಗಿತ್ತು.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications