Deepavali: ಪಟಾಕಿ ಸಿಡಿಸುವಾಗ ಜೋಪಾನ! ಗಾಯಗಳಾದ್ರೆ ಕೂಡಲೇ ಈ ಕೆಲಸ ಮಾಡಿ
ದೀಪಾವಳಿ ಬೆಳಕಿನ ಹಬ್ಬವಾದರೆ, ಪ್ರತಿ ವರ್ಷ ಹಲವರ ಬದುಕಲ್ಲಿ ಕತ್ತಲನ್ನು ಸಹ ಆವರಿಸುತ್ತದೆ. ಹಬ್ಬದ ಸಂಭ್ರಮದಲ್ಲ ಸಿಡಿಸೋ ಪಟಾಕಿಯಿಂದ ಸಣ್ಣ ಮಕ್ಕಳು ಗಾಯಗೊಳ್ಳುವುದು ಸೇರಿದಂತೆ ಹಲವು ದುರ್ಘಟನೆಗಳು ಸಂಭವಿಸುತ್ತಲೇ ಇವೆ. ಈ ಬಾರಿ ಹಬ್ಬಕ್ಕೂ ಮುನ್ನವೇ ಬೆಂಗಳೂರಿನ ಮಿಂಟೋ ಕಣ್ಣಿನ ಆಸ್ಪತ್ರೆ ಸಜ್ಜಾಗಿದೆ. ಪಟಾಕಿ ಸಿಡಿತದಿಂದ ಬರುವವರಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ಕೂಡ ಮೀಸಲಿಟ್ಟಿದೆ. ಇನ್ನು ದಿನದ 24 ಗಂಟೆಗಳು ಸಹ ಇಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಇರಲಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಕಣ್ಣಿನ ಸಮಸ್ಯೆಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತವೆ. ಈ ಹಿನ್ನೆಲೆಯಲ್ಲಿ ಕಣ್ಣಿನ ಚಿಕಿತ್ಸೆ ನೀಡಲೆಂದೇ ಮಿಂಟೋ ಆಸ್ಪತ್ರೆ ಪ್ರತಿ ವರ್ಷ ವಿಶೇಷ ಸೇವೆ ಒದಗಿಸುತ್ತದೆ. ಅದರಂತೆ ಈ ಬಾರಿಯ ದೀಪಾವಳಿಗೂ ಮಿಂಟೋ ಸಜ್ಜಾಗಿದೆ. ಕಣ್ಣಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ಮೀಸಲಿಟ್ಟಿದೆ. ಒಂದು ವೇಳೆ ಪಟಾಕಿ ಸಿಡಿತದಿಂದ ಏನಾದರೂ ಅವಘಡಗಳು ಸಂಭವಿಸಿದರೆ, ಕೂಡಲೇ ಮಿಂಟೋಗೆ ಧಾವಿಸುವಂತೆ ತಿಳಿಸಿದೆ.

ಮೊದಲು ದೀಪಾವಳಿ ವೇಳೆ ಎಂದಿನಂತೆ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಬಾರಿ ಪ್ರತ್ಯೇಕ ವಾರ್ಡ್ ಅನ್ನೇ ದೀಪಾವಳಿ ಸಂದರ್ಭದಲ್ಲಿ ಮಿಂಟೋ ತೆರೆದಿದೆ. ಪಟಾಕಿ ಸಿಡಿತದಿಂದ ಕೇವಲ ಕಣ್ಣಿಗೆ ಮಾತ್ರ ಗಾಯಗಳಾಗುವುದಿಲ್ಲ. ದೇಹದ ಬೇರೆ ಭಾಗಗಳಿಗೂ ಅಪಾಯ ಎದುರಾಗುತ್ತವೆ.
ಹಾಗಾಗಿ ಒಂದು ವೇಳೆ ಕಣ್ಣಿನ ಸಮಸ್ಯೆ ಜೊತೆಗೆ ಸುಟ್ಟಗಾಯಗಳಿಂದ ಬರುವವರಿಗೆ ತಕ್ಷಣವೇ ಅವರನ್ನು ಸಮೀಪದ ವಿಕ್ಟೋರಿಯಾ ಬರ್ನಿಂಗ್ ವಾರ್ಡ್ಗೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿಕೊಂಡಿದೆ. ಇನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಸುಟ್ಟಗಾಯಗಳ ಚಿಕಿತ್ಸೆಗಾಗಿ ಪ್ರತ್ಯೇಕ ವಾರ್ಡ್ ತೆರೆಯಲಾಗಿದೆ.

ಈಗಾಗಲೇ ಕೇಸ್ ವರದಿ!
ಪ್ರತಿ ವರ್ಷ ದೀಪಾವಳಿ ಹಬ್ಬದಂದು ಪಟಾಕಿ ಸಿಡಿಸಿಕೊಂಡು ಕಣ್ಣಿಗೆ ಗಾಯ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿರುತ್ತಿತ್ತು. ಈ ಬಾರಿ ಹಬ್ಬಕ್ಕೂ ಮುನ್ನವೇ ಬೆಂಗಳೂರಿನಲ್ಲಿ ಪಟಾಕಿ ದುರಂತ ನಡೆದುಹೋಗಿದೆ. ಮಿಂಟೋದಲ್ಲಿ ಪಟಾಕಿ ಸಿಡಿತದ ಮೊದಲ ಪ್ರಕರಣ ಕೂಡ ವರದಿಯಾಗಿದೆ. ಬೆಂಗಳೂರಿನ 18 ವರ್ಷದ ಬಾಲಕನೊಬ್ಬ ಪಟಾಕಿಯಿಂದ ಕಣ್ಣಿಗೆ ಹಾನಿ ಮಾಡಿಕೊಂಡಿದ್ದಾನೆ. ಆತನನ್ನು ಮಿಂಟೋ ಆಸ್ಪತ್ರೆಗೆ ದಾಖಲಿಸಿ, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಕ್ಕಳು, ಯುವಕರು ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡಲು ಮಿಂಟೋ ಅಲರ್ಟ್ ಆಗಿದೆ.
ಇನ್ನು ಈ ಬಾರಿ ಸರ್ಕಾರ ಕೂಡ ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಮಾತ್ರವೇ ಸಿಡಿಸುವಂತೆ ಖಡಕ್ ಸೂಚನೆ ನೀಡಿದೆ. ಇದಕ್ಕಾಗಿ ಪಟಾಕಿ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಹಸಿರು ಪಟಾಕಿ ಹೌದಾ, ಅಲ್ಲವಾ ಎಂಬುದನ್ನು ಖಚಿತ ಪಡಿಸಿಕೊಳ್ಳುವುದು ಉತ್ತಮ. ಇನ್ನು ಪರವಾನಗಿ ಹೊಂದಿರುವ ಅಂಗಡಿಗಳಿಂದಲೇ ಪಟಾಕಿಗಳನ್ನು ಖರೀದಿಸಬೇಕು. ಸಾಧ್ಯವಾದಷ್ಟು ಚಿಕ್ಕಮಕ್ಕಳು ಪಟಾಕಿ ಹಚ್ಚದಂತೆ ನೋಡಿಕೊಳ್ಳಿ ಎಂದು ಪೋಷಕರಿಗೆ ಸಲಹೆ ನೀಡಿದೆ.

ಜನರ ಓಡಾಟ ಕಡಿಮೆ ಇರುವ ಹಾಗೂ ಮೈದಾನಗಳಲ್ಲಿ ಪಟಾಕಿ ಸಿಡಿಸಿ. ಹೆಚ್ಚಾಗಿ ವಾಹನಗಳನ್ನು ನಿಲ್ಲಿಸಿರುವ ಪ್ರದೇಶಗಳಲ್ಲಿ ಪಟಾಕಿ ಸಿಡಿಸಬಾರದು. ರಾತ್ರಿ 8 ಗಂಟೆಯಿಂದ 10 ಗಂಟೆಯೊಳಗೆ ಮಾತ್ರ ಪಟಾಕಿ ಸಿಡಿಸುವಂತೆ ಖಡಕ್ ಆದೇಶ ಮಾಡಲಾಗಿದೆ. ಒಂದು ವೇಳೆ ಈ ನಿಯಮ ಉಲ್ಲಂಘಿಸಿದ್ರೆ ಸುಪ್ರೀಂಕೋರ್ಟ್ ಆದೇಶದಂತೆ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದೆ. ಪಟಾಕಿ ಸಿಡಿಸುವಾಗ ಯಾವುದೇ ಅವಫಡಗಳು ಸಂಭವಿಸಿದರೆ, ಕೂಡಲೇ 112 ಹಾಗೂ 108ಕ್ಕೆ ಕರೆ ಮಾಡಬೇಕು. ಪೆಟ್ರೋಲ್ ಬಂಕ್, ಧಾರ್ಮಿಕ ಸ್ಥಳಗಳು, ವೃದ್ಧಾಶ್ರಮಗಳ ಬಳಿ ಪಟಾಕಿ ಸಿಡಿಸಬೇಡಿ ಎಂದು ಸಲಹೆ ನೀಡಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications