Get Updates
Get notified of breaking news, exclusive insights, and must-see stories!

Namma Metro: ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರತನ್‌ ಟಾಟಾ ಅವರಿಗೆ ವಿಶೇಷ ನಮನ-ವೈರಲ್‌

Namma Metro: ಭಾರತದ ಖ್ಯಾತ ಉದ್ಯಮಿ ರತನ್‌ ಟಾಟಾ (86) ಅವರ ನಿಧನದಿಂದ ಭಾರತದ ಉದ್ಯಮ ಕ್ಷೇತ್ರ ಮಂಕಾಗಿದೆ. ಇನ್ನು ಅವರ ನಿಧನಕ್ಕೆ ಬರೀ ಭಾರತ ಅಷ್ಟೇ ಅಲ್ಲದೆ, ವಿಶ್ವ ಮಟ್ಟದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಹಾಗೆಯೆ ಇದೀಗ ಬೆಂಗಳೂರಿನ ನಮ್ಮ ಮೆಟ್ರೋ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ವಿಶೇಷವಾಗಿ ನಮನ ಸಲ್ಲಿಸಿದೆ.

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ರಂಗೋಲಿಯಲ್ಲಿ ಮರೆಯಲಾಗದ ರತ್ನ ಮತ್ತು ಉದ್ಯಮಿ ಶ್ರೀ ದಿವಂಗತ ರತನ್ ಟಾಟಾ ಅವರ ಚಿತ್ರವನ್ನು ಬಿಡಿಸಿ ನಮ್ಮ ಮೆಟ್ರೋ ಅವರಿಗೆ ವಿಶೇಷ ನಮನ ಸಲ್ಲಿಸಿದೆ. ಇನ್ನೂ ಈ ಪೋಸ್ಟರ್‌ ಇದೀಗ ಸಾಮಾಜಿಕ ಜಾಲತಾನಲ್ಲಿ ಭಾರೀ ವೈರಲ್‌ ಆಗುತ್ತಿದೆ.

Special tribute to Ratan Tata At Bengaluru s Kempegowda Namma Metro station viral

ಕೆಂಪೇಗೌಡ ಮೆಟ್ರೋ ನಿಲ್ದಾಣಕ್ಕೆ ಬಂದತಹ ಪ್ರಯಾಣಿಕರು ಕೂಡ ರಂಗೋಲಿಯಲ್ಲಿ ಅರಳಿದ ಭಾರತದ ಖ್ಯಾತ ಉದ್ಯಮಿ ರತನ್‌ ಟಾಟಾ ಅವರಿಗೆ ಕೈಮುಗಿದು ಗೌರವ ಅರ್ಪಿಸುತ್ತಿದ್ದಾರೆ. ಅಲ್ಲದೆ, ಇದೇ ವೇಳೆ ಅವರು ಉದ್ಯಮ ಕ್ಷೇತ್ರಕ್ಕೆ ನೀಡಿದ ಅಪಾರ ಕೊಡುಗೆಗಳನ್ನು ನೆನೆಯುತ್ತಿದ್ದಾರೆ.

* ಸಿಎಂ ಸಿದ್ದರಾಮಯ್ಯ ಅವರು, ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ'ಎಂದು ತಮ್ಮ ಟ್ವೀಟ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

* ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡಿ, ರತನ್ ಟಾಟಾ ಅವರ ನಿಧನದ ಸುದ್ದಿ ಕೇಳಿ ನನಗೆ ಅತೀವ ದುಃಖವಾಗಿದೆ. ಲೋಕೋಪಕಾರಿ ಮತ್ತು ಕೈಗಾರಿಕೋದ್ಯಮಿಯಾಗಿ ಅವರ ಪರಂಪರೆಯು ಅಸಂಖ್ಯಾತ ಜೀವನ ಮತ್ತು ಸಮುದಾಯಗಳನ್ನು ಆಳವಾಗಿ ಪ್ರಭಾವಿಸಿದೆ. ಅವರ ದೂರದೃಷ್ಟಿ, ಸಹಾನುಭೂತಿ ಮತ್ತು ಸಾಮಾಜಿಕ ಕಾರಣಗಳಿಗಾಗಿ ಅಚಲವಾದ ಸಮರ್ಪಣೆ ಯಾವಾಗಲೂ ನೆನಪಿನಲ್ಲಿ ಉಳಿಯುತ್ತದೆ ಎಂದು ಬರೆದುಕೊಂಡಿದ್ದಾರೆ.

* ರತನ್ ಟಾಟಾ ಅವರ ನಿಧನ ಅತೀವ ದುಃಖದ ತಂದಿದ್ದು, ಭಾರತವು ಸಾಂಸ್ಥಿಕ ಬೆಳವಣಿಗೆಯನ್ನು ರಾಷ್ಟ್ರ ನಿರ್ಮಾಣದೊಂದಿಗೆ ಮತ್ತು ಶ್ರೇಷ್ಠತೆಯನ್ನು ನೀತಿಯೊಂದಿಗೆ ಸಂಯೋಜಿಸಿದ ಐಕಾನ್ ವ್ಯಕ್ತಿಯನ್ನು ಕಳೆದುಕೊಂಡಿದೆ. ಪದ್ಮವಿಭೂಷಣ ಮತ್ತು ಪದ್ಮಭೂಷಣ ಪುರಸ್ಕೃತರಾದ ಅವರು ಶ್ರೇಷ್ಠ ಟಾಟಾ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ದರು ಮತ್ತು ಹೆಚ್ಚು ಪ್ರಭಾವಶಾಲಿ ಜಾಗತಿಕ ಉಪಸ್ಥಿತಿಯನ್ನು ನೀಡಿದರು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್ ಮಾಡಿದ್ದಾರೆ.

* ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ, ರತನ್ ಟಾಟಾ ದೂರದೃಷ್ಟಿ ಹೊಂದಿದ ವ್ಯಕ್ತಿ. ಅವರು ವ್ಯಾಪಾರ ಮತ್ತು ಲೋಕೋಪಕಾರ ಎರಡರಲ್ಲೂ ಶಾಶ್ವತವಾದ ಗುರುತು ಬಿಟ್ಟಿದ್ದಾರೆ. ಅವರ ಕುಟುಂಬ ಮತ್ತು ಟಾಟಾ ಸಮುದಾಯಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

* ಗೌತಮ್ ಅದಾನಿ ಟ್ವೀಟ್‌ ಮಾಡಿ, ಭಾರತವು ಒಬ್ಬ ದೈತ್ಯನನ್ನು ಕಳೆದುಕೊಂಡಿದೆ. ಆಧುನಿಕ ಭಾರತದ ಹಾದಿಯನ್ನು ಮರು ವ್ಯಾಖ್ಯಾನಿಸಿದ ದಾರ್ಶನಿಕ. ರತನ್ ಟಾಟಾ ಅವರು ಕೇವಲ ವ್ಯಾಪಾರದ ನಾಯಕರಾಗಿರಲಿಲ್ಲ. ಅವರು ಸಮಗ್ರತೆ, ಸಹಾನುಭೂತಿ ಮತ್ತು ಹೆಚ್ಚಿನ ಒಳಿತಿಗಾಗಿ ಅಚಲವಾದ ಬದ್ಧತೆಯೊಂದಿಗೆ ಭಾರತದ ಆತ್ಮವನ್ನು ಸಾಕಾರಗೊಳಿಸಿದರು. ಅವರಂತಹ ದಂತಕಥೆಗಳು ಎಂದಿಗೂ ಮರೆಯಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+