ವಿಕಲಾಂಗ ಮಕ್ಕಳಲ್ಲಿ ವಿಶ್ವಾಸ ಮೂಡಿಸಿದ ಕ್ರೀಡಾಕೂಟ
ರಾಮನಗರ, ಡಿ. 3: ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆ ನಿಮಿತ್ತ ರಾಮನಗರದಲ್ಲಿ ಅಂಗವಿಕಲ ಮಕ್ಕಳಿಗೆ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಅಂಗವಿಕಲ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಕ್ಕಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ರಾಮನಗರದ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ವಿವಿಧ ಶಾಲೆಗಳ ಸುಮಾರು 300 ಅಂಗವಿಕಲ ಮಕ್ಕಳು ಭಾಗವಹಿಸಿದ್ದರು. ದಿನವಿಡೀ ತಮ್ಮ ಅಂಗವೈಕಲ್ಯ ಮರೆತು ಆಡಿದರು. ಶಿಕ್ಷಕರು, ಪಾಲಕರು ಹಾಗೂ ಅತಿಥಿಗಳು ಸೇರಿದಂತೆ ಇತರ ಮಕ್ಕಳು ಸುತ್ತಲೂ ನಿಂತು, ಚಪ್ಪಾಳೆ ತಟ್ಟಿ, ಕೇಕೆ ಹಾಕಿ ಹುರಿದುಂಬಿಸಿದ್ದು ಹೃದಯಸ್ಪರ್ಶಿಯಾಗಿತ್ತು.
ಕ್ರೀಡಾಕೂಟದ ಅಂತ್ಯದಲ್ಲಿ ಬಹುಮಾನ ಪಡೆದ ವಿಜೇತ ಮಕ್ಕಳಲ್ಲಿ ಸಾರ್ಥಕ ಭಾವ ಮೂಡಿತ್ತು. ಈ ಮೂಲಕ ಅಂಗವಿಕಲ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಉದ್ದೇಶ ಸಫಲವಾಗಿತ್ತು.
ಸ್ಪರ್ಧೆಯ ಬಹುಮಾನವನ್ನು ಬಹುರಾಷ್ಟ್ರೀಯ ಕಂಪನಿಯಾದ ಟೊಯೊಟಾ ಬೊಶೊಕು ಆಟೊಮೋಟಿವ್ ಇಂಡಿಯಾ ಪ್ರೈ.ಲಿ. (ಟಿಬಿಎಐಪಿಎಲ್) ಕಂಪನಿಯು ಪ್ರಾಯೋಜಿಸಿತ್ತು. ಬಹುಮಾನದ ಜೊತೆಗೆ ಭಾಗವಹಿಸಿದ ಎಲ್ಲ ಮಕ್ಕಳಿಗೂ ಕಂಪನಿ ವತಿಯಿಂದ ಗಿಫ್ಟ್ ನೀಡಲಾಯಿತು. ಕಂಪನಿಯ ಉಪ ವ್ಯವಸ್ಥಾಪಕ ವಿವೇಕ ಕೇಲ್ಕಾರ್, ಡಿಡಿಪಿಐ ಸುಮಂಗಲಾ ದೇವಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಕ್ಕಳ ಆಟದ ಪರಿಯನ್ನು ನೋಡಿ.

ತಪ್ಪದ ಗುರಿ
ಬಾಲಕ ಕಣ್ಮುಚ್ಚಿ ಹೊಡೆದರೂ ಗುರಿ ತಪ್ಪಲಿಲ್ಲ.

ನನ್ನ ಗುರಿ
ಕಣ್ಣು ಕಟ್ಟಿಕೊಂಡು ಮಡಕೆ ಒಡೆಯಲು ಸನ್ನದ್ಧನಾದ ಬಾಲಕ.

ಎಸೆದಿದ್ದು ಎಲ್ಲೋಯ್ತು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕನೋರ್ವ ತೋರಿದ ಪ್ರತಿಕ್ರಿಯೆ.

ಹೋಗ್ತಿದೆ ನೋಡು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕನೋರ್ವ ತೋರಿದ ಭಾವೋದ್ವೇಗ.

ಗುರಿ ಮುಟ್ತು
ಬಾಲಕನೋರ್ವ ಪ್ರದರ್ಶನ ತೋರಿದ ನಂತರ ಪ್ರಿತಿಕ್ರಿಯಿಸಿದ ರೀತಿ.

ನನ್ನ ಗುರಿ
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ತನ್ನ ಗುರಿ ನೋಡುತ್ತಿರುವುದು.

ನಾನೂ ಓಡ್ತೇನೆ
ಓಡುತ್ತಿರುವ ಮಕ್ಕಳನ್ನು ಹುರಿದುಂಬಿಸುತ್ತಿರುವ ವೀಕ್ಷಕರು.

ನಾವೆಲ್ಲ ಒಂದು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಮಕ್ಕಳು ಕೊನೆಯಲ್ಲಿ ಒಂದಾಗಿ ಕುಳಿತು ಛಾಯಾಚಿತ್ರಕ್ಕೆ ಕೊಟ್ಟ ಫೋಜು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications