ವಿಕಲಾಂಗ ಮಕ್ಕಳಲ್ಲಿ ವಿಶ್ವಾಸ ಮೂಡಿಸಿದ ಕ್ರೀಡಾಕೂಟ
ರಾಮನಗರ, ಡಿ. 3: ಅಂತಾರಾಷ್ಟ್ರೀಯ ಅಂಗವಿಕಲರ ದಿನಾಚರಣೆ ನಿಮಿತ್ತ ರಾಮನಗರದಲ್ಲಿ ಅಂಗವಿಕಲ ಮಕ್ಕಳಿಗೆ ತಾಲೂಕು ಮಟ್ಟದ ವಾರ್ಷಿಕ ಕ್ರೀಡಾಕೂಟ ಆಯೋಜಿಸಲಾಗಿತ್ತು. ಅಂಗವಿಕಲ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಮಕ್ಕಳು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ರಾಮನಗರದ ಸರ್ಕಾರಿ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ವಿವಿಧ ಶಾಲೆಗಳ ಸುಮಾರು 300 ಅಂಗವಿಕಲ ಮಕ್ಕಳು ಭಾಗವಹಿಸಿದ್ದರು. ದಿನವಿಡೀ ತಮ್ಮ ಅಂಗವೈಕಲ್ಯ ಮರೆತು ಆಡಿದರು. ಶಿಕ್ಷಕರು, ಪಾಲಕರು ಹಾಗೂ ಅತಿಥಿಗಳು ಸೇರಿದಂತೆ ಇತರ ಮಕ್ಕಳು ಸುತ್ತಲೂ ನಿಂತು, ಚಪ್ಪಾಳೆ ತಟ್ಟಿ, ಕೇಕೆ ಹಾಕಿ ಹುರಿದುಂಬಿಸಿದ್ದು ಹೃದಯಸ್ಪರ್ಶಿಯಾಗಿತ್ತು.
ಕ್ರೀಡಾಕೂಟದ ಅಂತ್ಯದಲ್ಲಿ ಬಹುಮಾನ ಪಡೆದ ವಿಜೇತ ಮಕ್ಕಳಲ್ಲಿ ಸಾರ್ಥಕ ಭಾವ ಮೂಡಿತ್ತು. ಈ ಮೂಲಕ ಅಂಗವಿಕಲ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸುವ ಉದ್ದೇಶ ಸಫಲವಾಗಿತ್ತು.
ಸ್ಪರ್ಧೆಯ ಬಹುಮಾನವನ್ನು ಬಹುರಾಷ್ಟ್ರೀಯ ಕಂಪನಿಯಾದ ಟೊಯೊಟಾ ಬೊಶೊಕು ಆಟೊಮೋಟಿವ್ ಇಂಡಿಯಾ ಪ್ರೈ.ಲಿ. (ಟಿಬಿಎಐಪಿಎಲ್) ಕಂಪನಿಯು ಪ್ರಾಯೋಜಿಸಿತ್ತು. ಬಹುಮಾನದ ಜೊತೆಗೆ ಭಾಗವಹಿಸಿದ ಎಲ್ಲ ಮಕ್ಕಳಿಗೂ ಕಂಪನಿ ವತಿಯಿಂದ ಗಿಫ್ಟ್ ನೀಡಲಾಯಿತು. ಕಂಪನಿಯ ಉಪ ವ್ಯವಸ್ಥಾಪಕ ವಿವೇಕ ಕೇಲ್ಕಾರ್, ಡಿಡಿಪಿಐ ಸುಮಂಗಲಾ ದೇವಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.
ಮಕ್ಕಳ ಆಟದ ಪರಿಯನ್ನು ನೋಡಿ.

ತಪ್ಪದ ಗುರಿ
ಬಾಲಕ ಕಣ್ಮುಚ್ಚಿ ಹೊಡೆದರೂ ಗುರಿ ತಪ್ಪಲಿಲ್ಲ.

ನನ್ನ ಗುರಿ
ಕಣ್ಣು ಕಟ್ಟಿಕೊಂಡು ಮಡಕೆ ಒಡೆಯಲು ಸನ್ನದ್ಧನಾದ ಬಾಲಕ.

ಎಸೆದಿದ್ದು ಎಲ್ಲೋಯ್ತು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕನೋರ್ವ ತೋರಿದ ಪ್ರತಿಕ್ರಿಯೆ.

ಹೋಗ್ತಿದೆ ನೋಡು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕನೋರ್ವ ತೋರಿದ ಭಾವೋದ್ವೇಗ.

ಗುರಿ ಮುಟ್ತು
ಬಾಲಕನೋರ್ವ ಪ್ರದರ್ಶನ ತೋರಿದ ನಂತರ ಪ್ರಿತಿಕ್ರಿಯಿಸಿದ ರೀತಿ.

ನನ್ನ ಗುರಿ
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಬಾಲಕ ತನ್ನ ಗುರಿ ನೋಡುತ್ತಿರುವುದು.

ನಾನೂ ಓಡ್ತೇನೆ
ಓಡುತ್ತಿರುವ ಮಕ್ಕಳನ್ನು ಹುರಿದುಂಬಿಸುತ್ತಿರುವ ವೀಕ್ಷಕರು.

ನಾವೆಲ್ಲ ಒಂದು
ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಮಕ್ಕಳು ಕೊನೆಯಲ್ಲಿ ಒಂದಾಗಿ ಕುಳಿತು ಛಾಯಾಚಿತ್ರಕ್ಕೆ ಕೊಟ್ಟ ಫೋಜು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications