ಕೆಜೆ ಜಾರ್ಜ್ ವಿರುದ್ಧ ಹಿರೇಮಠ್ ಕೊಟ್ಟ ದಾಖಲೆಗಳೇನು?
ಬೆಂಗಳೂರು, ಏ. 22 : 'ಎಸ್.ಆರ್.ಹಿರೇಮಠ ಅವರು ತಮ್ಮ ವಿರುದ್ಧದ ಆರೋಪಗಳಿಗೆ ದಾಖಲೆ ನೀಡಲಿ' ಎಂದು ಸವಾಲು ಹಾಕಿದ್ದ ಗೃಹ ಸಚಿವ ಕೆಜೆ ಜಾರ್ಜ್ ಅವರಿಗೆ ಹಿರೇಮಠ ಅವರು ದಾಖಲೆಗಳ ಮೂಲಕವೇ ಉತ್ತರ ನೀಡಿದ್ದಾರೆ. ಬಿಡಿಎ ನಿವೇಶನ ಹೊಂದಿದ್ದರೂ ವೈಯಾಲಿಕಾವಲ್ ಹೌಸಿಂಗ್ ಸೊಸೈಟಿಯಿಂದ ಜಾರ್ಜ್ ನಿವೇಶನ ಪಡೆದಿದ್ದಾರೆ ಎಂದು ಆರೋಪಿಸಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದ ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರು, ಜಾರ್ಜ್ ವಿರುದ್ಧದ ದಾಖಲೆಗಳನ್ನು ಬಿಡುಗಡೆ ಮಾಡಿದರು. ಬೇನಾಮಿ ಹೆಸರಿನಲ್ಲಿ ಗೃಹ ಸಚಿವರು ನಿವೇಶನ ಪಡೆದಿದ್ದಾರೆ ಎಂದು ದೂರಿದರು.[ಸದಾನಂದ ಗೌಡರನ್ನು ಸಂಪುಟದಿಂದ ಕೈಬಿಡಿ : ಹಿರೇಮಠ್]

ಹಿರೇಮಠ ಅವರು ಹೇಳಿದ್ದಿಷ್ಟು : ಕೆಜೆ ಜಾರ್ಜ್ ಅವರು ಬೆಂಗಳೂರಿನಲ್ಲಿ ಬಿಡಿಎಯಿಂದ ನಿವೇಶನ ಪಡೆದಿದ್ದಾರೆ. ಆದರೆ, ಅದನ್ನು ಮರೆಮಾಚಿ ಪತ್ನಿ ಸುಜಾ ಜಾರ್ಜ್ ಮತ್ತು ಸಹೋದರ ಕೆ.ಜೆ.ಕುರುವಿಲ್ಲಾ ಅವರ ಹೆಸರಿನಲ್ಲಿ ವೈಯಾಲಿಕಾವಲ್ ಹೌಸಿಂಗ್ ಸೊಸೈಟಿಯಿಂದ ನಿವೇಶನ ಪಡೆದಿದ್ದಾರೆ. [ಸಾಮಾನ್ಯ ಜನರ ಶಕ್ತಿಯೇ ನನಗೆ ಸ್ಫೂರ್ತಿ : ಹಿರೇಮಠ]
ಬೇನಾಮಿ ಹೆಸರಿನಲ್ಲಿ ಖರೀದಿ : 2004ರಲ್ಲಿ ವೈಯಾಲಿಕಾವಲ್ ಹೌಸಿಂಗ್ ಸೊಸೈಟಿಯಿಂದ 8.40 ಲಕ್ಷ ರೂ.ಗೆ ನಾಗವಾರ ಬಳಿ ಒಂದು ನಿವೇಶನ ಖರೀದಿ ಮಾಡಿದ್ದರು. ವಿಧಾನಸಭೆ ಚುನಾವಣೆ ಘೋಷಣೆಯಾದ ನಂತರ ಮಾರ್ಚ್ 21, 2013 ರಂದು ಆ ನಿವೇಶನವನ್ನು ಸೊಸೈಟಿಗೆ ಅಷ್ಟೇ ಹಣಕ್ಕೆ ವಾಪಸ್ ನೀಡಿದ್ದಾರೆ.
4 ತಿಂಗಳ ನಂತರ ಇಸ್ಮಾಯಿಲ್ ಷರೀಫ್ ಎನ್ನುವವರು ಈ ನಿವೇಶನವನ್ನು ಖರೀದಿಸಿದ್ದಾರೆ. ಇಸ್ಮಾಯಿಲ್ ಷರೀಫ್ ಅವರ ಹೆಸರಿನಲ್ಲಿ ಬೇನಾಮಿಯಾಗಿ ಜಾರ್ಜ್ ನಿವೇಶನ ಖರೀದಿ ಮಾಡಿದ್ದಾರೆ ಎಂಬುದು ಹಿರೇಮಠ್ ಅವರ ಆರೋಪವಾಗಿದೆ.
ವೈಯಾಲಿಕಾವಲ್ ಹೌಸಿಂಗ್ ಸೊಸೈಟಿ 9 ವರ್ಷಗಳ ಬಳಿಕ ಅಷ್ಟೇ ಹಣಕ್ಕೆ ನಿವೇಶನವನ್ನು ವಾಪಸ್ ಪಡೆಯುತ್ತದೆ ಮತ್ತು ಅದೇ ನಂಬರ್ ಸೈಟ್ ಅನ್ನು ಅಷ್ಟೇ ಹಣಕ್ಕೆ ಪುನಃ ಇಸ್ಮಾಯಿಲ್ ಷರೀಫ್ ಎನ್ನುವವರಿಗೆ ಮಾರಾಟ ಮಾಡುತ್ತದೆ ಎಂದು ಹಿರೇಮಠ್ ದೂರಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications