ಕೃಷ್ಣಾ ಎನಬಾರದೆ.. ಕೃಷ್ಣನ ನೆನೆದರೆ ಕಷ್ಟ ಒಂದಿಷ್ಟಿಲ್ಲ...
ಬೆಂಗಳೂರು, ಆಗಸ್ಟ್, 25: ನಗರದೆಲ್ಲೆಡೆ ಕೃಷ್ಣಜನ್ಮಾಷ್ಟಮಿ ಸಂಭ್ರಮ ಮನೆ ಮಾಡಿದೆ. ವಿದ್ಯಾಪೀಠ ಮತ್ತು ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ಅದ್ದೂರಿ ಶ್ರೀಕೃಷ್ಣಲೀಲೋತ್ಸವ ನಡೆಯುತ್ತಿದೆ.
ಮುಂಜಾನೆಯೇ ಮಡಿಯಲ್ಲಿ ಆಗಮಮಿಸಿದ ಭಕ್ತರು ಕೃಷ್ಣ ನಾಮ ಸ್ಮರಣೆಯಲ್ಲಿ ತೊಡಗಿಕೊಂಡಿದ್ದರು. ವಿದ್ಯಾಪೀಠದಲ್ಲಿ ಶ್ರೀ ಕೃಷ್ಣನ ನಾಮಸ್ಮರಣೆ ನಿರಂತರಗಾಗಿ ನಡೆದಿತ್ತು.[ಈ ಮುಸ್ಲಿಂ ಕುಟುಂಬದಲ್ಲಿ 30ನೇ ಕೃಷ್ಣ ಜನ್ಮಾಷ್ಟಮಿ ಸಂಭ್ರಮ]
ಬೆಂಗಳೂರಲ್ಲಿ ಕೃಷ್ಣಜನ್ಮಾಷ್ಟಮಿ ಸಂಭ್ರಮ
ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ. ಗೋವರ್ಧನಗಿರಿಯನ್ನು ಹೂವಿನಿಂದ ಅಲಂಕಾರ ಮಾಡಲಾಗಿತ್ತು. ಭಜನೆ ಮತ್ತು ಕೃಷ್ಣ ನಾಮ ಸ್ಮರಣೆ ಗೋವರ್ಧನ ಗಿರಿಯಲ್ಲಿ ನಡೆದೇ ಇತ್ತು. ಶ್ರೀಗೋವರ್ಧನಗಿರಿಯಲ್ಲಿ ಶ್ರೀ ಶುಕ್ರವಾರ (ಆಗಸ್ಟ್ 26)ರಂದು ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಮಾರುಕಟ್ಟೆಗಳಲ್ಲಿ ಸಂಪಿಗೆ ಹೂವಿನ ಘಮ ಮನೆ ಮಾಡಿತ್ತು.[ಚಿತ್ರಗಳು:ಕೃಷ್ಣ ಜನ್ಮಾಷ್ಟಮಿ ವಿಶೇಷ ದೇಶದ ವಿವಿಧೆಡೆಗಳಲ್ಲಿ ಸಂಭ್ರಮ]

ಸಹಸ್ರನಾಮ ಪಠಣ
ಬೆಂಗಳೂರಿನ ವಿದ್ಯಾಪೀಠದಲ್ಲಿ ಮುಂಜಾನೆಯಿಂದಲೇ ವಿಷ್ಣು ಸಹಸ್ರನಾಮ ಪಠಣ, ಕೋಟಿ ಅರ್ಚನೆ ಆರಂಭವಾಗಿತ್ತು.

ಪರಮಾತ್ಮನ ಧ್ಯಾನ
ವಿದ್ಯಾಪೀಠದಲ್ಲಿ ಸೇರಿದ್ದ ಭಕ್ತ ಗಣ ಶ್ರೀಕೃಷ್ಣನ ಆರಾಧನೆಯಲ್ಲಿ ನಿರತರಾಗಿತ್ತು.

ವಿಶೇಷ ಅಲಂಕಾರ
ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ಶ್ರೀ ಕೃಷ್ಣನಿಗೆ ವಿಶೇಷ ಅಲಂಕಾರ.

ಭಜನೆ - ಆರಾಧನೆ
ಮಹಿಳೆಯರಿಂದ ಶ್ರೀಗೋವರ್ಧನಗಿರಿಯಲ್ಲಿ ಶ್ರೀ ಕೃಷ್ಣ ನಾಮ ಸ್ಮರಣೆ- ಭಜನೆ.

ಹೂವಿನ ಅಲಂಕಾರ
ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ಎರಡು ದಿನ ಕಾಲ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ನಡೆಯಲಿದ್ದು ಗಿರಿಯನ್ನು ಹೂಗಳಿಂದ ಅಲಂಕಾರ ಮಾಡಲಾಗಿದೆ.

ಕೃಷ್ಣನ ದರ್ಶನಕ್ಕೆ ಬಂದ ಬಸವ
ಬಸವನಗುಡಿಯ ಗೋವರ್ಧನ ಗಿರಿ ಎದುರಿನಲ್ಲಿ ದರ್ಶನ ನೀಡಿದ ಬಸವ.

ಗಿರಿನಗರ
ಬೆಂಗಳೂರಿನ ಗಿರಿನಗರದ ಶ್ರೀ ರಾಮಚಂದ್ರಾಪುರ ಮಠದಲ್ಲಿ ಜನ್ಮಾಷ್ಟಮಿ ನಿಮಿತ್ತ ವಿವಿಧ ಸ್ಪರ್ಧೆಗಳು ನಡೆದವು.

ವ್ಯಾಪಾರ ಜೋರು
ಕೃಷ್ಣ ಜನ್ಮಾಷ್ಟಮಿ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೂವು ಹಣ್ಣಿನ ವ್ಯಾಪಾರ-ವಹಿವಾಟು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications