ಬೆಂಗಳೂರಲ್ಲಿ ವಿಟ್ಲಪಿಂಡಿ ಉತ್ಸವದ ಸಂಭ್ರಮ ಹೇಗಿತ್ತು?
ಬೆಂಗಳೂರು, ಆಗಸ್ಟ್, 26: " ಕೃಷ್ಣಾ.. ಕೃಷ್ಣಾ.. ಗೋವಿಂದಾ.. ಗೋವಿಂದಾ,,," ಘೋಷಣೆಗಳು ಬೆಂಗಳೂರಿನಲ್ಲಿ ಶುಕ್ರವಾರ ಮೊಳಗಿದವು.
ಗೋವರ್ಧನಗಿರಿ ಶಾಖಾಮಠದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಉಡುಪಿ ಅಷ್ಟ ಮಠಗಳದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.[ಉಡುಪಿ ಕೃಷ್ಣ ಮಠದಲ್ಲಿ 30 ಸಾವಿರ ಮಂದಿಗೆ ಅನ್ನ ಸಂತರ್ಪಣೆ]
ವಿದ್ಯಾಪೀಠ ಮತ್ತು ಬಸವನಗುಡಿಯ ಶ್ರೀಗೋವರ್ಧನಗಿರಿಯಲ್ಲಿ ವಿಟ್ಲಪಿಂಡಿ ಉತ್ಸವ ನಡೆಯಿತು. ಬಸವನಗುಡಿಯ ಶ್ರೀಗೋವರ್ಧನಗಿರಿಯಿಂದ ಹೊರಟ ಮೆರವಣಿಗೆ ರಾಮಕೃಷ್ಣ ಆಶ್ರಮದ ವರೆಗೆ ತೆರಳಿ ಹಿಂದಕ್ಕೆ ಬಂದರೆ, ವಿದ್ಯಾಪೀಠದಿಂದ ಹೊರಟ ಮೆರವಣಿಗೆ ವಿವೇಕಾನಂದ ನಗರ ಬಸ್ ನಿಲ್ದಾಣದವರೆಗೆ ತೆರಳಿ ಪೀಠಕ್ಕೆ ಹಿಂದಿರುಗಿತು.[ಕೃಷ್ಣಾ ಎನಬಾರದೆ.. ಕೃಷ್ಣನ ನೆನೆದರೆ ಕಷ್ಟ ಒಂದಿಷ್ಟಿಲ್ಲ...]
ಶ್ರೀಕೃಷ್ಣನ ಮೂರ್ತಿಯನ್ನು ರಥದಲ್ಲಿ ಇರಿಸಿ ಮೆರವಣಿಗೆಯಲ್ಲಿ ಸಾವಿರಾರು ಭಕ್ತರು ಹೆಜ್ಜೆ ಹಾಕಿದರು. ಹುಲಿ ವೇಷ, ಬಾಲ ಕೃಷ್ಣ ವೇಷದಲ್ಲಿ ಮಿಂಚಿದ ಮಕ್ಕಳು, ಮೆರವಣಿಗೆ, ಕುಡಿಕೆ ಒಡೆಯುವ ಸಂಭ್ರಮ, ಡೊಳ್ಳು ಕುಣಿತ.. ಬೆಂಗಳೂರಿನ ವಿಟ್ಲಪಿಂಡಿ ಉತ್ಸವದ ಸಂಭ್ರಮವನ್ನು ನೀವು ಕಣ್ಣು ತುಂಬಿಕೊಂಡು ಬನ್ನಿ...

ಮೆರವಣಿಗೆ ಸಂಭ್ರಮ
ವಿದ್ಯಾಪೀಠದ ಸಮೀಪ ಮೆರವಣಿಗೆ ಸಂಭ್ರಮದಲ್ಲಿ ಭಾಗವಹಿಸಿದ್ದ ಅಪಾರ ಜನಸ್ತೋಮ.

ಬಸವನಗುಡಿ
ಗೋವರ್ಧನಗಿರಿಯಿಂದ ಹೊರಟ ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಮಹಿಳೆಯರು.

ಗೋವಿಂದಾ.. ಗೋವಿಂದಾ..
ವಿದ್ಯಾಪೀಠಕ್ಕೆ ಹಿಂದಿರುಗಿದ ಮೆರವಣಿಗೆಯಲ್ಲಿ ಗೋವಿಂದಾ.. ಗೋವಿಂದಾ ... ಸ್ಮರಣೆ ಮೊಳಗಿತು.

ಯಕ್ಷಗಾನ ವೇಷಧಾರಿಗಳು
ಶ್ರೀ ಕೃಷ್ಣನ ಮೆರವಣಿಗೆ, ಕೃಷ್ಣಲೀಲೋತ್ಸವದಲ್ಲಿ ಗಮನ ಸೆಳೆದ ಯಕ್ಷಗಾನ ವೇಷಧಾರಿಗಳು.

ಹೆಜ್ಜೆ ಹಾಕಿದ ಸ್ವಾಮೀಜಿ
ಗೋವರ್ಧನಗಿರಿ ಶಾಖಾಮಠದಲ್ಲಿ ಚಾತುರ್ಮಾಸ್ಯ ವೃತದಲ್ಲಿರುವ ಉಡುಪಿ ಅಷ್ಟ ಮಠಗಳದ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

ಹುಲಿವೇಷ
ಹುಲಿವೇಷದವರ ನೃತ್ಯ ಸಾಧನೆಯನ್ನು ಕಣ್ಣು ತುಂಬಿಕೊಳ್ಳಿ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications