ಬಸವನಗುಡಿಯಲ್ಲಿ ಕೃಷ್ಣ ಜನ್ಮಾಷ್ಟಮಿ, ಲೀಲೋತ್ಸವ
ಬೆಂಗಳೂರು, ಸೆ, 03 : ಶ್ರಾವಣ ಮಾಸದಲ್ಲಿ ಆಚರಿಸಲ್ಪಡುವ ಮತ್ತೊಂದು ಪ್ರಮುಖ ಹಬ್ಬವೇ ಶ್ರೀ ಕೃಷ್ಣ ಜನ್ಮಾಷ್ಟಮಿ. ಕೃಷ್ಣನ ಪುಟಾಣಿ ಹೆಜ್ಜೆಗಳನ್ನು ನೆನಪಿಸುವ ಈ ಹಬ್ಬದ ಪ್ರಯುಕ್ತ ನಾಡಿನಾದ್ಯಂತ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿದ್ದು, ಭಕ್ತಾದಿಗಳು ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಗರದ ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಗೋವರ್ಧನ ಕ್ಷೇತ್ರದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಕೃಷ್ಣ ಲೀಲೋತ್ಸವವನ್ನು ಅದ್ದೂರಿಯಾಗಿ ನಡೆಸಲು ಎಲ್ಲಾ ಏರ್ಪಟುಗಳನ್ನು ಮಾಡಿಕೊಂಡಿದೆ.[World premier of 'ಕೃಷ್ಣಂ ವಂದೇ ಜಗದ್ಗುರುಂ...']

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಈ ಪ್ರಮುಖ ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಂಡಿದ್ದು, ಕೃಷ್ಣ ಜನ್ಮಾಷ್ಟಮಿ ಸೆಪ್ಟೆಂಬರ್ 5 ರ ಶನಿವಾರ ಮತ್ತು ಸೆಪ್ಟೆಂಬರ್ 6 ರ ಭಾನುವಾರ ಕೃಷ್ಣ ಲೀಲೋತ್ಸವ ನಡೆಯಲಿದೆ, ಅಲ್ಲದೇ 5 ರ ಶನಿವಾರ ಮುಂಜಾನೆ 6 ಗಂಟೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.
ಸೆಪ್ಟೆಂಬರ್ 5 ರ ಧಾರ್ಮಿಕ ಕಾರ್ಯಕ್ರಮಗಳು :
ಮಧ್ಯಾಹ್ನ 2.30 - ಎಂ. ಎಸ್ ಗಿರಿಧರ್ ಮತ್ತು ಬಳಗದಿಂದ ಗೋವರ್ಧನ ಸ್ಮರಣೆ
ಮಧ್ಯಾಹ್ನ 3.45 - ಎಂ.ಎಸ್ ಗಿರಿಧರ್ ಅವರಿಂದ ದಾಸ ಚಿಂತನ ಮತ್ತು ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು
ಸಂಜೆ 6 - ಗಂಗಾವತಿ ಪ್ರಾಣೇಶ್ ಅವರಿಂದ ಹಾಸ್ಯ ರಸಾಯನ ಕಾರ್ಯಕ್ರಮ
ಸಂಜೆ 7.15 - ಸುಧೀರ್ ಮತ್ತು ಮಾನಸಿ ಅವರಿಂದ ನೃತ್ಯೋತ್ಸವ
ಸೆಪ್ಟೆಂಬರ್ 6 ರ ಧಾರ್ಮಿಕ ಕಾರ್ಯಕ್ರಮಗಳು :
ಬೆಳಿಗ್ಗೆ ದೇವಾಲಯದ ಪ್ರಾಂಗಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು
ಮಧ್ಯಾಹ್ನ 2.30 - ಶ್ರೀಕೃಷ್ಣ ಛದ್ಮವೇಷ ಸ್ಪರ್ಧೆ
ಸಂಜೆ 5 - ಶ್ರೀಕೃಷ್ಣ ಲೀಲೋತ್ಸವ
ಸಂಜೆ 6 - ಮೊಸರು ಕುಡಿಕೆ, ವಾಲಗ ಮಂಟಪ ಪೂಜೆ, ಅಷ್ಟಾವಧಾನ, ಮಹಾ ಮಂಗಳಾರತಿ, ಪ್ರಸಾದ ವಿತರಣೆ
ಹೆಚ್ಚಿನ ಮಾಹಿತಿಗಾಗಿ :
ಶ್ರೀ ಗೋವರ್ಧನ ಕ್ಷೇತ್ರ, ಪುತ್ತಿಗೆ ಮಠ, ಬುಲ್ ಟೆಂಪಲ್ ರಸ್ತೆ, ಬಸವನಗುಡಿ, ಬೆಂಗಳೂರು
ಮೊ. ನಂ : 9845820775
-
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್











Click it and Unblock the Notifications