ಜುಲೈ 19ರಿಂದ ರಾಘವೇಶ್ವರ ಶ್ರೀಗಳ ಗೋಚಾತುರ್ಮಾಸ್ಯ
ಬೆಂಗಳೂರು, ಜುಲೈ 18: : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಮಹಾ ಸ್ವಾಮಿಗಳು, ಜುಲೈ 19ರಿಂದ ಸೆಪ್ಟೆಂಬರ್ 16ರ ವರೆಗೆ 60 ದಿನ ಗೋಚಾತುರ್ಮಾಸ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರ ಶಾಖಾ ಮಠದಲ್ಲಿ 23ನೇ ಚಾತುರ್ಮಾಸ್ಯವು ನಡೆಯಲಿದೆ.
'ಆನಂದದಯುಗ ಜನಕವತರಿಸಲಿ ಗೋವಿಂದ!' ಎಂಬ ಘೊಷವಾಕ್ಯದೊಂದಿಗೆ 'ಗೋಚಾತುರ್ಮಾಸ್ಯ'ವಾಗಿ ಆಷಾಢ ಪೂರ್ಣಿಮೆಯಿಂದ ಭಾದ್ರಪದ ಪೂರ್ಣಿಮೆವರೆಗೆ ನಡೆಯಲಿದೆ.

ಗೋಸೇವಕ ಪುರಸ್ಕಾರ: ಅನುದಿನವೂ ಗೋ ಸೇವೆಯಲ್ಲಿ ತೊಡಗಿರುವ ಒಬ್ಬರಿಗೆ ಗೋಸೇವಕ ಪುರಸ್ಕರಿಸಲಾಗುವುದು. ನಿತ್ಯವೂ ಒಂದರಂತೆ ಗೋವಿಗೆ ಸಂಬಂಧಿಸಿದ 60 ಪುಸ್ತಕ ಲೋಕಾರ್ಪಣೆ ಮಾಡಲಾಗುವುದು. ದೇಶಿ ಗೋವು, ಗೋ ಆಧಾರಿತ ಕೃಷಿ, ಗೋಮೂತ್ರ-ಡಯಾಬಿಟೀಸ್, ಗೋಕೇಂದ್ರಿತ ಜೀವನ, ಪಂಚಗವ್ಯ ಚಿಕಿತ್ಸೆ ಇತ್ಯಾದಿ ಗೋ ಸಂಬಂಧಿ ವಿಷಯಗಳ ಬಗ್ಗೆ ತಜ್ಞರು ಸಂದೇಶ ನೀಡಲಿದ್ದಾರೆ. ಡಾ.ಕೆ.ಪಿ.ರಮೇಶ್, ಎಂ.ಬಿ.ಪುರಾಣಿಕ್, ಅಭಯ ದೇಸಾಯಿ, ಲಕ್ಷ್ಮಿ ತಾತಾಚಾರ್ಯ, ಜಯಕೃಷ್ಣ ತಿರುವನಂತಪುರ, ಶ್ರೀನಿವಾಸರೆಡ್ಡಿ ಮುಂತಾದವರು ಮಾತನಾಡುವರು
ಪ್ರತಿ ಭಾನುವಾರ ಶಾಲೆ ಮಕ್ಕಳಿಗಾಗಿ ಕಾರ್ಯಕ್ರಮಗಳು ನಡೆಯಲಿವೆ. ಶ್ರೀಕರಾರ್ಚಿತ ದೇವತಾರ್ಚನೆ, ಮಾತೆಯರಿಂದ ಕುಂಕುಮಾರ್ಚನೆ, ಆದಿತ್ಯಹೃದಯ ಪಠಣ, ಫಲ ಸಮರ್ಪಣೆ, ಶ್ರೀಗಳಿಂದ ಮಂತ್ರಾಕ್ಷತೆ ಅನುಗ್ರಹ ಹಾಗೂ ರಾತ್ರಿ ಶ್ರೀಗಳಿಂದ ಸಾಧನಾ ಪಂಚಕ ಪ್ರವಚನಾನುಗ್ರಹ ನಡೆಯಲಿವೆ. ಕಳೆದ ವರ್ಷದ ಚಾತುರ್ಮಾಸ್ಯದಲ್ಲಿ ಮಕ್ಕಳನ್ನು ಕೇಂದ್ರೀಕರಿಸಿ ಆಚರಿಸಲಾಗಿತ್ತು. ಈ ಸಂದರ್ಭದಲ್ಲಿ 60 ಪುಸ್ತಕ ಲೋಕಾರ್ಪಣೆಗೊಂಡಿದ್ದು, ಅದು ಲಿಮ್ಕಾ ದಾಖಲೆಯಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications