ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಕೊರೊನಾ ಸೋಂಕು
ಬೆಂಗಳೂರು, ಸೆ. 19: ಶ್ರೀರಾಮಸೇನಾ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದ ಹಲವೆಡೆ ಪ್ರವಾಸ ಕೈಗೊಂಡಿರುವ ಸಮಯದಲ್ಲಿ ಅವರು ಜ್ಚರದಿಂದ ಬಳಲುತ್ತಿದ್ದರು. ಹೀಗಾಗಿ ಕೋವಿಡ್ ಪರೀಕ್ಷೆಗೆ ಒಳಗಾದಾಗ ಸೋಂಕು ತಗುಲಿರುವುದು ಪತ್ತೆಯಾಗಿದೆ. ನಿನ್ನೆ ರಾತ್ರಿಯೇ ಬೆಂಗಳೂರಿನ ಯಲಹಂಕದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಪ್ರಮೋದ್ ಮುತಾಲಿಕ್ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇತ್ತೀಚೆಗೆ ಮೈಸೂರು ಸಂಸದ ಪ್ರತಾಪ ಸಿಂಹ ಸೇರಿದಂತೆ ಹಲವರನ್ನು ಭೇಟಿಯಾಗಿದ್ದರು. ರಾಜ್ಯದಲ್ಲಿನ ಆಗುಹೋಗುಗಳ ಬಗ್ಗೆ ಸಮಾಲೋಚನೆ ನಡೆಸಿದ್ದರು. ಸತತ ಪ್ರಯಾಣದಿಂದ ಜ್ವರ ಬಂದಿದೆ ಎನ್ನಲಾಗಿತ್ತು. ಆದರೂ ಮುಂಜಾಗ್ರತಾ ಕ್ರಮವಾಗಿ ತಪಾಸಣೆಗೆ ಒಳಗಾದಾಗ ಸೋಂಕಿರುವುದು ಪತ್ತೆಯಾಗಿದೆ.

Recommended Video
ಪ್ರಮೋದ್ ಮುತಾಲಿಕ್ ಅವರು ಬೇಗ ಗುಣಮುಖರಾಗುವಂತೆ ಧಾರವಾಡದ ಲೈನ್ ಬಜಾರದಲ್ಲಿನ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಬೆಂಬಲಿಗರು, ಅಭಿಮಾನಿಗಳು ಮಾಡುತ್ತಿದ್ದಾರೆ. ಮುತಾಲಿಕ್ ಅವರು ಶೀಘ್ರ ಕೋವಿಡ್ನಿಂದ ಗುಣಮುಖರಾಗಿ ಬರಲಿ ಎಂದು ಪ್ರಾರ್ಥನೆ ಮಾಡಲಿದ್ದಾರೆ.












Click it and Unblock the Notifications