ರಂಗಶಂಕರದಲ್ಲಿ ಆಗಸ್ಟ್ 5ಕ್ಕೆ ಶ್ರೀನಿವಾಸ ವೈದ್ಯ ಬರಹ ಆಧರಿಸಿದ ನಾಟಕ
ಬೆಂಗಳೂರು, ಆಗಸ್ಟ್ 2 : ಇದೇ ತಿಂಗಳ 5ನೇ ತಾರೀಕಿನ ಭಾನುವಾರ ಮಧ್ಯಾಹ್ನ 3.30 ಮತ್ತು ರಾತ್ರಿ 7.30ಕ್ಕೆ ಗಂಟೆಗೆ ಬೆಂಗಳೂರಿನ ರಂಗಶಂಕರದಲ್ಲಿ ರಂಗವಲ್ಲಿ ತಂಡದ ನೂತನ ರಂಗಪ್ರಯೋಗ, ಸಾಹಿತಿ ಶ್ರೀನಿವಾಸ ವೈದ್ಯ ಅವರ ಬರಹಗಳನ್ನು ಆಧರಿಸಿದ ಪಾರ್ಶ್ವಸಂಗೀತ ನಾಟಕದ ಪ್ರದರ್ಶನವಿದೆ.
ರಂಗಾಯಣದ ಹಿರಿಯ ಕಲಾವಿದರಾದ ಪ್ರಶಾಂತ್ ಹಿರೇಮಠ ಈ ನಾಟಕದ ನಿರ್ದೇಶಕರು. ಪಾರ್ಶ್ವಸಂಗೀತ ನಾಟಕವು 1940ರ ದಶಕದಿಂದ 1970ರ ದಶಕಗಳವರೆಗಿನ, ಆದರೆ ಇಂದಿಗೂ ಜನಮಾನಸದಲ್ಲಿ ಉಳಿದಿರುವ ಹಿಂದಿ ಚಿತ್ರಗೀತೆಗಳೊಂದಿಗಿನ ನಮ್ಮ ಅವಿನಾಭಾವ ಸಂಬಂಧವನ್ನು ತೆರೆದಿಡುತ್ತದೆ.
ಅಂದಿನ ಕಾಲದ ಅದ್ಭುತ ಹಾಡುಗಳು, ಸಂಗೀತ ನಮ್ಮನ್ನು ಬೇರೊಂದು ಲೋಕಕ್ಕೆ ಕರೆದೊಯ್ಯುತ್ತದೆ. ಹಿಂದಿ ಗಾನಲೋಕದಲ್ಲಿ ದಂತಕತೆಗಳೆನಿಸಿದ ಕೆ.ಎಲ್.ಸೈಗಲ್, ತಲತ್ ಮಹಮೂದ್, ಮಹಮದ್ ರಫಿ, ಕಿಶೋರ್ ಕುಮಾರ್, ಶಂಶಾದ್ ಬೇಗಂ, ಲತಾ ಮಂಗೇಶ್ಕರ್, ಮನ್ನಾಡೇ ಮುಂತಾದವರ ಸುಶ್ರಾವ್ಯ ಕಂಠ ನಮ್ಮ ಹೃದಯದ ತಂತಿಗಳನ್ನು ಮೀಟಿ ಭಾವತರಂಗಗಳನನ್ನು ಎಬ್ಬಿಸುವ ಪರಿಯನ್ನು ಈ ನಾಟಕದ ಮೂಲಕ ಕಟ್ಟಿಕೊಡಲಾಗಿದೆ.

ಈ ನಾಟಕದ ನಿರೂಪಕ ತನ್ನ ಬಾಲ್ಯದ ಅನುಭವದ ಮೂಲಕ ಆ ಕಾಲದ ಹಿಂದಿ ಚಿತ್ರ ಸಂಗೀತದ ಸುವರ್ಣ ಯುಗವನ್ನು ನೆನಪಿಸಿಕೊಳ್ಳುತ್ತಾನೆ. ಅಪ್ರತಿಮ ಚಿತ್ರಪ್ರೇಮಿಯಾದ ತನ್ನ ಚಿಕ್ಕಪ್ಪನ ಜೀವನಗಾಥೆಯನ್ನು ಪ್ರೇಕ್ಷಕರೆದುರು ಹರವಿಡುತ್ತಾನೆ.
25ಕ್ಕೂ ಹೆಚ್ಚು ಕಲಾವಿದರು ಅಭಿನಯಿಸಿರುವ ಈ ನಾಟಕದ ರಂಗರೂಪ- ಬಿ.ಪಿ.ಅರುಣ್. ಸಂಗೀತ ನಿರ್ವಹಣೆ -ವಿಶ್ವಾಸ್ ಕೃಷ್ಣ, ರಂಗವಿನ್ಯಾಸ-ಎಚ್.ಕೆ.ದ್ವಾರಕಾನಾಥ್, ಬೆಳಕಿನ ವಿನ್ಯಾಸ-ಕೃಷ್ಣಕುಮಾರ್ ನಾರ್ಣಕಜೆ, ವಸ್ತ್ರವಿನ್ಯಾಸ-ನಂದಿನಿ ಕೆ.ಆರ್., ನೃತ್ಯಸಂಯೋಜನೆ-ಕಾರ್ತಿಕ್ ಉಪಮನ್ಯು, ರಂಗನಿರ್ವಹಣೆ-ಸೀಮಂತಿನಿ ಬಿ., ಸಹ-ನಿರ್ದೇಶನ ಮಹೇಶ್ ಕುಮಾರ್.
-
Industry: ಲಿಂಗಾಯತರು ಕೈಗಾರಿಕಾ ರಂಗಕ್ಕೆ ಧುಮುಕಬೇಕು: ಸಚಿವ ಎಂ.ಬಿ.ಪಾಟೀಲ ಕರೆ -
ಮಾರತ್ತಹಳ್ಳಿ ಮಿನಿ ಆಂಧ್ರ, ಇಲ್ಲಿ ಶೇ.99ರಷ್ಟು ಜನ ತೆಲುಗಿನವರೇ ಇದ್ದೀವಿ: ಯುವತಿ ವಿಡಿಯೋ ವೈರಲ್, ವಲಸೆ ಬಗ್ಗೆ ಜೋರು ಚರ್ಚೆ -
Raktha Kashmira: ಒಂದೇ ಸಿನಿಮಾದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರು, ವೈರಲ್ ಆಯ್ತು ರಕ್ತ ಕಾಶ್ಮೀರ ಪ್ರೋಮೋ -
5542 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ: ಮಹತ್ವ ಮಾಹಿತಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ -
Namma Metro: ಬೆಂಗಳೂರಿನ ಸಮೀಪ ನಗರಕ್ಕೆ ನಮ್ಮ ಮೆಟ್ರೋ ವಿಸ್ತರಣೆ: ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ -
Ajit Pawar: ನಾವು ವಿಮಾನದಲ್ಲಿ ಪ್ರಯಾಣಿಸುವಾಗ…: ಬಾರಾಮತಿ ವಿಮಾನ ಅಪಘಾತದ ಬೆನ್ನಲ್ಲೇ ಅಜಿತ್ ಪವಾರ್ ಟ್ವೀಟ್ ವೈರಲ್ -
Gold Rate: ಚಿನ್ನದ ಬೆಲೆ ಹೆಚ್ಚಳಕ್ಕೆ 5 ಪ್ರಮುಖ ಕಾರಣಗಳು ಇಲ್ಲಿವೆ, ಡೊನಾಲ್ಡ್ ಟ್ರಂಪ್ ಆಟವೂ ಇದೆ -
Gold Rate Jan 28: ಚಿನ್ನದ ಬೆಲೆಯಲ್ಲಿ ದಿಢೀರ್ ಬದಲಾವಣೆ: ಜ.28ರ ಚಿನ್ನದ ಬೆಲೆ ಸರ್ವಕಾಲಿಕ ದಾಖಲೆ, 2 ಲಕ್ಷ ಸಮೀಪ -
Gold: ಯಾವ ಕ್ಯಾರೆಟ್ ಚಿನ್ನ ಎಷ್ಟು ಪರಿಶುದ್ಧ? ಖರೀದಿಸುವ ಮುನ್ನ ಗಮನಿಸಬೇಕಾದ ಪ್ರಮುಖ ಅಂಶಗಳಿವು -
Vande Bharat Express: ವಂದೇ ಭಾರತ್ನಲ್ಲಿ ಕೊಡ್ತಿರೋ ಊಟ ಸರಿಯಿಲ್ಲ: ಪ್ರಯಾಣಿಕರ ಆಕ್ರೋಶಕ್ಕೆ ಮಣಿದ ರೈಲ್ವೆ ಇಲಾಖೆ -
Shambhavi Pathak: ಅಜಿತ್ ಪವಾರ್ ಜೊತೆ ವಿಮಾನದಲ್ಲಿ ದುರಂತ ಅಂತ್ಯ ಕಂಡ ನುರಿತ ಪೈಲಟ್ಗಳು -
ಭಾರತ-ಬಾಂಗ್ಲಾ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆಯೂ ಬಾಂಗ್ಲಾಗೆ ಅದಾನಿಯಿಂದ ದಾಖಲೆ ಮಟ್ಟದ ವಿದ್ಯುತ್ ರಫ್ತು












Click it and Unblock the Notifications