ಶಾಸಕ ಸ್ಥಾನಕ್ಕೆ ಬಿ ಶ್ರೀರಾಮುಲು ರಾಜೀನಾಮೆ

ಇಂದು ಬೆಳಗ್ಗೆ ವಿಧಾನಸೌಧದಲ್ಲಿ ವಿಧಾನ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭೇಟಿಯಾದ ರಾಮುಲು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಘೋಷಿಸಿದರು.
ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರನ್ನು ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಅವರ ಕಚೇರಿಯಲ್ಲಿ ಭೇಟಿ ಮಾಡಿದ ರಾಮುಲು ಬೆಳಗ್ಗೆ 10.40ಕ್ಕೆ ತಮ್ಮ ತ್ಯಾಗಪತ್ರ ಸಲ್ಲಿಸಿದರು. ದೇಶದ ಭವ್ಯ ಭವಿಷ್ಯಕ್ಕಾಗಿ ತಾವು ಬಿಜೆಪಿ ಸೇರುತ್ತಿರುವುದಾಗಿಯೂ, ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸುವುದಾಗಿಯೂ ಶ್ರೀರಾಮುಲು ಇದೇ ಸಂದರ್ಭದಲ್ಲಿ ಹೇಳಿದರು.
ಈ ಮಧ್ಯೆ, ರೆಡ್ಡಿ ಬ್ರದರ್ಸ್ ಪೈಕಿ ಕೆಎಂಎಫ್ ಅಧ್ಯಕ್ಷ ಜಿ ಸೋಮಶೇಖರ ರೆಡ್ಡಿ, ಬಿಜೆಪಿ ಶಾಸಕ ಕರುಣಾಕರ ರೆಡ್ಡಿ, ಸಂಸದೆ ಜೆ ಶಾಂತಾ ಅವರುಗಳ ನಡೆಯೇನು? ಬಿಎಸ್ಸಾರ್ ಕಾಂಗ್ರೆಸ್ ಪಕ್ಷದ ಇತರೆ ಶಾಸಕರ ಮುಂದಿನ ನಡೆಯೇನು? ಎಂಬುದು ನಿಗೂಢವಾಗಿದೆ.
ಇತ್ತೀಚೆಗಷ್ಟೇ ಶ್ರೀರಾಮುಲು ಅವರು ಬಿಎಸ್ಸಾರ್ ಕಾಂಗ್ರೆಸ್ ಪಕ್ಷದಿಂದ ಭಾರತೀಯ ಜನತಾ ಪಕ್ಷವನ್ನ ಸೇರಿಕೊಂಡಿದ್ದರು. ಭಾರತೀಯ ಜನತಾ ಪಕ್ಷದ ಮೂಲಕವೇ ರಾಜಕೀಯ ಪ್ರವೇಶ ಮಾಡಿದ್ದ ಮಾಜಿ ಸಚಿವ ಶ್ರೀರಾಮುಲು ಅವರು ರೆಡ್ಡಿ ಸಹೋದರರು ಜೈಲಿಗೆ ಹೋದ ಬಳಿಕ ಬಿಜೆಪಿಯಿಂದ ಸಿಡಿದು ಬಿಎಸ್ಸಾರ್ ಕಾಂಗ್ರೆಸ್ ಹುಟ್ಟುಹಾಕಿದ್ದರು.
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಶ್ರೀರಾಮುಲು ಅವರನ್ನು ಬಿಜೆಪಿ ತನ್ನ ಪಕ್ಷಕ್ಕೆ ಆಹ್ವಾನಿಸಿತ್ತು. ರಾಮುಲು ಸಹ ತಾವು ಬಿಜೆಪಿಗೆ ಮರಳುವುದನ್ನು ಬಯಸಿದ್ದರು. ಆದರೆ ಕೇಂದ್ರ ನಾಯಕಿ ಸುಷ್ಮಾ ಸ್ವರಾಜ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಆದಾಗ್ಯೂ, ಶ್ರೀರಾಮುಲು ಅವರನ್ನು ಸೇರಿಸಿಕೊಳ್ಳಲು ನಿರ್ಧರಿಸಿದ ಬಿಜೆಪಿ ಅವರಿಗೆ ಬಳ್ಳಾರಿ ಟಿಕೆಟ್ ಸಹ ನೀಡಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications