Get Updates
Get notified of breaking news, exclusive insights, and must-see stories!

ಬಿಸಿಲಿನ ತಾಪಕ್ಕೆ ಕೊರೋನಾ ವೈರಸ್ ಹರಡುವುದಿಲ್ಲ: ಶ್ರೀರಾಮುಲು

ಬೆಂಗಳೂರು, ಮಾ. 10: ನಮ್ಮಲಿನ ಬಿಸಿಲಿನ ತಾಪಕ್ಕೆ ಕೊರೋನಾ ವೈರಸ್ ಹರಡುವುದಿಲ್ಲ, ಹೀಗಾಗಿ ಕೊವಿಡ್-19 ವೈರಸ್ ಬಗ್ಗೆ ಭಯಬೇಡ ಎಂದು ಆರೋಗ್ಯ ಸಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಮಾತನಾಡಿದ್ದಾರೆ.

ರಾಜ್ಯದಲ್ಲಿ ಕೊರೋನ ಬಗ್ಗೆ ಬಯಭೀತರಾಗೋದು ಬೇಡ. ಸರ್ಕಾರ ಈ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಅಮೇರಿಕಾದಿಂದ ಬಂದಿರುವ ವ್ಯಕ್ತಿಗೆ ವೈರಸ್ ದೃಢಪಟ್ಟಿದೆ. ಅವರ ಕುಟುಂಬಸ್ಥರು, ಟ್ಯಾಕ್ಸಿ ಚಾಲಕರು ಎಲ್ಲರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ. ಇಲಾಖೆಯಲ್ಲಿ ಹಣಕಾಸಿನ ಕೊರತೆ ಇಲ್ಲ, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲ ಕಡೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದೇವೆ.

ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದವರನ್ನ ಆಸ್ಪತ್ರಗೆ ಕರೆತರಲಾಗಿದೆ, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಖಾಸಗಿ ಆಸ್ಪತ್ರೆಗಳಿಗೂ ಸೂಚನೆ ನೀಡಲಾಗಿದೆ. ಅಧಿಕ ಮೌಲ್ಯಕ್ಕೆ ಮಾಸ್ಕ್ ಮಾರದಂತೆ ಎಚ್ಚರಿಸಲಾಗಿದೆ. ಈ ಕುರಿತು ಡಿಹೆಚ್‌ಓ ಹಾಗೂ ನೋಡಲ್ ಆಫೀಸರ್‌ಗೆ ಸಹ ನಿಗವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

Health Minister Sriramulu said the coronavirus was not spreading to the hotter temperatures in our state

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ: ಇದಕ್ಕೂ ಮೊದಲು ಆರೋಗ್ಯ ಸಚಿವ ಶ್ರೀರಾಮುಲು ಅವರು ಬೆಂಗಳೂರು ಅಂತಾರಾಷ್ಷ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಕೊರೋನಾ ವೈರಸ್ ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡಿರುವ ತಪಾಸಣೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+