ಬಿಸಿಲಿನ ತಾಪಕ್ಕೆ ಕೊರೋನಾ ವೈರಸ್ ಹರಡುವುದಿಲ್ಲ: ಶ್ರೀರಾಮುಲು
ಬೆಂಗಳೂರು, ಮಾ. 10: ನಮ್ಮಲಿನ ಬಿಸಿಲಿನ ತಾಪಕ್ಕೆ ಕೊರೋನಾ ವೈರಸ್ ಹರಡುವುದಿಲ್ಲ, ಹೀಗಾಗಿ ಕೊವಿಡ್-19 ವೈರಸ್ ಬಗ್ಗೆ ಭಯಬೇಡ ಎಂದು ಆರೋಗ್ಯ ಸಿವ ಶ್ರೀರಾಮುಲು ಹೇಳಿದ್ದಾರೆ. ವಿಧಾನಸೌಧದಲ್ಲಿ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತೆ ಕ್ರಮಗಳ ಬಗ್ಗೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಕೊರೋನ ಬಗ್ಗೆ ಬಯಭೀತರಾಗೋದು ಬೇಡ. ಸರ್ಕಾರ ಈ ಬಗ್ಗೆ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಅಮೇರಿಕಾದಿಂದ ಬಂದಿರುವ ವ್ಯಕ್ತಿಗೆ ವೈರಸ್ ದೃಢಪಟ್ಟಿದೆ. ಅವರ ಕುಟುಂಬಸ್ಥರು, ಟ್ಯಾಕ್ಸಿ ಚಾಲಕರು ಎಲ್ಲರ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ. ಇಲಾಖೆಯಲ್ಲಿ ಹಣಕಾಸಿನ ಕೊರತೆ ಇಲ್ಲ, ಎಲ್ಲಾ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಎಲ್ಲ ಕಡೆ ಮಾಹಿತಿ ನೀಡುವ ಕೆಲಸ ಮಾಡುತ್ತಿದ್ದೇವೆ.
ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದವರನ್ನ ಆಸ್ಪತ್ರಗೆ ಕರೆತರಲಾಗಿದೆ, ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಖಾಸಗಿ ಆಸ್ಪತ್ರೆಗಳಿಗೂ ಸೂಚನೆ ನೀಡಲಾಗಿದೆ. ಅಧಿಕ ಮೌಲ್ಯಕ್ಕೆ ಮಾಸ್ಕ್ ಮಾರದಂತೆ ಎಚ್ಚರಿಸಲಾಗಿದೆ. ಈ ಕುರಿತು ಡಿಹೆಚ್ಓ ಹಾಗೂ ನೋಡಲ್ ಆಫೀಸರ್ಗೆ ಸಹ ನಿಗವಹಿಸಲು ಸೂಚಿಸಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ: ಇದಕ್ಕೂ ಮೊದಲು ಆರೋಗ್ಯ ಸಚಿವ ಶ್ರೀರಾಮುಲು ಅವರು ಬೆಂಗಳೂರು ಅಂತಾರಾಷ್ಷ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಕೊರೋನಾ ವೈರಸ್ ಬಗ್ಗೆ ಆರೋಗ್ಯ ಇಲಾಖೆ ಕೈಗೊಂಡಿರುವ ತಪಾಸಣೆ, ಮುಂಜಾಗ್ರತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications