ಬಿಜೆಪಿಗೆ ಮರಳಲು ಸಜ್ಜಾದ ಶ್ರೀರಾಮುಲು!
ಬೆಂಗಳೂರು, ಅ.17 : ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಬುಧವಾರ ರಾತ್ರಿ ಬಿಜೆಪಿ ನಾಯಕರ ಜೊತೆ ಈ ಕುರಿತು ಮಹತ್ವದ ಮಾತುಕತೆ ನಡೆಸಿ, ಕೆಲವೊಂದು ಷರತ್ತುಗಳನ್ನು ಮುಂದಿಟ್ಟಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷ ಬಿಟ್ಟು ಹೋದವರನ್ನು ಪಕ್ಷಕ್ಕೆ ಮರಳಿ ಕರೆತಂದು ಪಕ್ಷದ ಶಕ್ತಿಯನ್ನು ಹೆಚ್ಚಿಸಲು ಬಿಜೆಪಿ ನಿರ್ಧರಿಸಿದೆ. ಆದ್ದರಿಂದ ಶ್ರೀರಾಮುಲು ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ.

ಬೆಂಗಳೂರಿನಲ್ಲಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಶ್ರೀರಾಮುಲು, ಅನಂತ್ ಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದ ಗೌಡ ಅವರ ಜೊತೆ ಬಿಜೆಪಿ ಸೇರುವ ಕುರಿತು ಮಾತುಕತೆ ನಡೆಸಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಲು ಶ್ರೀರಾಮುಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಷರತ್ತುಗಳಿಗೆ ರಾಷ್ಟ್ರೀಯ ನಾಯಕರಿಂದ ಒಪ್ಪಿಗೆ ದೊರೆತರೆ, ಬಿಎಸ್ಆರ್ ಕಾಂಗ್ರೆಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ.
ಷರತ್ತುಗಳು : ಬಿ.ಶ್ರೀರಾಮುಲು ಬಳ್ಳಾರಿ, ರಾಯಚೂರು, ಚಿತ್ರದುರ್ಗ ಸೇರಿದಂತೆ ಕೆಲವು ಲೋಕಸಭಾ ಕ್ಷೇತ್ರಗಳ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಪಕ್ಷಕ್ಕೆ ಮರಳಿಗೆ ಮೇಲೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ. ಶ್ರೀರಾಮುಲು ಅವರ ಷರತ್ತುಗಳ ಬಗ್ಗೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ.
ಕೇಂದ್ರ ಬಿಜೆಪಿ ನಾಯಕರು ಶ್ರೀರಾಮುಲು ಅವರ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರೆ. ಬಿಎಸ್ಆರ್ ಕಾಂಗ್ರೆಸ್ ಕೆಲವೇ ದಿನಗಳಲ್ಲಿ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಕೆಲವು ದಿನಗಳ ಹಿಂದೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಶ್ರೀ ರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಿದ್ದರು.
ವರಿಷ್ಠ ನಾಯಕರ ಒಪ್ಪಿಗೆಯ ಬಳಿಕವೇ ಬಿಜೆಪಿ ನಾಯಕರು ಶ್ರೀರಾಮುಲು ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಕೇಂದ್ರಿಯ ನಾಯಕರು ಶ್ರೀರಾಮುಲು ಅವರ ಷರತ್ತುಗಳಿಗೆ ಒಪ್ಪಿಗೆ ನೀಡಿದರೆ, ಅವರು ಪಕ್ಷಕ್ಕೆ ಮರಳಲಿದ್ದಾರೆ. (ಬಿಎಸ್ಆರ್, ಬಿಜೆಪಿ ವಿಲೀನಕ್ಕೆ ವೇದಿಕೆ ಸಜ್ಜು)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications