ಎಸ್ಎಸ್ಎಲ್ಸಿ ಗಣಿತ ಪತ್ರಿಕೆ ಸೋರಿಕೆಯಾಗಿಲ್ಲ
ಬೆಂಗಳೂರು, ಏಪ್ರಿಲ್ 04 : 'ಎಸ್ಎಸ್ಎಲ್ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ವಿದ್ಯಾರ್ಥಿಗಳು ಆತಂಕಪಡದೆ ಏ.4ರ ಸೋಮವಾರ ಪರೀಕ್ಷೆ ಬರೆಯಬಹುದು' ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಅಜಯ್ ಹಿಲೋರಿ ಸ್ಪಷ್ಟಪಡಿಸಿದರು.
ಭಾನುವಾರ ರಾತ್ರಿಯಿಂದ ಇಂದು ನಡೆಯಬೇಕಾಗಿರುವ ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಈ ಸುದ್ದಿಗಳನ್ನು ಪೊಲೀಸರು ತಳ್ಳಿ ಹಾಕಿದ್ದು, ಎಂದಿನಂತೆ ಪರೀಕ್ಷೆ ನಡೆಯಲಿದೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ ಎಂದು ಹೇಳಿದ್ದಾರೆ. [SSLC ಪರೀಕ್ಷೆ ವೇಳಾಪಟ್ಟಿ]

ಬೆಂಗಳೂರಿನಲ್ಲಿ 20 ಸಾವಿರ ರೂ.ಗಳಿಗೆ ಗಣಿತ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ರಾತ್ರಿ ಸುಂಕದಕಟ್ಟೆ ಬಳಿ ಬಂಧಿಸಲಾಗಿತ್ತು. ಆರೋಪಿಗಳ ವಿಚಾರಣೆ ನಡೆಸಿದಾಗ ಇದು ನಕಲಿ ಪತ್ರಿಕೆ ಎಂದು ತಿಳಿದುಬಂದಿದೆ. [ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನಾದ್ರೂ ಸರಿಯಾಗಿ ನಡೆಸಿ ಶಿಕ್ಷಣ ಸಚಿವರೇ!]
ನಕಲಿ ಪತ್ರಿಕೆ : ಭಾನುವಾರ ರಾತ್ರಿ 11.50ರ ಸುಮಾರಿಗೆ ಸುಂಕದಕಟ್ಟೆ ಸಮೀಪ ಗಣಿತ ಪ್ರಶ್ನೆ ಪತ್ರಿಕೆಯನ್ನು 20 ಸಾವಿರ ರೂ.ಗಳಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು ಮತ್ತು ಅವರ ಬಳಿ ಇದ್ದ ಪ್ರಶ್ನೆ ಪತ್ರಿಕೆಯನ್ನು ವಶಕ್ಕೆ ಪಡೆದುಕೊಂಡಿದ್ದರು. [ತಿರುಪತಿ: ತಾಯಿ ಶವ ಮನೆಯಲ್ಲಿದ್ದರೂ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ಹುಡುಗಿ]
ಬೆಂಗಳೂರಿನ ಪೀಣ್ಯ ನಿವಾಸಿಗಳಾದ ದೀಪಕ್ ಮತ್ತು ವಿನೋದ್ ಆರೋಪಿಗಳಾಗಿದ್ದು, ಅವರನ್ನು ವಿಚಾರಣೆ ನಡೆಸಿದಾಗ ಅವರ ಬಳಿ ಇರುವುದು ನಕಲಿ ಪತ್ರಿಕೆ. ಇಂದು ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಗೂ ಆರೋಪಿಗಳ ಬಳಿ ಇದ್ದ ಪತ್ರಿಕೆಗೂ ಯಾವುದೇ ಹೋಲಿಕೆ ಕಂಡುಬಂದಿಲ್ಲ. ಆದ್ದರಿಂದ, ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
'ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿಲ್ಲ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವಿಚಾರವೇ ಸುಳ್ಳು. ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಆತಂಕಪಡೆದೇ ಪರೀಕ್ಷೆ ಬರೆಯಬಹುದು' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಮಾಧ್ಯಮಗಳಿಗೆ ತಿಳಿಸಿದರು.
ಪಿಯುಸಿ ಪತ್ರಿಕೆ 2 ಬಾರಿ ಸೋರಿಕೆ : ಈಗಾಗಲೇ ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ 2 ಬಾರಿ ಸೋರಿಕೆಯಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಏ.12ರಂದು ಮರು ಪರೀಕ್ಷೆ ದಿನಾಂಕವನ್ನು ನಿಗದಿಪಡಿಸಲಾಗಿದೆ. [ದ್ವೇಷಕ್ಕಾಗಿ ದ್ವಿತೀಯ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ?]
ಮಾರ್ಚ್ 21ರಂದು 1.75 ಲಕ್ಷ ವಿದ್ಯಾರ್ಥಿಗಳು ರಸಾಯನಶಾಸ್ತ್ರ ಪರೀಕ್ಷೆ ಬರೆದಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಆ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಮಾರ್ಚ್ 31ರಂದು ಮರುಪರೀಕ್ಷೆ ನಡೆಸುವುದಾಗಿ ಘೋಷಿಸಲಾಗಿತ್ತು. ಆದರೆ, ಅಂದು ಬೆಳಗ್ಗೆ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ಪರೀಕ್ಷೆ ರದ್ದು ಮಾಡಲಾಗಿತ್ತು.
-
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಾರ್ಚ್ 17ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಮಾರ್ಚ್ 16ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ












Click it and Unblock the Notifications