SSLC Result 2024: ಎಸ್ಎಸ್ಎಲ್ಸಿಯಲ್ಲಿ ಕ್ಯಾಬ್ ಚಾಲಕನ ಮಗಳು ಇಡೀ ರಾಜ್ಯಕ್ಕೆ ಟಾಪರ್
SSLC Result 2024: ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಮೇ 09ಕ್ಕೆ ಪ್ರಟಕ ಮಾಡಲಾಗಿದ್ದು, ಆದರೆ ಈ ವೇಳೆ ಬೆಂಗಳೂರಿನ ವಿದ್ಯಾರ್ಥಿನಿಯೊಬ್ಬರು ಬಂದ ಅಂಕಗಳು ತೃಪ್ತಿಯಾಗದ ಹಿನ್ನೆಲೆ ಮರುಮೌಲ್ಯಮಾಪನಕ್ಕೆ ಹಾಕಿದ್ದು, ಇದೀಗ ಇವರಿಗೆ 625 ಅಂಕ ಬಂದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಇವರಿಗೆ ಮೊದಲಿಗೆ ಬಂದ ಅಂಕಗಳೆಷ್ಟು ಹಾಗೂ ಇವೆ ಹಿನ್ನೆಲೆ ಏನು ಎಂದು ಇಲ್ಲಿ ತಿಳಿಯಿರಿ.
ಎಸ್ಎಸ್ಎಲ್ಸಿ ಪರೀಕ್ಷೆ 2024ರ ಮೊದಲ ಫಲಿತಾಂಶ ಬಂದ ಬಳಿಕ ಮರುಮೌಲ್ಯಮಾಪನಕ್ಕೆ ಹಾಕಿದ್ದ ಬೆಂಗಳೂರಿನ ಮಲ್ಲಸಂದ್ರದ ಬಿ.ಎನ್.ಆರ್.ಶಾಲೆಯ ಭಾವನಾ ಟಿ.ಎಸ್.ಎಂಬ ವಿದ್ಯಾರ್ಥಿನಿಗೆ 625ಕ್ಕೆ 625 ಅಂಕ ಸಿಕ್ಕಿದ್ದು, ಈ ಮೂಲಕ ಅವರು ಇಡೀ ರಾಜ್ಯಕ್ಕೆ ಟಾಪರ್ ಆಗಿದ್ದಾರೆ.

2023-24ರ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಬಾಗಲಕೋಟೆ ಜಿಲ್ಲೆಯ ಅಂಕಿತಾ ಬಸಪ್ಪ ಕೊಣ್ಣೂರ 625ಕ್ಕೆ 625 ಅಂಕ ಗಳಿಸುವ ಮೂಲಕ ಅಗ್ರಸ್ಥಾನ ಅಲಂಕರಿಸಿದ್ದು, ಇದೀಗ ಇದನ್ನು ಮೊದಲ ಫಲಿತಾಂಶ ಪ್ರಕಟದ ವೇಳೆಯೇ ಘೋಷಣೆ ಮಾಡಲಾಗಿತ್ತು. ಇದೀಗ ಮರುಮೌಲ್ಯಮಾಪನ ಫಲಿತಾಂಶ ಹೊರಬಿದ್ದಿದ್ದು, 620ರಿಂದ 625ಕ್ಕೆ ಜಿಗಿದ ಬೆಂಗಳೂರಿನ ಕ್ಯಾಬ್ ಚಾಲಕನ ಮಗಳು ಭಾವನಾ ಟಿ.ಎಸ್. ಅವರು ಕೂಡ ಈ ಸ್ಥಾನದಲ್ಲಿ ಇದ್ದಾರೆ.
ಭಾವನಾ ಟಿಎಸ್ ಅವರಿಗೆ ಮೊದಲ ಫಲಿತಾಂಶ ಬಂದಾಗ 625ಕ್ಕೆ 620 ಅಂಕ ಮಾತ್ರ ಬಂದಿತ್ತು. ಮರುಮೌಲ್ಯಮಾಪನಕ್ಕೆ ಹಾಕಿದ ನಂತರದಲ್ಲಿ ಅವರಿಗೆ 625ಕ್ಕೆ 625 ಅಂಕ ಬಂದಿದೆ. ಇನ್ನು ಮಲ್ಲಸಂದ್ರದ ಭಾವನಾ ಅವರನ್ನು ಸೂರಜ್ ಫೌಂಡೇಶನ್ ಸನ್ಮಾನಿಸಿದ್ದು, ಫೌಂಡೇಶನ್ ಪರವಾಗಿ ಶಾಸಕ ಮುನಿರಾಜು ಅವರು ವಿದ್ಯಾರ್ಥಿನಿಗೆ 25,000 ರೂಪಾಯಿ ನಗದು ಬಹುಮಾನ ನೀಡಿ ಅಭಿನಂದಿಸಿದ್ದಾರೆ.
ರಾಜ್ಯಕ್ಕೆ ಹೆಸರು ತಂದಿರುವ ಈ ವಿದ್ಯಾರ್ಥಿನಿಯ ಮಿಂದಿನ ಪಿಯುಸಿ ವಿದ್ಯಾಭ್ಯಾಸಕ್ಕೆ ಬೇಕಾದ ಪುಸ್ತಕ, ಸಮವಸ್ತ್ರಗಳಿಗೆ ಪ್ರತಿ ವರ್ಷ ಫೌಂಡೇಶನ್ ಸಂಸ್ಥಾಪಕಿ ಸುಜಾತಾ ಸೂರಜ್ ಅವರು 25,000 ರೂಪಾಯಿ ನಗದು ಹಣ ನೀಡಲಿದ್ದಾರೆ ಎಂದು ಶಾಸಕ ಎಸ್.ಮುನಿರಾಜು ಘೋಷಣೆ ಮಾಡಿದ್ದಾರೆ ಅಂತಾ ತಿಳಿದುಬಂದಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications