ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಾಯಿ ಮೊಬೈಲ್ ಕೊಡಲಿಲ್ಲ; ವಿದ್ಯಾರ್ಥಿನಿ ನೇಣಿಗೆ ಶರಣು

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 15 : ತಾಯಿ ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಹನುಮಂತನಗರದ 10ನೇ ಕ್ರಾಸ್ ನಿವಾಸಿ ಪ್ರಿಯಾಂಕ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ಪ್ರಿಯಾಂಕ ಶನಿವಾರ ಶಾಲೆಗೆ ಹೋಗಿದ್ದಳು. ಸಂಜೆ ಸ್ನೇಹಿತೆ ಮನೆಗೆ ಹೋಗುವುದಾಗಿ ತಾಯಿಯ ಬಳಿ ಹೇಳಿದ್ದಳು.

ಪಬ್ ಜಿ ಆಡದಂತೆ ಬುದ್ಧಿವಾದ ಹೇಳಿದ ತಂದೆಯ ಹತ್ಯೆಪಬ್ ಜಿ ಆಡದಂತೆ ಬುದ್ಧಿವಾದ ಹೇಳಿದ ತಂದೆಯ ಹತ್ಯೆ

ಮೊಬೈಲ್ ತೆಗೆದುಕೊಂಡು ಹೋಗುವುದಾಗಿ ತಾಯಿಯನ್ನು ಕೇಳಿದ್ದಳು. ತಾಯಿ ಮೊಬೈಲ್ ನೀಡುವುದಿಲ್ಲ ಎಂದು ಹೇಳಿ ದೇವಾಲಯಕ್ಕೆ ಹೋಗಿದ್ದಳು. ದೇವಾಲಯದಿಂದ ಬಂದು ನೋಡುವಾಗ ಪ್ರಿಯಾಂಕ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಳು.

ಶಿವಮೊಗ್ಗದಲ್ಲಿ ಪಬ್ ಜಿ ಆಡುತ್ತಿದ್ದ ಬಾಲಕ ಸಾವುಶಿವಮೊಗ್ಗದಲ್ಲಿ ಪಬ್ ಜಿ ಆಡುತ್ತಿದ್ದ ಬಾಲಕ ಸಾವು

suicide

ಹನುಂಮತನಗರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಿಹಿಸಲಾಗಿದೆ. ಇಂದು ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡ ತನಿಖೆ ನಡೆಸುತ್ತಿದ್ದಾರೆ.

ಮೊಬೈಲ್ ಗೇಮ್‌ನ ಟಾಸ್ಕ್ ಪೂರ್ಣಗೊಳಿಸಲು ಆತ್ಮಹತ್ಯೆ ಮಾಡಿಕೊಂಡ ಯುವಕಮೊಬೈಲ್ ಗೇಮ್‌ನ ಟಾಸ್ಕ್ ಪೂರ್ಣಗೊಳಿಸಲು ಆತ್ಮಹತ್ಯೆ ಮಾಡಿಕೊಂಡ ಯುವಕ

ತಂದೆಯ ಹತ್ಯೆ : ಪಬ್ ಜಿ ಆಡಲು ಮೊಬೈಲ್‌ ರೀಚಾರ್ಜ್‌ಗೆ ತಂದೆ ಹಣಕೊಡಲಿಲ್ಲ ಎಂಬ ಕಾರಣಕ್ಕೆ ತಂದೆಯನ್ನು ಪುತ್ರನೇ ಹತ್ಯೆ ಮಾಡಿದ ಘಟನೆ ಬೆಳಗಾವಿಯಲ್ಲಿ ಮಂಗಳವಾರ ನಡೆದಿತ್ತು.

English summary
An 16-year-old SSLC student allegedly committed suicide by hanging herself after mother not allowed to carry mobile. Case registered in Hanumantha Nagar police station, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X