ಬೆಳಗ್ಗೆ ಕೊಲೆ, ಮಧ್ಯಾಹ್ನ ಆರೋಪಿಗಳು ಅರೆಸ್ಟ್
ಬೆಂಗಳೂರು, ಡಿ.17 : ಜಾಲಹಳ್ಳಿಯಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ಟೋನಿ ವಿಲ್ಸನ್ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಶವ ಸಿಕ್ಕಿ ಒಂದು ಗಂಟೆಯೊಳಗೆ ಪತ್ತೆ ಹಚ್ಚಿದ್ದಾರೆ. ಕಟ್ಟಡ ಸಾಮಾಗ್ರಿಗಳನ್ನು ಕದಿಯಲು ಹೋದ ಟೋನಿಯನ್ನು ಕಟ್ಟಡದ ಮಾಲೀಕರು ಕೊಲೆ ಮಾಡಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಜಾಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಟೋನಿ ವಿಲ್ಸನ್ ಸರಿಯಾಗಿ ಕಾಲೇಜಿಗೆ ಹೋಗುತ್ತಿರಲಿಲ್ಲ. ಓದಿನ ಜೊತೆಗೆ ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಸಹ ಮಾಡುತ್ತಿದ್ದನು. ಮಂಗಳವಾರ ಕಾಲೇಜಿಗೆ ಹೋಗುತ್ತೇನೆ ಎಂದು ಮನೆಯಿಂದ ಬೆಳಗ್ಗೆ ಹೊರಟಿದ್ದನು. ಸಂಜೆ ಜಾಲಹಳ್ಳಿ ಬಳಿ ನಿರ್ಮಾಣ ಹಂತದ ಕಟ್ಟಡಕ್ಕೆ ಕದಿಯಲು ಹೋದಾಗ ಅಲ್ಲಿನ ಮಾಲೀಕರು ರಾಡ್ನಿಂದ ಹೊಡೆದು ಆತನನ್ನು ಹತ್ಯೆ ಮಾಡಿ, ಶವವನ್ನು ರಸ್ತೆಯಲ್ಲಿ ಎಸೆದಿದ್ದರು.
ಹಿಂದಿನ ಸುದ್ದಿ : ಬೆಂಗಳೂರಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯನ್ನು ಕೊಲೆ ಮಾಡಿ ಜಾಲಹಳ್ಳಿ ಬಳಿ ರಸ್ತೆಯಲ್ಲಿ ಶವವನ್ನು ಎಸೆದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಕೊಲೆಯಾದ ವಿದ್ಯಾರ್ಥಿಯನ್ನು ಶಿವಾಜಿನಗರದ ಸೆಂಟ್ ಜೋಸೆಫ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಟೋನಿ ವಿಲ್ಸನ್ (17) ಎಂದು ಗುರುತಿಸಲಾಗಿದೆ. ಜಾಲಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯದ ಹಿಂಭಾಗದಲ್ಲಿ ಬುಧವಾರ ಬೆಳಗ್ಗೆ ವಿಲ್ಸನ್ ಶವ ಪತ್ತೆಯಾಗಿದೆ.

ವಿಲ್ಸನ್ ಶವದ ಮುಖ ಮತ್ತು ಕುತ್ತಿಗೆಯ ಬಳಿ ಗಾಯಗಳಾಗಿದ್ದು, ತಲೆಗೆ ರಾಡ್ನಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಜಾಲಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಗ್ಗೆ ಮನೆ ಬಿಟ್ಟು ಹೋದ ವಿಲ್ಸನ್ ವಾಪಸ್ ಬಂದಿರಲಿಲ್ಲ. ವಿಲ್ಸನ್ ಗಂಗಮ್ಮನ ಗುಡಿ ಸಮೀಪದ ಸಿದ್ಧಾರ್ಥ ನಗರದಲ್ಲಿ ವಾಸವಾಗಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications