ಕಾಂಗ್ರೆಸ್ಸಿನತ್ತ ಎಸ್.ಟಿ.ಸೋಮಶೇಖರ್: ಯಶವಂತಪುರದಲ್ಲಿ ಜೆಡಿಎಸ್ ಆಕ್ಟೀವ್?
ಬೆಂಗಳೂರು, ಆಗಸ್ಟ್ 21: ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅವರು ಕಾಂಗ್ರೆಸ್ಗೆ ಸೇರುವುದು ಬಹುತೇಕ ಖಚಿತ ಎನ್ನಲಾಗುತ್ತಿದ್ದು, ಈಗ ಯಶವಂತಪುರದಲ್ಲಿ ಜೆಡಿಎಸ್ನ ಜವರಾಯಿಗೌಡ ಸಂಪೂರ್ಣ ಸಕ್ರಿಯರಾಗಿದ್ದಾರೆ.
ಕಳೆದ ನಾಲ್ಕು ವಿಧಾನಸಭಾ ಚುನಾವಣೆಗಳಲ್ಲಿ ಜೆಡಿಎಸ್ನಿಂದ ಸೋಮಶೇಖರ್ ವಿರುದ್ಧ ಎದುರಾಳಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸುತ್ತಿರುವ ಜವರಾಯಿಗೌಡ ಅವರು ಮತ್ತೆ ಕ್ರಿಯಾಶೀಲವಾಗಿ ಕ್ಷೇತ್ರದಾದ್ಯಂತ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಭೇಟಿ ಆರಂಭಿಸಿದ್ದಾರೆ. ಕಾಂಗ್ರೆಸ್ಗೆ ವಲಸೆ ಹೋದಲ್ಲಿ ಕ್ಷೇತ್ರದಲ್ಲಿ ಮತ್ತೆ ಉಪ ಚುನಾವಣೆ ಎದುರಾಗುವುದರಿಂದ ಸೋಮಶೇಖರ್ ಸೋಲಿಸಲು ಈಗಲೇ ರಣತಂತ್ರ ರೂಪಿಸುತ್ತಿದ್ದಾರೆ ಎನ್ನಲಾಗಿದೆ.

ಒಂದು ಉಪ ಚುನಾವಣೆ ಸೇರಿದಂತೆ ನಾಲ್ಕು ಚುನಾವಣೆಗಳಲ್ಲಿಯೂ ಒಕ್ಕಲಿಗ ಸಮುದಾಯಕ್ಕೆ ಸೇರಿದ ಸೋಮಶೇಖರ್ ಮತ್ತು ಜವರಾಯಿಗೌಡ ಅವರು ಪರಸ್ಪರ ಎದುರಾಳಿಗಳಾಗಿ ಸೆಣಸಾಣ ನಡೆಸಿದ್ದಾರೆ. ನಾಲ್ಕು ಬಾರಿಯೂ ಇಬ್ಬರ ನಡುವೆ ಭರ್ಜರಿ ಪೈಪೋಟಿ ಏರ್ಪಟ್ಟಿತ್ತು. ಜವರಾಯಿಗೌಡ ಅವರು ಸೋಮಶೇಖರ್ ವಿರುದ್ಧ 2013ರ ಚುನಾವಣೆಯಲ್ಲಿ 29,110 ಮತಗಳಿಂದ, 2018ರ ಚುನಾವಣೆಯಲ್ಲಿ 10,711 ಮತಗಳಿಂದ, 2019ರ ಉಪಚುನಾವಣೆಯಲ್ಲಿ 27,699 ಮತಗಳಿಂದ ಹಾಗೂ ಇತ್ತೀಚಿನ 2023ರ ಚುನಾವಣೆಯಲ್ಲಿ 15,118 ಮತಗಳ ಅಂತರದಿಂದ ಸೋಲು ಅನುಭವಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳು ಕಣದಲ್ಲಿದ್ದರೂ ಜೆಡಿಎಸ್ನ ಜವರಾಯಿಗೌಡ ಹೆಚ್ಚಿನ ಮತಗಳನ್ನೇ ಗಳಿಸಿದ್ದಾರೆ.
ಕಳೆದ 10 ವರ್ಷಗಳಿಂದಲೂ ಯಶವಂತಪುರ ಕ್ಷೇತ್ರದಲ್ಲಿ ಸೋಮಶೇಖರ್ ಮತ್ತು ಜವರಾಯಿಗೌಡ ನಡುವೆ ಹಣಾಹಣಿ ಇದ್ದೇ ಇದೆ. ಚುನಾವಣೆ ಗೆಲ್ಲಲು ಜವರಾಯಿಗೌಡ ಹರಸಾಹಸ ಮಾಡಿದರೂ ಸಾಧ್ಯವಾಗಿಲ್ಲ. ಇವರಿಬ್ಬರ ಸ್ಪರ್ಧೆ ನಡುವೆ ಮೂರನೇ ಅಭ್ಯರ್ಥಿ ಹೆಚ್ಚು ಮತಗಳನ್ನು ಗಳಿಸಲು ಯಶಸ್ವಿಯಾಗಿಲ್ಲ. ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಬದಲಾದಲೂ ಜೆಡಿಎಸ್ನಿಂದ ಮಾತ್ರ ಸತತವಾಗಿ ಜವರಾಯಿಗೌಡ ಅವರಿಗೇ ಟಿಕೆಟ್ ನೀಡಲಾಗಿದೆ.
ಈ ಬಾರಿಯ ಚುನಾವಣೆಯಲ್ಲಿ ಜವರಾಯಿಗೌಡ ಅವರ ಪರವಾಗಿ ಕ್ಷೇತ್ರದಲ್ಲಿ ಪಾಸಿಟಿವ್ ಅಂಶಗಳು ಕೇಳಿ ಬಂದಿತ್ತು. ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಒಕ್ಕಲಿಗ ಸಮುದಾಯದ ಮತದಾರರು ಒಗ್ಗಟ್ಟಿನಿಂದ ಜವರಾಯಿಗೌಡ ಪರವಾಗಿ ಮತ ಹಾಕಲು ಮುಂದಾಗಿದ್ದರು. ಈ ಹಂತದಲ್ಲಿ ಸೋಮಶೇಖರ್ ಅವರೂ ಆತಂಕಕ್ಕೀಡಾಗಿದ್ದರು. ಆದರೆ, ಕೊನೆಯ ಕ್ಷಣದಲ್ಲಿ ಸೋಮಶೇಖರ್ ಅವರು ಹೆಚ್ಚು ಗಮನಹರಿಸಿ ಶ್ರಮ ಹಾಕಿದ್ದರಿಂದ ಗೆಲುವು ಸಾಧ್ಯವಾಯಿತು. ಸಚಿವರಾಗಿ ಚುನಾವಣೆ ಎದುರಿಸಿದರೂ ಗೆಲುವಿನ ಅಂತರ 15,118 ಮಾತ್ರವಾಗಿತ್ತು.
ಒಂದು ವೇಳೆ ಈಗ ಸೋಮಶೇಖರ್ ಅವರು ಕಾಂಗ್ರೆಸ್ಗೆ ವಲಸೆ ಹೋಗುವ ನಿರ್ಧಾರ ಕೈಗೊಂಡಲ್ಲಿ ಮತ್ತೆ ಉಪಚುನಾವಣೆ ಎದುರಾಗುವುದು ನಿಶ್ಚಿತ. ಐದನೇ ಬಾರಿ ಸೋಮಶೇಖರ್ ಅವರನ್ನು ಜವರಾಯಿಗೌಡ ಸೋಲಿಸಿದರೂ ಅಚ್ಚರಿ ಇಲ್ಲ.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ












Click it and Unblock the Notifications