ಬೆಂಗಳೂರು ಏರ್ಪೋರ್ಟ್: ಪೈಲಟ್, ಸಿಬ್ಬಂದಿಗೆ ಪ್ರತ್ಯೇಕ ಪ್ರವೇಶ ಟರ್ಮಿನಲ್
ಬೆಂಗಳೂರು, ಜೂನ್ 14: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದೆ. ಪ್ರಯಣಿಕರು ಹಾಗೂ ವಿಮಾನ ನಿಲ್ದಾಣ ಸಿಬ್ಬಂದಿಗಳಿಗೆ ಒಂದೇ ಪ್ರವೇಶದ್ವಾರವಿದ್ದ ಕಾರಣ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿತ್ತು. ಇನ್ನು ಮುಂದೆ ಈ ಸಮಸ್ಯೆ ತಪ್ಪಲಿದೆ.
ನಿಲ್ದಾಣದಲ್ಲಿ ವಿಮಾನದ ಪೈಲಟ್ ಹಾಗೂ ಸಿಬ್ಬಂದಿಯ ತ್ವರಿತ ಪ್ರವೇಶಕ್ಕೆ ಪ್ರತ್ಯೇಕ ಟರ್ಮಿನಲ್ ಆರಂಭಗೊಂಡಿದೆ. ನೂತನ ಟರ್ಮಿನಲ್ ಮೂಲಕ ಪ್ರತಿನಿತ್ಯ 350ರಿಂದ 400ಸಿಬ್ಬಂದಿ ನಿಲ್ದಾಣದ ಒಳಗೆ ಪ್ರವೇಶಿಸಲು ಮತ್ತು ಹೊರಗೆ ಬರಲು ಅನುಕೂಲವಾಗಲಿದೆ. ವಿಮಾನಯಾನ ಸಂಸ್ಥೆಗಳ ಕಚೇರಿಗಳಿಗೆ ಹತ್ತಿರದಲ್ಲೇ ಈ ಟರ್ಮಿನಲ್ ವ್ಯವಸ್ಥೆ ಮಾಡಲಾಗಿದ್ದು, ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ.
ವಿಮಾನಯಾನ ಸಿಬ್ಬಂದಿಯನ್ನು ಟರ್ಮಿನಲ್ ನಲ್ಲಿರುವ ಭದ್ರತಾ ಸಿಬ್ಬಂದಿ ಸಂಪೂರ್ಣ ತಪಾಸಣೆಗೆ ಒಳಪಡಿಸಿ ಒಳಗೆ ಪ್ರವೇಶ ನೀಡುತ್ತಾರೆ. ಬರುವ ದಿನಗಳಲ್ಲಿ ಟರ್ಮಿನಲ್ ಬಳಕೆ ಮಾಡುವ ಸಿಬ್ಬಂದಿ ಸಂಖ್ಯೆ 500ರಿಂದ 600 ತಲುಪುವ ನಿರೀಕ್ಷೆ ಇದೆ.

ಏರ್ಪೋರ್ಟ್ನ ಮುಖ್ಯ ಟರ್ಮಿನಲ್ ಮೂಲಕ ಆದ್ಯತೆಯ ಮೇರೆಗೆ ವಿಮಾನಯಾನ ಸಿಬ್ಬಂದಿ ಪ್ರವೇಶ ಹಾಗೂ ಭದ್ರತಾ ತಪಾಸಣೆಗೆ ಒಳಪಡುವ ಕಾರಣ ಇತರ ಪ್ರಯಾಣಿಸಕರ ಪ್ರವೇಶಕ್ಕೆ ಅನಾನುಕೂಲ ಆಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವ್ಯವಸ್ಥೆಯನ್ನು ಕೇವಲ ದೇಶಿಯ ಮಾರ್ಗದಲ್ಲಿ ಹಾರಾಡುವ ವಿಮಾನಗಳ ಸಿಬ್ಬಂದಿಗೆ ಮಾತ್ರ ಕಲ್ಪಿಸಲಾಗಿದೆ. ಅಂತಾರಾಷ್ಟ್ರೀಯ ಮಾರ್ಗದ ವಿಮಾನಗಳ ಸಿಬ್ಬಂದಿ ಎಂದಿನಂತೆ ಸಾಮಾನ್ಯ ಟರ್ಮಿನಲ್ ಮೂಲಕ ಪ್ರವೇಶಿಸಿ ವಲಸೆ ಮತ್ತು ಇನ್ನಿತರೆ ಅಗತ್ಯ ದಾಖಲೆಗಳನ್ನು ಪರಿಶೀಲನೆಗೆ ಒಳಪಡಿಸಲಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications