ಬೆಂಗಳೂರಲ್ಲಿ ಇನ್ನೂ ಸಮಸ್ಯೆಯ ಹೊಗೆ ಉಗುಳುತ್ತಿರುವ ಟು-ಸ್ಟ್ರೋಕ್ ಆಟೋ
ಬೆಂಗಳೂರು, ಆಗಸ್ಟ್ 13: ಟು-ಸ್ಟ್ರೋಕ್ ಆಟೋಗಳನ್ನು ಗುಜರಿಗೆ ಹಾಕುವ ಸಮಸ್ಯೆ ಇದುವರೆಗೂ ಬಗೆಹರಿದಿಲ್ಲ, ಹೊಸ ಆಟೋಗಳನ್ನು ಕೊಳ್ಳಲು ಸಬ್ಸಿಡಿ ನೀಡುತ್ತೇವೆ ಎಂದು ಘೋಷಿಸಿದರೂ ಆಟೋ ಚಾಲಕರು ಮುಂದೆ ಬರುತ್ತಿಲ್ಲ.
ಕಠಿಣ ಕ್ರಮಗಳನ್ನು ತೆಗೆದುಕೊಂಡು 2 ಸ್ಟ್ರೋಕ್ ಆಟೋ ಚಾಲನೆ ರದ್ದು ಮಾಡುವ ಅವಕಾಶವಿದೆ ಆದರೂ ಬೇರೆ ರೀತಿಯಲ್ಲಿ ಪರಿಹಾರವನ್ನು ಕಂಡುಕೊಳ್ಳಲು ಸಾರಿಗೆ ಇಲಾಖೆ ಯೋಚಿಸಿದೆ. ಹಾಗಾಗಿ ಸಾರಿಗೆ ಆಯುಕ್ತರ ನೇತೃತ್ವದಲ್ಲಿ ಕೋರ್ ಕಮಿಟಿ ರಚಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.
ಬೆಂಗಳೂರಲ್ಲಿ ಪ್ರತಿ ವರ್ಷವೂ ಐದಾರು ಲಕ್ಷ ಹೊಸ ವಾಹನಗಳು ರಸ್ತೆಗಿಳಿಯುತ್ತಿದೆ ಇದರಿಂದ ಸಾರಿಗೆ ಇಲಾಖೆ ಸೇರಿದಂತೆ ಪರಿಸರ ಮಾಲಿನ್ಯ ಇಲಾಖೆಯು ಆತಂಕ ವ್ಯಕ್ತಪಡಿಸಿದೆ. ಈಗಿರುವ ಟು ಸ್ಟ್ರೋಕ್ ಆಟೋಗಳು ಹೆಚ್ಚು ಹೊಗೆಯನ್ನು ಉಗುಳುವುದರಿಂದ ವಾಯುಮಾಲಿನ್ಯ ವಿಪರೀತವಾಗುತ್ತಿದೆ.

ಆಟೋ ಚಾಲಕರ ಸಂಘಟನೆಗಳೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಪ್ರಯೋಜನವಾಗಿಲ್ಲ, ಹಾಗಾಗಿ ಕೋರ್ ಕಮಿಟಿ ಸಭೆಯಲ್ಲಿ ಆಟೋ ಖರೀದಿಗೆ ಸುಲಭವಾಗಿ ಬ್ಯಾಂಕ್ ಸೌಲಭ್ಯ ಕಲ್ಪಿಸುವುದು, ಸಹಾಯಧನದ ಮೊತ್ತ ಹೆಚ್ಚಳ ಅಥವಾ ಸಾಲ ಸೌಲಭ್ಯಕ್ಕೆ ಹೆಚ್ಚಿನ ಸಹಾಯಧನ ನೀಡುವುದು ಇತ್ಯಾದಿ ವಿಚಾರಣೆಗಳ ಕುರಿತು ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ರಾಜ್ಯಸ ಸರ್ಕಾರದ 2017-18ನೇ ಸಾಲಿನ ಬಜೆಟ್ನಲ್ಲಿ 2018ರ ಏಪ್ರಿಲ್ 1ರಿಂದ ಎರಡು ಸ್ಟ್ರೋಕ್ ಆಟೋಗಳನ್ನು ರದ್ದುಗೊಳಿಸುವುದಾಗಿ ತಿಳಿಸಿತ್ತು. 10 ಸಾವಿರ ಎರಡು ಸ್ಟ್ರೋಕ್ ಆಟೋಗಳನ್ನು 4 ಸ್ಟ್ರೋಕ್ ಆಟೋಗಳಿಗೆ ಬದಲಿಸಿಕೊಳ್ಳಲು ತಲಾ 30 ಸಾವಿರದಂತೆ ಸಹಾಯಧನ ನೀಡಲು 30 ಕೋಟಿ ಅನುದಾನ ನೀಡಿತ್ತು. ಆದರೆ ಇದುವರೆಗೂ ಈ ಕಾರ್ಯ ಅಪೂರ್ಣವಾಗಿಯೇ ಉಳಿದಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications