ಬೆಂಗಳೂರಿನ ಬೀದಿ ನಾಯಿಗಳಿಗೆ ಸಿಹಿಸುದ್ದಿ ಕೊಟ್ಟ ಸರ್ಕಾರ!
ಬೆಂಗಳೂರು, ಜುಲೈ 30: ಬೆಂಗಳೂರಿನಲ್ಲಿ ಬೀದಿ ನಾಯಿಗಳನ್ನು ಹಿಡಿದು ಆಶ್ರಯ ಮನೆಗಳಿಗೆ ಸ್ಥಳಾಂತರಿಸದಿರುವುದಕ್ಕೆ ಕರ್ನಾಟಕದ ಪಶುಸಂಗೋಪನಾ ಇಲಾಖೆಯು ನಿರ್ಧರಿಸಿದೆ. ನಗರದ ನಿವಾಸಿಗಳು ಬೀದಿ ನಾಯಿಗಳನ್ನು ಹಿಡಿಯದಂತೆ ಅಭಿಪ್ರಾಯವನ್ನು ಹಂಚಿಕೊಂಡ ಬೆನ್ನಲ್ಲೇ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.
ಪಶುಸಂಗೋಪನಾ ಇಲಾಖೆ ತನ್ನ ಹಿಂದಿನ ಆದೇಶವನ್ನು ಸ್ಪಷ್ಟಪಡಿಸಿದ್ದು, ಬೆಂಗಳೂರಿನ ಬೀದಿಗಳಲ್ಲಿ ಬೀದಿ ನಾಯಿಗಳು ಉಳಿಯಲಿವೆ ಎಂದು ಹೇಳಿದೆ. ಬೆಂಗಳೂರಿನಿಂದ ನಾಯಿಗಳನ್ನು ಸ್ಥಳಾಂತರಿಸದಿರಲು ಬಿಬಿಎಂಪಿ, ಪಶುಸಂಗೋಪನಾ ಇಲಾಖೆ ನಿರ್ಧರಿಸಿದೆ.
ಬೆಂಗಳೂರಿನ ನಿವಾಸಿಗಳು ದೂರು ನೀಡಿದ್ದಲ್ಲಿ ಮಾತ್ರ ಅಂಥ ಪ್ರದೇಶಗಳಲ್ಲಿ ಶ್ವಾನಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲಾಗುವುದು ಎಂದು ಪಶು ಸಂಗೋಪನಾ ಇಲಾಖೆೆ ಹೊರಡಿಸಿದ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಸರ್ಕಾರದ ನಿರ್ಧಾರಕ್ಕೂ ಮೊದಲು ಸಚಿವರ ಮಹತ್ವದ ಸಭೆ
ಬಿಬಿಎಂಪಿ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪರಸ್ಪರ ಸಮಾಲೋಚನೆ ನಡೆಸಿದ ನಂತರದಲ್ಲಿ ಸೂಕ್ತ ಕ್ರಮ ತೆೆಗೆದುಕೊಳ್ಳಲಾಗುವುದು. ನಂತರ ನಗರದ ಬೀದಿಗಳಲ್ಲಿ ಶ್ವಾನಗಳನ್ನು ಹಿಡಿಯುವುದರ ಬದಲಿಗೆ ಬೇರೆ ಕ್ರಮಕ್ಕೆ ನಿರ್ಧರಿಸಲಾಗಿದೆ ಎಂದು ಸಚಿವ ಪ್ರಭು ಬಿ ಚವ್ಹಾಣ್ ಸ್ಪಷ್ಟಪಡಿಸಿದ್ದಾರೆ. ಇದರ ಜೊತೆಗೆ ನಾಯಿಗಳನ್ನು ಗುರುತಿಸಿ ಅವುಗಳಿಗೆ "ಲಸಿಕೆ" ಹಾಕಲು ನಿರ್ಧರಿಸಲಾಗಿ ಎಂದು ಹೇಳಿದ್ದಾರೆ.

ಬೆಂಗಳೂರಿನ ಶ್ವಾನಗಳಿಗೆ ಬಂಜೆತನದ ಲಸಿಕೆ
ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಹಿಂದೆಯೂ ಸರ್ಕಾರದ ಹಲವು ರೀತಿಯ ಕ್ರಮಗಳನ್ನು ತೆಗೆದುಕೊಂಡಿದೆ. ಅದೇ ರೀತಿ ಈ ಸಂಬಂಧ ರಾಜ್ಯ ಪಶುಸಂಗೋಪನಾ ಸಚಿವ ಪ್ರಭು ಬಿ ಚೌಹಾಣ್ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪಶುಸಂಗೋಪನಾ ಇಲಾಖೆಗೆ ಸಂಬಂಧಿಸಿದ ಅಧಿಕಾರಿಗಳ ಜೊತೆಗೂ ಚರ್ಚಿಸಿದರು. ಈ ವೇಳೆ ಶ್ವಾನಗಳಿಗೆ "ಬಂಜೆತನ ಮತ್ತು ರೇಬಿಸ್ ವಿರುದ್ಧ" ಲಸಿಕೆ ಹಾಕಲು ನಿರ್ಧರಿಸಲಾಗಿದೆ.

ಪ್ರತಿನಿತ್ಯ 400 ಶ್ವಾನಗಳಿಗೆ ಲಸಿಕೆ ವಿತರಣೆ
ಬೀದಿ ನಾಯಿಗಳಲ್ಲಿ ಬಂಜೆತನದ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ, ಪಶುಪಾಲನೆ ಮತ್ತು ಬಿಬಿಎಂಪಿ ಪ್ರತಿದಿನ 400ಕ್ಕೂ ಹೆಚ್ಚು ನಾಯಿಗಳಿಗೆ ಲಸಿಕೆ ಹಾಕಲು ನಿರ್ಧರಿಸಿದೆ. ಲಸಿಕೆ, ಚಿಕಿತ್ಸೆ, ಆ್ಯಂಟಿಬಯೋಟಿಕ್ ಲಸಿಕೆಗಳನ್ನು ನೀಡಲು ಮತ್ತು ಅವರ ಪ್ರದೇಶಗಳಲ್ಲಿ ಅವರಿಗೆ ಆಶ್ರಯ ನೀಡಲು ಬಿಬಿಎಂಪಿ ಮತ್ತು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸರಿಯಾದ ನಿರ್ದೇಶನ ನೀಡಲಾಗುವುದು ಎಂದು ಸಚಿವ ಚೌಹಾಣ್ ತಿಳಿಸಿದ್ದಾರೆ.

ನಾಯಿಗಳ ಸ್ಥಳಾಂತರ ಮತ್ತು ಹಿಡಿಯಲು ನಿರ್ದೇಶನ ನೀಡಿಲ್ಲ
ಬೆಂಗಳೂರಿನ ಬೀದಿ ನಾಯಿಗಳನ್ನು ಹಿಡಿಯುವುದಕ್ಕೆ ಅಥವಾ ನಾಯಿಗಳನ್ನು ಸ್ಥಳಾಂತರಿಸಲು ಯಾವುದೇ ನಿರ್ದೇಶನವನ್ನು ನೀಡಲಾಗುವುದಿಲ್ಲ. ಬೆಂಗಳೂರಿನ ಬೀದಿಗಳಲ್ಲಿ ಬೀದಿ ನಾಯಿಗಳನ್ನು ಓಡಿಸಬಾರದು ಎಂದು ಪಶುಸಂಗೋಪನಾ ಇಲಾಖೆ ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications