ನಾಡಗೀತೆ 2 ನಿಮಿಷ 50 ಸೆಕೆಂಡ್ ಹಾಡಿದರೆ ಸಾಕು: ತಜ್ಞರ ನಿರ್ಧಾರ
ಬೆಂಗಳೂರು, ನವೆಂಬರ್ 15: ರಾಷ್ಟ್ರಕವಿ ಕುವೆಂಪು ರಚಿತ ಜೈ ಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಯಾವುದೇ ಧಾಟಿಯಲ್ಲಿ ಹಾಡಿದರೂ ಎರಡೂವರೆ ನಿಮಿಷದಲ್ಲಿ ಮುಗಿಸಬೇಕು ಎಂಬ ಪ್ರಸ್ತಾವನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದೆ.
ಈಗಾಗಲೇ ಸ್ವೀಕೃತವಾದ ನಾಡಗೀತೆಯನ್ನು ಅಪಭ್ರಂಶವಿಲ್ಲದೇ, ಯಾವುದೇ ಪದಗಳನ್ನು ತೆಗೆಯದೆ ಎರಡೂವರೆ ನಿಮಿಷದಲ್ಲಿ ಹಾಡಬಹುದು ಎಂಬುದನ್ನು ಬುಧವಾರ ನಡೆದ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಧಾಟಿ ಯಾವುದು: 2003ರ ಜನವರಿ 7ರಂದು ಕುವೆಂಪು ರಚಿತ ಕವನವನ್ನು ನಾಡಗೀತೆಯಾಗಿ ಅಂಗೀಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ನಂತರ ಹಿರಿಯ ಸಾಹಿತಿ ದಿ ಜಿಎಸ್ ಶಿವರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಸಂಗೀತ ನಿರ್ದೇಶಕ ಎಚ್ಕೆ ನಾರಾಯಣ, ವಸಂತ ಕನಕಾಪುರ, ಡಾ ಸಿದ್ದಲಿಂಗಯ್ಯ ಅವರ ಸಮಿತಿ ರಚಿಸಿ ಧಾಟಿ ಯಾವುದಿರಬೇಕು ಎಂಬುದರ ವರದಿ ನೀಡುವಂತೆ ಸರ್ಕಾರ ಸೂಚಿಸಿತ್ತು.

ಬಳಿಕ 2013ರಲ್ಲಿ ವಸಂತ ಕನಕಾಪುರ ಅವರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚನೆ ಮಾಡಿತ್ತು, ಆದರೆ ವರದಿ ಸಲ್ಲಿಸುವುದಕ್ಕೂ ಮೊದಲೇ ಕನಕಾಪು ಅವರು ನಿಧನ ಹೊಂದಿದರು. ಬಳಿಕ ಚೆನ್ನವೀರ ಕಣವಿ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು .2014ರ ಮೇ ತಿಂಗಳಲ್ಲಿ ಸಮಿತಿ ವರದಿ ನೀಡಿತ್ತು. ಆದರೆ ಇದುವರೆಗೂ ಅದು ಅನುಷ್ಠಾನಕ್ಕೆ ಬಂದಿಲ್ಲ.
ಈ ಕುರಿತು ಬುಧವಾರ ಬೆಳಗ್ಗೆ ನಡೆದ ಸಭೆಯಲ್ಲಿ ಪ್ರೊ. ಚಂದ್ರಶೇಖರ ಪಾಟೀಲ, ನಾಡೋಜ ಕಮಲಾ ಹಂಪನಾ, ವೈಕೆ ಮುದ್ದುಕೃಷ್ಣ, ಕಿಕ್ಕೇರಿ ಶ್ರೀನಿವಾಸ್ ಸಮ್ಮುಖದಲ್ಲಿ ನಾಡಗೀತೆಯ ಅವಧಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್












Click it and Unblock the Notifications