ನಾಡಗೀತೆ 2 ನಿಮಿಷ 50 ಸೆಕೆಂಡ್ ಹಾಡಿದರೆ ಸಾಕು: ತಜ್ಞರ ನಿರ್ಧಾರ
ಬೆಂಗಳೂರು, ನವೆಂಬರ್ 15: ರಾಷ್ಟ್ರಕವಿ ಕುವೆಂಪು ರಚಿತ ಜೈ ಭಾರತ ಜನನಿಯ ತನುಜಾತೆ ನಾಡಗೀತೆಯನ್ನು ಯಾವುದೇ ಧಾಟಿಯಲ್ಲಿ ಹಾಡಿದರೂ ಎರಡೂವರೆ ನಿಮಿಷದಲ್ಲಿ ಮುಗಿಸಬೇಕು ಎಂಬ ಪ್ರಸ್ತಾವನೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಸರ್ಕಾರಕ್ಕೆ ಸಲ್ಲಿಸಲು ನಿರ್ಧರಿಸಿದೆ.
ಈಗಾಗಲೇ ಸ್ವೀಕೃತವಾದ ನಾಡಗೀತೆಯನ್ನು ಅಪಭ್ರಂಶವಿಲ್ಲದೇ, ಯಾವುದೇ ಪದಗಳನ್ನು ತೆಗೆಯದೆ ಎರಡೂವರೆ ನಿಮಿಷದಲ್ಲಿ ಹಾಡಬಹುದು ಎಂಬುದನ್ನು ಬುಧವಾರ ನಡೆದ ತಜ್ಞರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಧಾಟಿ ಯಾವುದು: 2003ರ ಜನವರಿ 7ರಂದು ಕುವೆಂಪು ರಚಿತ ಕವನವನ್ನು ನಾಡಗೀತೆಯಾಗಿ ಅಂಗೀಕರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ನಂತರ ಹಿರಿಯ ಸಾಹಿತಿ ದಿ ಜಿಎಸ್ ಶಿವರುದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ಸಂಗೀತ ನಿರ್ದೇಶಕ ಎಚ್ಕೆ ನಾರಾಯಣ, ವಸಂತ ಕನಕಾಪುರ, ಡಾ ಸಿದ್ದಲಿಂಗಯ್ಯ ಅವರ ಸಮಿತಿ ರಚಿಸಿ ಧಾಟಿ ಯಾವುದಿರಬೇಕು ಎಂಬುದರ ವರದಿ ನೀಡುವಂತೆ ಸರ್ಕಾರ ಸೂಚಿಸಿತ್ತು.

ಬಳಿಕ 2013ರಲ್ಲಿ ವಸಂತ ಕನಕಾಪುರ ಅವರ ಅಧ್ಯಕ್ಷತೆಯಲ್ಲಿ ಮತ್ತೊಂದು ಸಮಿತಿ ರಚನೆ ಮಾಡಿತ್ತು, ಆದರೆ ವರದಿ ಸಲ್ಲಿಸುವುದಕ್ಕೂ ಮೊದಲೇ ಕನಕಾಪು ಅವರು ನಿಧನ ಹೊಂದಿದರು. ಬಳಿಕ ಚೆನ್ನವೀರ ಕಣವಿ ಅವರ ಅಧ್ಯಕ್ಷತೆಯಲ್ಲಿ ಸರ್ಕಾರ ಸಮಿತಿ ರಚಿಸಿತ್ತು .2014ರ ಮೇ ತಿಂಗಳಲ್ಲಿ ಸಮಿತಿ ವರದಿ ನೀಡಿತ್ತು. ಆದರೆ ಇದುವರೆಗೂ ಅದು ಅನುಷ್ಠಾನಕ್ಕೆ ಬಂದಿಲ್ಲ.
ಈ ಕುರಿತು ಬುಧವಾರ ಬೆಳಗ್ಗೆ ನಡೆದ ಸಭೆಯಲ್ಲಿ ಪ್ರೊ. ಚಂದ್ರಶೇಖರ ಪಾಟೀಲ, ನಾಡೋಜ ಕಮಲಾ ಹಂಪನಾ, ವೈಕೆ ಮುದ್ದುಕೃಷ್ಣ, ಕಿಕ್ಕೇರಿ ಶ್ರೀನಿವಾಸ್ ಸಮ್ಮುಖದಲ್ಲಿ ನಾಡಗೀತೆಯ ಅವಧಿ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಯಿತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications