ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಮಿತ್ ಷಾ ಆಜ್ಞೆಯಂತೆ ಗಲಭೆ ಮಾಡುತ್ತಿರುವ ಬಿಜೆಪಿ: ಡಿಕೆಶಿ

By Manjunatha
|
Google Oneindia Kannada News

ಬೆಂಗಳೂರು, ಡಿಸೆಂಬರ್ 15: ಬಿಜೆಪಿ ಪಕ್ಷ ಸುಳ್ಳಿನ ಕಂತೆ ಎಂದು ರಾಜ್ಯ ಇಂಧನ ಸಚಿವ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಮಿತ್ ಷಾ ಆದೇಶದ ಪ್ರಕಾರ ಬಿಜೆಪಿಯವರು ನಡೆದುಕೊಳ್ಳುತ್ತಿದ್ದಾರೆ, ಅವರು ಗಲಭೆ ಮಾಡಲು ಆದೇಶ ನೀಡಿದ್ದಾರೆಂದು ಸ್ವತಃ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿರುವುದನ್ನು ರಾಜ್ಯವೇ ನೋಡಿದೆ ಎಂದರು.

State BJP fallowing orders of Amith shah who told to create riots:DKS

ಅಧಿಕೃತ ಪ್ರತಿಪಕ್ಷ ಮುಖಂಡ ಈಶ್ವರಪ್ಪ ಸುಳ್ಳನ್ನ ಪದೇ ಪದೇ ಹೇಳಿ ಅಂತಾ ಕಾರ್ಯಕರ್ತರಿಗೆ ಪಾಠ ಮಾಡಿದ್ದಾರೆ. ಇದೀಗ ಜೈಲ್ ಭರೋ ಅನ್ನೋ ಹೊಸ ನಾಟಕ ಶುರು ಮಾಡಲು ಹೊರಟಿದ್ದಾರೆ. ನಾಲ್ಕೂವರೆ ವರ್ಷ ಸುಮ್ಮನಿದ್ದ ಬಿಜೆಪಿ ಮುಖಂಡರು ಇದೀಗ ಹೋರಾಟ ಶುರು ಮಾಡಿದ್ಯಾಕೆ ? ಎಂದು ಅವರು ಪ್ರಶ್ನಿಸಿದರು.ಗಲಾಟೆ, ಗಲಭೆ, ಕೀಳು ಮಾತುಗಳೇ ಬಿಜೆಪಿ ಸಂಸ್ಕೃತಿ ತೋರಿಸುತ್ತೆ ಎಂದು ಅವರು ಬಿಜೆಪಿ ಮೇಲೆ ಹರಿಹಾಯ್ದರು.

ಅದೇ ವೇಳೆ ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದ ಮೇರೆಗೆ ಪಕ್ಷದಿಂದ ರಾಜ್ಯದಲ್ಲಿ ಎರಡು ಯಾತ್ರೆ ಮಾಡ್ತಿದ್ದೇವೆ. ಪಕ್ಷದಲ್ಲಿ ಯಾವುದೇ ಆಂತರಿಕ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು.

English summary
Power minister DK Shivakumar said 'BJP is liars party, it is creating riots because Amith shah told them do' he also said there is no disputes in state congress party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X