2017ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಪ್ರಕಟ
ಎರಡನೇ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 2017ನೇ ಸಾಲಿನ 22 ಸಾರ್ವಜನಿಕ ರಜಾ ದಿನಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. 2017ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ 17 ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಿದೆ.
ಬೆಂಗಳೂರು, ನವೆಂಬರ್, 29: 2017ನೇ ಸಾಲಿನ ಅಧಿಕೃತ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 22 ರಜಾದಿನಗಳನ್ನು ಘೋಷಣೆ ಮಾಡಿದೆ. ಎಂದಿನಂತೆ ಎಲ್ಲಾ ಎರಡನೇ ಶನಿವಾರ ಮತ್ತು ಭಾನುವಾರದ ರಜಾ ದಿನಗಳು ಇರುತ್ತವೆ.
ಜ. 14 ಸಂಕ್ರಾತಿ, ಜ. 26 ಗಣರಾಜ್ಯೋತ್ಸವ, ಫೆ. 24 ಮಹಾಶಿವರಾತ್ರಿ, ಮಾ. 29 ಚಾಂದ್ರಮಾನ ಯುಗಾದಿ, ಏ.14 ಗುಡ್ ಫ್ರೈಡೆ, ಅಂಬೇಡ್ಕರ್ ಜಯಂತಿ, ಏ.29 ಬಸವ ಜಯಂತಿ, ಮೇ.1 ಕಾರ್ಮಿಕರ ದಿನಾಚರಣೆ, ಜೂ.26 ರಂಜಾನ್, ಆ.15 ಸ್ವಾತಂತ್ರ್ಯ ದಿನಾಚರಣೆ, ಆ.25 ಗಣೇಶ ಚತುರ್ಥಿ, ಸೆ.2 ಬಕ್ರೀದ್, ಸೆ.19 ಮಹಾಲಯ ಅಮಾವಾಸ್ಯೆ, ಸೆ.29. ಮಹಾನವಮಿ, ಆಯುಧ ಪೂಜೆ, ಸೆ.30. ವಿಜಯದಶಮಿ, ಅ.2 ಗಾಂಧಿ ಜಯಂತಿ, ಅ.5 ವಾಲ್ಮೀಕಿ ಜಯಂತಿ, ಅ.18 ನರಕ ಚತುರ್ದಶಿ, ಅ.20 ಬಲಿಪಾಡ್ಯಮಿ, ದೀಪಾವಳಿ, ನ.1 ಕನ್ನಡ ರಾಜ್ಯೋತ್ಸವ, ನ.6 ಕನಕದಾಸ ಜಯಂತಿ, ಡಿ.1 ಈದ್ ಮಿಲಾದ್, ಡಿ.25 ಕ್ರಿಸ್ ಮಸ್ ರಜಾ ದಿನಗಳಾಗಿವೆ.

ರಜಾ ಪಟ್ಟಿಯಲ್ಲಿ 9.4.2017 ಮತ್ತು 1.10.2017 ಭಾನುವಾರಗಳಂದು ಬಂದಿರುವ ಮಹಾವೀರ ಜಯಂತಿ ಮತ್ತು ಮೊಹರಂ ಕಡೇ ದಿನ ರಜಾದಿನಗಳನ್ನೊಳಗೊಂಡಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಕಾರ್ಯ ಸ್ಥಗಿತಗೊಳಿಸಬಹುದು. ತುರ್ತು ಕೆಲಸದ ಕುರಿತು ಇಲಾಖಾ ಮುಖ್ಯಸ್ಥರು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸರ್ಕಾರ ತಿಳಿಸಿದೆ.

ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬಾರದಿದ್ದಲ್ಲಿ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆ ಬದಲಾಗಿ ಹಬ್ಬದ ರಜಾ ಮಂಜೂರು ಮಾಡುವುದಾಗಿ ಸರ್ಕಾರ ತಿಳಿಸಿದೆ.
ಇನ್ನು ದಿನಾಂಕ 17.10.2017 ಮಂಗಳವಾರ ತುಲಾ ಸಂಕ್ರಮಣ ಹಾಗು ದಿನಾಂಕ 04.12.2017 ಸೋಮವಾರದ ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಲಾಗಿದೆ.
-
ವರ್ಷಾಂತ್ಯದೊಳಗೆ ಮಾಜಿ ಸೈನಿಕರಿಗೆ ಸರ್ಕಾರದಿಂದ ನಿವೇಶನ: ಕೃಷ್ಣ ಬೈರೇಗೌಡ ಭರವಸೆ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ












Click it and Unblock the Notifications