2017ನೇ ವರ್ಷದ ಸಾರ್ವತ್ರಿಕ ರಜಾದಿನಗಳ ಪಟ್ಟಿ ಪ್ರಕಟ
ಎರಡನೇ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ 2017ನೇ ಸಾಲಿನ 22 ಸಾರ್ವಜನಿಕ ರಜಾ ದಿನಗಳನ್ನು ರಾಜ್ಯ ಸರ್ಕಾರ ಘೋಷಿಸಿದೆ. 2017ನೇ ವರ್ಷಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ 17 ಪರಿಮಿತ ರಜಾ ದಿನಗಳ ಪಟ್ಟಿ ಪ್ರಕಟಿಸಿದೆ.
ಬೆಂಗಳೂರು, ನವೆಂಬರ್, 29: 2017ನೇ ಸಾಲಿನ ಅಧಿಕೃತ ರಜಾ ದಿನಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಒಟ್ಟು 22 ರಜಾದಿನಗಳನ್ನು ಘೋಷಣೆ ಮಾಡಿದೆ. ಎಂದಿನಂತೆ ಎಲ್ಲಾ ಎರಡನೇ ಶನಿವಾರ ಮತ್ತು ಭಾನುವಾರದ ರಜಾ ದಿನಗಳು ಇರುತ್ತವೆ.
ಜ. 14 ಸಂಕ್ರಾತಿ, ಜ. 26 ಗಣರಾಜ್ಯೋತ್ಸವ, ಫೆ. 24 ಮಹಾಶಿವರಾತ್ರಿ, ಮಾ. 29 ಚಾಂದ್ರಮಾನ ಯುಗಾದಿ, ಏ.14 ಗುಡ್ ಫ್ರೈಡೆ, ಅಂಬೇಡ್ಕರ್ ಜಯಂತಿ, ಏ.29 ಬಸವ ಜಯಂತಿ, ಮೇ.1 ಕಾರ್ಮಿಕರ ದಿನಾಚರಣೆ, ಜೂ.26 ರಂಜಾನ್, ಆ.15 ಸ್ವಾತಂತ್ರ್ಯ ದಿನಾಚರಣೆ, ಆ.25 ಗಣೇಶ ಚತುರ್ಥಿ, ಸೆ.2 ಬಕ್ರೀದ್, ಸೆ.19 ಮಹಾಲಯ ಅಮಾವಾಸ್ಯೆ, ಸೆ.29. ಮಹಾನವಮಿ, ಆಯುಧ ಪೂಜೆ, ಸೆ.30. ವಿಜಯದಶಮಿ, ಅ.2 ಗಾಂಧಿ ಜಯಂತಿ, ಅ.5 ವಾಲ್ಮೀಕಿ ಜಯಂತಿ, ಅ.18 ನರಕ ಚತುರ್ದಶಿ, ಅ.20 ಬಲಿಪಾಡ್ಯಮಿ, ದೀಪಾವಳಿ, ನ.1 ಕನ್ನಡ ರಾಜ್ಯೋತ್ಸವ, ನ.6 ಕನಕದಾಸ ಜಯಂತಿ, ಡಿ.1 ಈದ್ ಮಿಲಾದ್, ಡಿ.25 ಕ್ರಿಸ್ ಮಸ್ ರಜಾ ದಿನಗಳಾಗಿವೆ.

ರಜಾ ಪಟ್ಟಿಯಲ್ಲಿ 9.4.2017 ಮತ್ತು 1.10.2017 ಭಾನುವಾರಗಳಂದು ಬಂದಿರುವ ಮಹಾವೀರ ಜಯಂತಿ ಮತ್ತು ಮೊಹರಂ ಕಡೇ ದಿನ ರಜಾದಿನಗಳನ್ನೊಳಗೊಂಡಿರುವುದಿಲ್ಲ ಎಂದು ಸರ್ಕಾರ ತಿಳಿಸಿದೆ.
ಸಾರ್ವತ್ರಿಕ ರಜಾ ದಿನಗಳಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಕಾರ್ಯ ಸ್ಥಗಿತಗೊಳಿಸಬಹುದು. ತುರ್ತು ಕೆಲಸದ ಕುರಿತು ಇಲಾಖಾ ಮುಖ್ಯಸ್ಥರು ಸೂಕ್ತ ವ್ಯವಸ್ಥೆ ಮಾಡಬೇಕೆಂದು ಸರ್ಕಾರ ತಿಳಿಸಿದೆ.

ಮುಸಲ್ಮಾನ ಬಾಂಧವರ ಹಬ್ಬಗಳು ನಿಗದಿತ ದಿನಾಂಕದಂದು ಬಾರದಿದ್ದಲ್ಲಿ ಸರ್ಕಾರಿ ಸೇವೆಯಲ್ಲಿರುವ ಮುಸಲ್ಮಾನ ಬಾಂಧವರಿಗೆ ನಿಗದಿತ ರಜೆ ಬದಲಾಗಿ ಹಬ್ಬದ ರಜಾ ಮಂಜೂರು ಮಾಡುವುದಾಗಿ ಸರ್ಕಾರ ತಿಳಿಸಿದೆ.
ಇನ್ನು ದಿನಾಂಕ 17.10.2017 ಮಂಗಳವಾರ ತುಲಾ ಸಂಕ್ರಮಣ ಹಾಗು ದಿನಾಂಕ 04.12.2017 ಸೋಮವಾರದ ಹುತ್ತರಿ ಹಬ್ಬವನ್ನು ಆಚರಿಸಲು ಕೊಡಗು ಜಿಲ್ಲೆಗೆ ಮಾತ್ರ ಅನ್ವಯವಾಗುವಂತೆ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಲಾಗಿದೆ.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Davanagere By Election: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ: ಸಿ.ಎಂ ಸಿದ್ದರಾಮಯ್ಯ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ











Click it and Unblock the Notifications