ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಂತ್ರಸ್ಥರಿಗೆ 1 ರೂಪಾಯಿಯೂ ಸಿಕ್ಕಿಲ್ಲ: ಡಿಕೆ ಶಿವಕುಮಾರ್ ಅಸಮಾಧಾನ

|
Google Oneindia Kannada News

ಬೆಂಗಳೂರು, ಜೂನ್ 9: ಕೊರೊನಾ ಲಾಕ್‌ಡೌನ್ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ಹೊರ ಹಾಕಿದ್ದಾರೆ.

ಲಾಕ್‌ ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ಇಲ್ಲಿಯವರೆಗೂ ಒಂದು ರೂಪಾಯಿ ಸಹ ಸಿಕ್ಕಿಲ್ಲ ಎಂದು ಡಿಕೆ ಶಿವಕುಮಾರ್ ಆರೋಪ ಮಾಡಿದ್ದಾರೆ. ಪರಿಹಾರ ವಿತರಣೆಯ ಮಾನದಂಡವನ್ನು ಸರಳೀಕರಣಗೊಳಿಸಿ, ಸರ್ಕಾರವೇ ನೇರವಾಗಿ ಅವರ ಕೈಗೆ ಚೆಕ್ ವಿತರಣೆ ಮಾಡಬೇಕು ಎಂದು ಅವರು ಒತ್ತಾಯ ಮಾಡಿದ್ದಾರೆ.

ಪಡಿತರ ಚೀಟಿ ವಾಪಸ್; ಯಡಿಯೂರಪ್ಪಗೆ ಎಚ್ಚರಿಕೆ ಕೊಟ್ಟ ಡಿಕೆಶಿ! ಪಡಿತರ ಚೀಟಿ ವಾಪಸ್; ಯಡಿಯೂರಪ್ಪಗೆ ಎಚ್ಚರಿಕೆ ಕೊಟ್ಟ ಡಿಕೆಶಿ!

ರೈತರಿಗೆ, ಕಾರ್ಮಿಕರಿಗೆ, ಅಸಂಘಟಿತ ಕಾರ್ಮಿಕ ಯಾರಿಗೂ ಹಣ ಸಿಕ್ಕಿಲ್ಲ. ಯಾರೂ ಅರ್ಜಿ ಹಾಕಿ ಹೋಗಿದ್ದಾರೆ ಅವರಿಗೆ ಸಹಾಯ ಮಾಡಬೇಕು. ಇಲ್ಲದಿದ್ದರೆ,

State Government Failed To Handle Lockdown Period Says DK Shivakumar

ಸಂತ್ರಸ್ತರ ಪರವಾಗಿ ನಾವು ಧ್ವನಿ ಎತ್ತಿ ಹೋರಾಟ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ಕಾಂಗ್ರೆಸ್‌ ಟ್ವಿಟ್ಟರ್ ಖಾತೆಯಲ್ಲಿ ಡಿಕೆ ಶಿವಕುಮಾರ್ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಈಗಾಗಲೇ ಹಲವು ವಲಯಗಳಿಗೆ ಪರಿಹಾರ ಘೋಷಣೆ ಮಾಡಿದ್ದು, ಆ ಹಣ ಇನ್ನೂ ಸಂತ್ರಸ್ಥರಿಗೆ ಸೇರಿಲ್ಲ ಎಂದು ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ.

English summary
State government failed to handle lockdown period says karnataka pcc president DK Shivakumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X