Get Updates
Get notified of breaking news, exclusive insights, and must-see stories!

ನಾಸಿಕ್‌ನ ದೀಕ್ಷಾ ಭೂಮಿಗೆ ರಾಜ್ಯ ಸರ್ಕಾರದಿಂದ 23 ಬಸ್‌ಗಳ ಸೌಲಭ್ಯ

ಬೆಂಗಳೂರು, ಅಕ್ಟೋಬರ್ 17: ಭಾರತರತ್ನ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಬೌದ್ಧ ಧರ್ಮ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ದೀಕ್ಷಾ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳುವ ಯಾತ್ರಾರ್ಥಿಗಳಿಗೆ ರಾಜ್ಯದಿಂದ 23 ವಾಹನಗಳ ವ್ಯವಸ್ಥೆ ಮಾಡಲಾಗಿದ್ದು ಅದಕ್ಕೆ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹಸಿರು ನಿಶಾನೆ ತೋರಿದರು.

ಬಳಿಕ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರು ನಾಸಿಕ್‌ನಲ್ಲಿ ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಈ ದಿನವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಲಕ್ಷಾಂತರ ಯಾತ್ರಾರ್ಥಿಗಳು ಈ ಪುಣ್ಯ ಭೂಮಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ನಾಸಿಕ್‌ಗೆ ತೆರಳುತ್ತಾರೆ.

ಬೆಂಗಳೂರು ಹಾಗೂ ಕಲಬುರ್ಗಿಯಿಂದಲೂ ಸಾವಿರಾರು ಯಾತ್ರಾರ್ಥಿಗಳು ತೆರಳುತ್ತಾರೆ.ಇವರಿಗಾಗಿ ಒಟ್ಟು 23 ಐರಾವತ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ ಮೂರು ಬಸ್‌ಗಳು ಕಲಬುರ್ಗಿಯಿಂದ ತೆರಳಲಿವೆ ಎಂದರು.

State govt provides 23 buses to visit Deeksha Bhoomi

ಅಂಬೇಡ್ಕರ್‌ ಅವರ ತತ್ವ ಸಿದ್ಧಾಂತಗಳನ್ನು ಇಡೀ ವಿಶ್ವವೇ ಅನುಸರಿಸುತ್ತಿದೆ. ಈ ದಿನವನ್ನು ಆಚರಿಸಲು ಒಂದು ವಾರದಲ್ಲಿಯೇ ಒಂದು ಕೋಟಿಗೂ ಹೆಚ್ಚು ಜನ ತೆರಳುವ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ಹಜ್‌ ಮಾದರಿಯಲ್ಲೇ ಈ ಪುಣ್ಯಸ್ಥಳವು ಪ್ರಸಿದ್ಧಿ ಪಡೆದುಕೊಳ್ಳಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+