ನಾಸಿಕ್ನ ದೀಕ್ಷಾ ಭೂಮಿಗೆ ರಾಜ್ಯ ಸರ್ಕಾರದಿಂದ 23 ಬಸ್ಗಳ ಸೌಲಭ್ಯ
ಬೆಂಗಳೂರು, ಅಕ್ಟೋಬರ್ 17: ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಬೌದ್ಧ ಧರ್ಮ ದೀಕ್ಷೆ ಪಡೆದ ಸ್ಥಳವಾದ ಮಹಾರಾಷ್ಟ್ರದ ನಾಸಿಕ್ನಲ್ಲಿರುವ ದೀಕ್ಷಾ ಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಲು ತೆರಳುವ ಯಾತ್ರಾರ್ಥಿಗಳಿಗೆ ರಾಜ್ಯದಿಂದ 23 ವಾಹನಗಳ ವ್ಯವಸ್ಥೆ ಮಾಡಲಾಗಿದ್ದು ಅದಕ್ಕೆ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಹಸಿರು ನಿಶಾನೆ ತೋರಿದರು.
ಬಳಿಕ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ನಾಸಿಕ್ನಲ್ಲಿ ಬೌದ್ಧ ಧರ್ಮಕ್ಕೆ ದೀಕ್ಷೆ ಪಡೆದ ಈ ದಿನವನ್ನು ದೇಶದೆಲ್ಲೆಡೆ ವಿಜೃಂಭಣೆಯಿಂದ ಆಚರಿಸುತ್ತಿದ್ದಾರೆ. ಲಕ್ಷಾಂತರ ಯಾತ್ರಾರ್ಥಿಗಳು ಈ ಪುಣ್ಯ ಭೂಮಿಗೆ ತೆರಳಿ ಪ್ರಾರ್ಥನೆ ಸಲ್ಲಿಸಲು ನಾಸಿಕ್ಗೆ ತೆರಳುತ್ತಾರೆ.
ಬೆಂಗಳೂರು ಹಾಗೂ ಕಲಬುರ್ಗಿಯಿಂದಲೂ ಸಾವಿರಾರು ಯಾತ್ರಾರ್ಥಿಗಳು ತೆರಳುತ್ತಾರೆ.ಇವರಿಗಾಗಿ ಒಟ್ಟು 23 ಐರಾವತ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಈ ಪೈಕಿ ಮೂರು ಬಸ್ಗಳು ಕಲಬುರ್ಗಿಯಿಂದ ತೆರಳಲಿವೆ ಎಂದರು.

ಅಂಬೇಡ್ಕರ್ ಅವರ ತತ್ವ ಸಿದ್ಧಾಂತಗಳನ್ನು ಇಡೀ ವಿಶ್ವವೇ ಅನುಸರಿಸುತ್ತಿದೆ. ಈ ದಿನವನ್ನು ಆಚರಿಸಲು ಒಂದು ವಾರದಲ್ಲಿಯೇ ಒಂದು ಕೋಟಿಗೂ ಹೆಚ್ಚು ಜನ ತೆರಳುವ ನಿರೀಕ್ಷೆ ಇದೆ. ಮುಂದಿನ ದಿನಗಳಲ್ಲಿ ಹಜ್ ಮಾದರಿಯಲ್ಲೇ ಈ ಪುಣ್ಯಸ್ಥಳವು ಪ್ರಸಿದ್ಧಿ ಪಡೆದುಕೊಳ್ಳಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ ಖರ್ಗೆ ಉಪಸ್ಥಿತರಿದ್ದರು.
-
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications