ಮೆಟ್ರೋ-ಬಿಎಂಟಿಸಿ ಸಂಚಾರಕ್ಕೆ ಕಾಮನ್ ಫೇರ್ ಕಾರ್ಡ್ ಜಾರಿಗೆ ಚಿಂತನೆ
ಬೆಂಗಳೂರು, ಅಕ್ಟೋಬರ್ 26: ಮೆಟ್ರೋ ಹಾಗೂ ಬಿಎಂಟಿಸಿ ನಡುವೆ ಸಂಚರಿಸಲು ಕಾಮನ್ಫೇರ್ ಕಾರ್ಡ್ ಪರಿಚಯಿಸಲು ಚಿಂತಿಸಿದ್ದು, ಉಪಚುನಾವಣೆ ಬಳಿಕ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.
ಬಿಎಂಆರ್ಸಿಎಲ್ನ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.ನಿತ್ಯ ಮೆಟ್ರೋದಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದು, ಆರು ಬೋಗಿಯನ್ನು ಹಂತ ಹಂತವಾಗಿ ಮಾಡುವುದರಿಂದ ಈ ಸಂಖ್ಯೆ ದ್ವಿಗುಣವಾಗಲಿದೆ ಎಂದರು.
ಬಿಎಂಟಿಸಿ ಹಾಗೂ ಮೆಟ್ರೋನಲ್ಲಿ ಸಂಚರಿಸಲು ಒಂದೇ ಕಾರ್ಡ್ ಪರಿಚಯಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಈ ಸಂಬಂಧ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡಲಾಗುವುದು ಎಂದರು.

ಜೊತೆಗೆ, ಬಿಎಂಟಿಸಿ,ಬಿಬಿಎಂಪಿ, ಬಿಡಬ್ಲ್ಯೂಎಸ್ಎಸ್ಬಿ, ಬಿಎಂಆರ್ಡಿಎ,ಮೆಟ್ರೋ ಎಲ್ಲ ಮೆಟ್ರೋ ಪಾಲಿಟಿಕ್ ನಿಗಮಗಳ ಸಮನ್ವಯತೆ ಕಾಪಾಡಲು ಕ್ರಮ ಕೈಗೊಳ್ಳಲು ಚಿಂತಿಸಲಾಗಿದೆ ಎಂದರು.
ಮೆಟ್ರೋ ನಿಗಮದಿಂದ ತಿಂಗಳಿಗೆ 30 ಕೋಟಿ ಆದಾಯ ಬರುತ್ತಿದ್ದು, 24 ಕೋಟಿ ರೂ. ವೆಚ್ಚವಾಗುತ್ತಿದೆ. ಸೆಕ್ಯೂರಿಟಿ, ಟಿಕೆಟ್ ವಿತರಕರು ಸೇರಿದಂತೆ ಅನಗತ್ಯ ಮಾನವಸಂಪನ್ಮೂಲ ಬಳಕೆಗೆ ಕಡಿವಾಣ ಹಾಕಿ, ತಿಂಗಳಿಗೆ ಕನಿಷ್ಠ 5 ಕೋಟಿ ರೂ. ವೆಚ್ಚ ಕಡಿಮೆ ಮಾಡಲು ಸೂಚಿಸಿದ್ದೇನೆ ಎಂದರು.
ಮೆಟ್ರೋ ಎರಡನೇ ಹಂತ 2020 ರವೇಳೆಗೆ ಮೈಸೂರು ರಸ್ತೆ, ತುಮಕೂರು ರಸ್ತೆ ಸಂಪೂರ್ಷವಾಗಲಿದೆ. ವೈಟ್ಫೀಲ್ಡ್, ಆರ್ವಿ ರಸ್ತೆ, ಬೊಮ್ಮಸಂದ್ರ ಮಾರ್ಗವು 2021ಕ್ಕೆ ಪೂರ್ಣಗೊಂಡರೆ, ಗೊಟ್ಟಿಗೆರೆ , ನಾಗವಾರ ಮಾರ್ಗ 2023 ಕ್ಕೆ ಮುಗಿಯಲಿದೆ. ಈ ಹಂತಕ್ಕೆ 26,405 ಕೋಟಿ ರು. ವೆಚ್ಚವಾಗಲಿದೆ.ಆದರೆ ಪೂರ್ಣಗೊಳ್ಳುವ ಒಳಗಾಗಿ 32 ಸಾವಿರ ಕೋಟಿಗೆ ತಲುಪಬಹುದು ಎಂದರು.
ಏರ್ಪೋರ್ಟ್ ಮಾರ್ಗದ ಮೆಟ್ರೋ ನಿರ್ಮಾಣದ ವಿಚಾರ ಇನ್ನು 15 ದಿನದೊಳಗೆ ಸಚಿವ ಸಂಪುಟಕ್ಕೆ ತೆಗೆದುಕೊಂಡು ಹೋಗಲಿದ್ದೇವೆ ಎಂದು ಮಾಹಿತಿ ನೀಡಿದರು.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
BMTC: ಉಚಿತ ಬಸ್ ಪ್ರಯಾಣದ ಹೊರೆ, ಆರ್ಥಿಕ ಸಂಕಷ್ಟದಲ್ಲಿ ಬಿಎಂಟಿಸಿ; ಸರ್ಕಾರದಿಂದ ₹850 ಕೋಟಿ ಪಾವತಿ ವಿಳಂಬ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ












Click it and Unblock the Notifications