Get Updates
Get notified of breaking news, exclusive insights, and must-see stories!

ಯುವಜನರಿಗಾಗಿ ರಾಜ್ಯ ಮಟ್ಟದ ''ಗಾಂಧಿಗೆ ಒಂದು ಪತ್ರ'' ಲೇಖನ ಸ್ಪರ್ಧೆ

ಬೆಂಗಳೂರು, ಡಿ. 22: ಕರ್ನಾಟಕ ಸರ್ವೋದಯ ಮಂಡಲವು ಮುಂಬರುವ 2021 ಜನವರಿ 30 ಸರ್ವೋದಯ ದಿನದ ಸಂದರ್ಭದಲ್ಲಿ ರಾಜ್ಯ ಮಟ್ಟದ ಲೇಖನ ಸ್ಪರ್ಧೆಯನ್ನು ಆಯೋಜಿಸಿದೆ.

'ಸರ್ವೋದಯ ಸಮಾಜ ಸೃಷ್ಟಿಯ ಸಾಧ್ಯತೆಗಳು - ಒಂದು ವಿಶ್ಲೇಷಣೆ' ಲೇಖನದ ವಸ್ತುವಾಗಿದ್ದು, ಗಾಂಧಿ ಚಿಂತನೆ ಹಾಗೂ ಇಂದಿನ ಪರಿಸ್ಥಿತಿ ಮತ್ತು ಸವಾಲುಗಳನ್ನು ಕುರಿತು 'ಗಾಂಧಿಗೆ ಒಂದು ಪತ್ರ' ಈ ಎರಡು ಕನ್ನಡ ಲೇಖನ ಸ್ಪರ್ಧೆಗಳಲ್ಲಿ 15-30 ವಯೋಮಿತಿಯ ಯುವಜನರು ಮಾತ್ರ ಭಾಗವಹಿಸಬಹುದು.

ಪತ್ರ ಲೇಖನದಲ್ಲಿ ಭಾಗವಹಿಸುವ ಸ್ಪರ್ಧಿಗಳು ಕಡ್ಡಾಯವಾಗಿ ಅಂಚೆ ಕಚೇರಿಯಲ್ಲಿ ದೊರಕುವ ಅಂತರ್ದೇಶೀಯ ಪತ್ರ (ಇನ್‍ಲ್ಯಾಂಡ್ ಲೆಟರ್) ದಲ್ಲಿ ತಮ್ಮ ಸ್ವಂತ ಕೈ ಬರಹದಲ್ಲಿ ಬರೆಯಬೇಕು. ಉಳಿದಂತೆ ಲೇಖನ ಸ್ಪರ್ಧಿಗಳು ಎ4 ಅಳತೆಯ ಮೂರು ಪುಟಗಳಿಗೆ ಮೀರದಂತೆ ತಮ್ಮ ಬರಹಗಳನ್ನು ಸೀಮಿತಗೊಳಿಸಬೇಕು. ಗಾಂಧಿ ವಿಚಾರಕ್ಕೆ ಮೀಸಲಾದ ಕನ್ನಡ-ಇಂಗ್ಲಿಷ್ ದ್ವೈಮಾಸಿಕ 'ಅಮರ ಬಾಪು ಚಿಂತನ' ಸಹಯೋಗದಲ್ಲಿ ಈ ಸ್ಪರ್ಧೆ ನಡೆಯಲಿದ್ದು ಭಾಗವಹಿಸಿದ ಎಲ್ಲರಿಗೂ ಇ-ಪ್ರಮಾಣ ಪತ್ರ ನೀಡಲಾಗುವುದು ಮತ್ತು ತೀರ್ಪುಗಾರರು ಆಯ್ಕೆ ಮಾಡಿದ ಲೇಖನಗಳನ್ನು ಅಮರ ಬಾಪು ಚಿಂತನ ಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.

State Level Essay competition on Sarvodaya Society and Gandhian philosophy

ಸ್ಪರ್ಧಿಗಳು ತಮ್ಮ ಲೇಖನ/ಪತ್ರಗಳನ್ನು ಸಂಪಾದಕರು, ಅಮರ ಬಾಪು ಚಿಂತನ, ಗಾಂಧೀಭವನ, ಕುಮಾರ ಪಾರ್ಕ್ ಪೂರ್ವ, ಬೆಂಗಳೂರು-560001 ಈ ವಿಳಾಸಕ್ಕೆ ಜನವರಿ 19, 2021ರೊಳಗೆ ತಲುಪುವಂತೆ ಕಳುಹಿಸಬೇಕು. ಸ್ಪರ್ಧಿಗಳು ತಮ್ಮ ಜನ್ಮ ದಿನಾಂಕ - ವರ್ಷ ಮತ್ತು ದೂರವಾಣಿ ಸಂಖ್ಯೆ ನಮೂದಿಸುವುದು ಕಡ್ಡಾಯ ಎಂದು ಆಯೋಜಕರು ತಿಳಿಸಿದ್ದಾರೆ.

Recommended Video

      Bangalore: ರೂಪಾಂತರಗೊಂಡ ಕೊರೊನಾ ವೈರಸ್‌ ಬಗ್ಗೆ ರಾಜ್ಯದಲ್ಲಿ ಕಟ್ಟೆಚ್ಚರ- ಸಿಎಂ ಯಡಿಯೂರಪ್ಪ ಮಾಹಿತಿ | Oneindia Kannada

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+