ಬೆಂಗಳೂರಿನಲ್ಲಿ ಮತ್ತಷ್ಟು ಸಿಸಿ ಕ್ಯಾಮೆರಾ ಕಣ್ಗಾವಲು
ಬೆಂಗಳೂರು, ಜು.15: ಸರಗಳ್ಳತನ ಸೇರಿದಂತೆ ಅಪರಾಧ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಗರದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲು ಮುಂದಾಗಿದ್ದಾರೆ.
ಮೊದಲ ಹಂತದಲ್ಲಿ ಸೆಂಟ್ರಲ್ ವಿಭಾಗದಿಂದ ಸಿಸಿ ಕ್ಯಾಮೆರಾ ಅಳವಡಿಸುವ ಪ್ರಕ್ರಿಯೆ ಆರಂಭವಾಗಲಿದ್ದು 18 ಸ್ಥಳಗಳನ್ನು ಗುರುತಿಸಲಾಗಿದೆ. 15 ದಿನದಲ್ಲಿ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಎಚ್.ಔರಾದ್ಕರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸಂಚಾರ ಪೊಲೀಸರು ಅಳವಡಿಸಿರುವ ಸಿಸಿ ಕ್ಯಾಮೆರಾ ಹೊರತುಪಡಿಸಿ, 8.5 ಕೋಟಿ ರೂ. ವೆಚ್ಚದಲ್ಲಿ ಈ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತದೆ. ಜನನಿಬಿಡ ಪ್ರದೇಶ, ಉದ್ಯಾನ, ಹೆಚ್ಚು ಸರಗಳವು ನಡೆದಿರುವ ಸ್ಥಳಗಳನ್ನು ಗುರುತಿಸಿ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತದೆ ಎಂದರು.[ಚಿಕ್ಕಣ್ಣ ಗಾರ್ಡನ್ ಸಿಸಿಟಿವಿ ಕಣ್ಗಾವಲಿನಲ್ಲಿದೆ]
ಇದಕ್ಕಾಗಿ ಪ್ರತ್ಯೇಕ ನಿಯಂತ್ರಣಾ ಕೊಠಡಿಯನ್ನು ಆಯುಕ್ತರ ಕಚೇರಿ ಸಮೀಪ ತೆರೆಯಲಿದ್ದು, ಈ ಸಿಸಿ ಕ್ಯಾಮೆರಾ ದೃಶ್ಯಾವಳಿ ವೀಕ್ಷಿಸಲು ಪೊಲೀಸ್ ನಿಯಂತ್ರಣಾ ಕೊಠಡಿಯಲ್ಲಿ ಪ್ರತ್ಯೇಕ ಸಿಬ್ಬಂದಿ ಇರುತ್ತಾರೆ ಎಂದರು.

ಸಿಬ್ಬಂದಿ ನೇಮಕ: ಜನವರಿ ವೇಳೆಗೆ ನಗರಕ್ಕೆ ಹೆಚ್ಚುವರಿ ಪೊಲೀಸರು ನಿಯೋಜನೆಗೊಳ್ಳಲಿದ್ದಾರೆ. 2500 ಸಾವಿರ ಸಿಬ್ಬಂದಿ ನೇಮಕಕ್ಕೆ 1 ಲಕ್ಷ ಅರ್ಜಿಗಳು ಬಂದಿದೆ. ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ನಡೆಯುತ್ತಿದೆ. ಜು. 30ರ ವೇಳೆಗೆ ದೈಹಿಕ ಪರೀಕ್ಷೆ ಮುಕ್ತಾಯವಾಗಲಿದ್ದು, ಸೆಪ್ಟಂಬರ್ ವೇಳೆಗೆ ಲಿಖಿತ ಪರೀಕ್ಷೆ ನಡೆದು, ಜನವರಿ ವೇಳೆಗೆ ಎಲ್ಲಾ ನೇಮಕಾತಿ ಪ್ರಕ್ರಿಯೆ ಮುಗಿಯಲಿದೆ ಎಂದು ತಿಳಿಸಿದರು.
ಟ್ರಾಫಿಕ್ ಪೊಲೀಸರಿಗೆ ಸನ್ಮಾನ: ಉತ್ತಮವಾಗಿ ಕಾರ್ಯನಿರ್ವಹಿಸಿದ 25 ಟ್ರಾಫಿಕ್ ಪೊಲೀಸರಿಗೆ 'ಹಾಡಿ ಹೊಗಳದ ಟ್ರಾಫಿಕ್ ಸಿಗ್ನಲ್ ಹೀರೋಗಳು' ಸನ್ಮಾನ ಕಾರ್ಯಕ್ರಮ ಜು.17 ರಂದು ನಡೆಯಲಿದೆ. ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ ಹಾಗೂ ಬಿ- ಪ್ಯಾಕ್, ಬೆಂಗಳೂರು ಸಂಚಾರ ಪೊಲೀಸರ ಸಹಯೋಗದೊಂದಿಗೆ ಇಮೇಲ್, ಫೇಸ್ಬುಕ್ ಮೂಲಕ ಸಾರ್ವಜನಿಕರ ಅಭಿಪ್ರಾಯ ಪಡೆದು 25 ಟ್ರಾಫಿಕ್ ಪೊಲೀಸರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಚಾರ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.[ಟ್ರಾಫಿಕ್ ಸಿಗ್ನಲ್ ಹೀರೋಗಳ ಹೆಸರನ್ನು ನೀವೇ ಸೂಚಿಸಿ]
ಸಂಚಾರ ನಿರ್ವಹಣಾ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಯೋಕಾನ್ ವ್ಯವಸ್ಥಾಪಕ ನಿರ್ದೇಶಕಿ ಕಿರಣ್ ಮಜುಮ್ದಾರ್ ಷಾ, ದಿ ವರ್ಲ್ಡ್ ಪೀಸ್ಕೀಪರ್ಸ್ ಮೂವ್ಮೆಂಟ್ನ ಸಿಇಒ ಅನಿಲ್ ಶೆಟ್ಟಿ, ಬಿ ಪ್ಯಾಕ್ ಸಿಇಒ ರೇವತಿ ಅಶೋಕ್ ಉಪಸ್ಥಿತರಿದ್ದರು.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ












Click it and Unblock the Notifications