PFI ಮೇಲೆ ಪೊಲೀಸರ ದಾಳಿ- ಜನರ ಮುಂದೆ ದಾಳಿಯ ಸತ್ಯಾಂಶ ಇಡಬೇಕು -ಎಚ್‌ಡಿಕೆ

ಬೆಂಗಳೂರು, ಸೆಪ್ಟೆಂಬರ್ 27: ಪಿಎಫ್ಐ ಸಂಘಟನೆ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿ ಆ ಸಂಘಟನೆಯ ಹಲವರನ್ನು ಬಂಧಿಸಿದ್ದು, ಈ ಬಗ್ಗೆ ರಾಜ್ಯದ ಜನತೆಯ ಮುಂದೆ ವಾಸ್ತವಾಂಶ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು.

ರಾಜ್ಯ ಸರಕಾರದ ಮೇಲೆ ಅನೇಕ ಆರೋಪಗಳಿವೆ. ನಾನು ಸ್ವತಃ ಬಿಎಂಎಸ್ ಶಿಕ್ಷಣ ಟ್ರಸ್ಟ್ ನಲ್ಲಿ ನಡೆದಿರುವ ಅಕ್ರಮ ಬಗ್ಗೆ ಸದನದಲ್ಲಿಯೇ ದಾಖಲೆಗಳ ಸಮೇತ ಮಾಹಿತಿ ನೀಡಿದ್ದೆ. ಇದಲ್ಲದೆ, ಅನೇಕ ಹಗರಣ, ಅಕ್ರಮಗಳ ಬಗ್ಗೆ ಜನರು ರೋಸಿ ಹೋಗಿದ್ದಾರೆ. ಒಂದು ವೇಳೆ ಪಿಎಫ್ಐ ಮೇಲೆ ನಡೆದಿರುವ ದಾಳಿ ಕುರಿತು ನೈಜ ಮಾಹಿತಿ ಕೊಡದಿದ್ದರೆ, ಆರೋಪ ಮತ್ತು ಹಗರಣಗಳ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಈ ದಾಳಿ ನಡೆಸಲಾಗಿದೆ ಎಂದು ಭಾವಿಸಬೇಕಾಗುತ್ತದೆ ಎಂದು ಮಾಜಿ ಸಿಎ‍ ಎಚ್‌ಡಿಕೆ ತಿಳಿಸಿದರು.

ಎರಡು ದಿನಗಳಿಂದ ಕರ್ನಾಟಕವೂ ಸೇರಿ ರಾಷ್ಟ್ರಮಟ್ಟದಲ್ಲಿ ಪಿಎಫ್ಐ ಮೇಲೆ NIA ನಿಂದ ದಾಳಿ ಆಗಿತ್ತು. ಆ ದಾಳಿ ಸಮಯದಲ್ಲಿ ಪಿಎಫ್ಐ ಸಂಘಟನೆಗಳ ವ್ಯಕ್ತಿಗಳ ಬಂಧನವೂ ಆಗಿತ್ತು. ಮತ್ತೆ ಕಳೆದ ರಾತ್ರಿ ರಾಜ್ಯದ ನಾನಾ ಭಾಗದಲ್ಲಿ ಮಧ್ಯರಾತ್ರಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದರು.

 ರಾಜ್ಯದ ಜನರಿಗೆ ವಾಸ್ತವಾಂಶ ತಿಳಿಯಬೇಕು

ರಾಜ್ಯದ ಜನರಿಗೆ ವಾಸ್ತವಾಂಶ ತಿಳಿಯಬೇಕು

ರಾಜ್ಯ ಪೊಲೀಸರು ನಡೆಸಿದ ದಾಳಿಯಲ್ಲಿ ಸಂಘಟನೆಯ ಕಾರ್ಯಕರ್ತರು, ಜಿಲ್ಲಾ ಅಧ್ಯಕ್ಷರ‌ ಬಂಧನವಾಗಿದೆ. ಮಧ್ಯರಾತ್ರಿಯಲ್ಲಿ ಕಾರ್ಯಾಚರಣೆ ಎನ್ನುವುದು ಸರಕಾರದ ಆದೇಶವೋ ಅಥವಾ ಪೊಲೀಸರ ಮಾಹಿತಿ ಆಧಾರದ ದಾಳಿಯ ಆಗಿದೆಯೋ ಗೊತ್ತಿಲ್ಲ. ಆದರೆ, ಕಾರ್ಯಾಚರಣೆ ಬಗ್ಗೆ ನಾಡಿನ ಜನರ ಮುಂದೆ ನಿಜವಾದ ವಾಸ್ತವವಾದ ಅಂಶ ಸರಕಾರ ಇಡಬೇಕು ಎಂದು ಎಚ್.ಡಿ. ಕುಮಾರ ಸ್ವಾಮಿ ಆಗ್ರಹಪಡಿಸಿದರು.

 ಸಂಘಟನೆಗಳ ಬಗ್ಗೆ ತನಿಖೆಯಾಗಬೇಕು

ಸಂಘಟನೆಗಳ ಬಗ್ಗೆ ತನಿಖೆಯಾಗಬೇಕು

ರಾಜ್ಯದಲ್ಲಿ ಏಕಾಏಕಿ ಈ ಬೆಳವಣಿಗೆಯಿಂದ ಯಾವುದೇ ಸಮಾಜದ ಮೇಲೆ ಆತಂಕ, ಭಯ ಸೃಷ್ಟಿ ಆಗಬಾರದು. ಇತ್ತೀಚೆಗೆ ಅನೇಕ ಸಂಘಟನೆಗಳು ತಮ್ಮ ಅಜೆಂಡಾ ಪೂರೈಸಲು ಕೆಲಸ ಮಾಡುತ್ತಿವೆ. ಅವುಗಳಿಗೆ ಅರ್ಥಿಕ ಶಕ್ತಿ ಹೇಗೆ ಬರ್ತಿದೆ? ಕೆಲ ಘಟನೆಗಳ ಹಿಂದೆ ಯಾವ ಸಂಘಟನೆಗಳಿವೆ ಎನ್ನುವುದನ್ನು ತನಿಖೆಯಿಂದ ಹೊರಬರಬೇಕು ಎಂದು ಕುಮಾರಸ್ವಾಮಿ ಎಚ್‌.ಡಿ. ಕೆ ಹೇಳಿದರು.

 ಕಾಂಗ್ರೆಸ್‌ನ ಪೇ‌ಸಿಎಂ ಅಭಿಯಾನ ಡೈವರ್ಟ್!

ಕಾಂಗ್ರೆಸ್‌ನ ಪೇ‌ಸಿಎಂ ಅಭಿಯಾನ ಡೈವರ್ಟ್!

ಕಳೆದ ರಾತ್ರಿ ಏಕಾಏಕಿ ದಾಳಿ ಆಗಿರೋದು‌ ಸಣ್ಣ ಪುಟ್ಟ ಕಾರ್ಯಕರ್ತರಿಗೆ ಆತಂಕ ಉಂಟು ಮಾಡಿದೆ ಎನ್ನುವುದು ನಿಜ. ಈ ದಾಳಿಯ ವೇಳೆ ಏನು ಸಿಕ್ಕಿದೆ. ಯಾವ ದಾಖಲೆ ಇದೆ ಎಂಬುದನ್ನು ಜನರ ಮುಂದೆ ಇಡಬೇಕು. ದಾಳಿಯ ಬಗ್ಗೆ ಸತ್ಯ ಹೇಳದೇ ಹೋದರೆ ಕಾಂಗ್ರೆಸ್ ನ ಪೇ‌ ಸಿಎಂ ಅಭಿಯಾನ ಡೈವರ್ಟ್ ಮಾಡೋಕೆ ಸರಕಾರ ಹೀಗೆ ಮಾಡಿದೆ ಎಂಬ ಅನುಮಾನ ಜನರಿಗೆ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಸ್ಪಷ್ಟವಾಗಿ ಹೇಳಿದರು.

 ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ

ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ

ನಿಜವಾಗಿಯೂ ಸಮಾಜಘಾತುಕ ಶಕ್ತಿ ಬಗ್ಗೆ ಮಾಹಿತಿ ಇದ್ದರೆ ಜನರ ಮುಂದೆ ಇಡಬೇಕು. ನೆಪಗಳನ್ನು ಹೇಳಿ ಸರಕಾರ ನುಣುಚಿಕೊಳ್ಳಬಾರದು. ವಾಸ್ತವ ಅಂಶಗಳನ್ನು ಜನರ ಮುಂದೆ ಸರಕಾರ ಇಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಮಧ್ಯರಾತ್ರಿ ಕಾರ್ಯಾಚರಣೆಯಲ್ಲಿ ಯಾರು ಯಾರನ್ನು ಬಂಧನ ಮಾಡಿದ್ದಾರೆ. ಅವರ ಸಮಾಜಘಾತುಕ ಕೆಲಸ ಏನು? ಎಂಬುದನ್ನು ಅಂತ ಸರಕಾರ ಜನರ ಮುಂದೆ ಇಡದೇ ಹೋದರೆ, ಸರಕಾರವೇ ಅನುಮಾನಗಳಿಗೆ ಎಡೆ ಮಾಡಿಕೊಟ್ಟಂತೆ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಹೇಳಿದರು.

ಇದೇ ವೇಳೆಯಲ್ಲಿ ಮಾಜಿ ಶಾಸಕರಾದ ಹೆಚ್.ಎಂ.ರಮೇಶ್ ಗೌಡ, ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ ಹಾಗೂ ಹಿರಿಯ ಮುಖಂಡ ಹರಿಹರದ ಶಿವಶಂಕರ್ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+