ಬೆಂಗಳೂರು ಟ್ರಾಫಿಕ್ ನಿರ್ವಹಣೆ ಶಾಲಾ ಪಠ್ಯದಲ್ಲಿ ಅಳವಡಿಕೆ
ಬೆಂಗಳೂರು, ಜನವರಿ 31 : ಬೆಂಗಳೂರು ನಗರದ ವಾಹನ ಸಂಚಾರ ದಟ್ಟಣೆ ನಿರ್ವಹಣೆ ಕುರಿತ ವಿಷಯವನ್ನು ಪಠ್ಯಕ್ರಮದಲ್ಲಿ ಸರ್ಪಡೆ ಮಾಡಿಕೊಳ್ಳಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. 2019-20 ನೇ ಶೈಕ್ಷಣಿಕ ವರ್ಷದಿಂದ ಇದು ಜಾರಿಗೆ ಬರುವ ಸಾಧ್ಯತೆ ಇದೆ.
ಶಿಕ್ಷಣ ತಜ್ಞರೊಂದಿಗೆ ಸಮಾಲೋಚನೆ ನಡೆಸಿ ಬೆಂಗಳೂರಿನ ವಾಹನ ಸಂಚಾರ ದಟ್ಟಣೆ ನಿರ್ವಹಣೆ ಕುರಿತ ವಿಷಯವನ್ನು ಪಠ್ಯಕ್ರಮದಲ್ಲಿ ಸೇರಿಸುವ ಕುರಿತು ಪರಿಶೀಲಿಸುವಂತೆ ಸಾರಿಗೆ ಇಲಾಖೆಯು ಇತ್ತೀಚೆಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಪ್ರಸ್ತಾವನೆ ಸಲ್ಲಿಸಿತ್ತು.
ಈ ಹಿನ್ನೆಲೆಯಲ್ಲಿ ಶಾಲಾ ಪಠ್ಯಕ್ರಮದಲ್ಲಿ ಈ ವಿಷಯವನ್ನು ಸೇರ್ಪಡೆ ಮಾಡಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷ ಅಂತ್ಯಗೊಂಡು ಹೊಸ ಶೈಕ್ಷಣಿಕ ವರ್ಷ ಆರಂಭವಾಗುವ ಸನಿಹದಲ್ಲಿದೆ. ಅಲ್ಲದೆ, 2018-19 ನೇ ಸಾಲಿನ ಪಠ್ಯ ಪುಸ್ತಕಗಳ ಮುದ್ರಣಕ್ಕೆ ಸರ್ಕಾರ ಕಾರ್ಯಾದೇಶ ಪತ್ರ ನೀಡಿರುವುದರಿಂದ ಈ ಹಂತದಲ್ಲಿ ಹೊಸ ವಿಷಯ ಸೇರ್ಪಡೆಗೊಳಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ2019-20 ನೇ ಶೈಕ್ಷಣಿಕ ವರ್ಷದಿಂದ ಈ ವಿಷಯವನ್ನು ಸೇರ್ಪಡೆ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದೆ.

ಸಂಚಾರ ವ್ಯವಸ್ಥೆ ಕುರಿತು ಶಿಕ್ಷಕರಿಗೆ ತರಬೇತಿ: ಹೊಸ ದಿಲ್ಲಿಯ ರಸ್ತೆ ಸಂಚಾರ ಶಿಕ್ಷಣ ಸಂಸ್ಥೆಗೆ ಆಯ್ದ ಶಿಕ್ಷಕರನ್ನು ತರಬೇತಿಗೆ ಕಳಿಸಲು ಉದ್ದೇಶಿಸಲಾಗಿದೆ. ಮಾಸ್ಟರ್ ತರಬೇತುದಾರರಾಗಿ ತರಬೇತಿ ಪಡೆಯುವ ಶಿಕ್ಷಕರು, ನಂತರ ಇತರೆ ಶಿಕ್ಷಕರು, ನಂತರ ಇತರ ಶಿಕ್ಷಕರಿಗೆ ರಸ್ತೆ ಸುರಕ್ಷತೆ ಕುರಿತು ತರಬೇತಿ ನೀಡಿದ್ದಾರೆ.
ಪಠ್ಯಕ್ರಮದಲ್ಲಿ ಸೇರ್ಪಡೆಗೊಳ್ಳುವ ಅಂಶಗಳು: ರಸ್ತೆ ಸಂಚಾರ ಸಿಗ್ನಲ್ ಹಾಗೂ ನಿಯಮಗಳು, ಸಂಚಾರ ನಿಯಮ ಉಲ್ಲಂಘನೆ ಹಾಗೂ ಅದಕ್ಕೆ ವಿಧಿಸುವ ದಂಡ ಕುರಿತು ಮಾಹಿತಿ, ವೇಗ ನಿಯಂತ್ರಣ, ಓವರ್ ಟೇಕ್, ಪಾದಚಾರಿಗಳಿಗೆ ಸುರಕ್ಷತೆ ಕುರಿತ ಮಾಹಿತಿ, ರಸ್ತೆ ದುರಂತ ಸಂಭವಿಸುವ ಸಂದರ್ಭದಲ್ಲಿ ತುರ್ತು ಸಂಪರ್ಕಿಸಬಹುದಾದ ಸಂಸ್ಥೆಗಳ ವಿವರವಿರಲಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications