ನಮ್ಮ ಮೆಟ್ರೋ: ಮಹಿಳಾ ಮೀಸಲು ಬೋಗಿಗೆ ಗುಲಾಬಿ ಬಣ್ಣವಿರಲಿ
Recommended Video

ಬೆಂಗಳೂರು, ಜೂನ್ 29: ನಮ್ಮ ಮೆಟ್ರೋದಲ್ಲಿ ಆರು ಬೋಗಿಯ ರೈಲಿನಲ್ಲಿ ಮೊದಲ ಬೋಗಿ ಮಹಿಳೆಯರಿಗೆ ಮೀಸಲು ಸೌಲಭ್ಯದಿಂದ ಮಹಿಳಾ ಸುರಕ್ಷತೆಗೆ ಒತ್ತು ನೀಡಿದಂತಾಗಿದೆ. ಆದರೆ ಆ ಬೋಗಿಗಳಿಗೆ ಸಂಪೂರ್ಣ ಗುಲಾಬಿ ಬಣ್ಣ ಬಳಿಯಬೇಕು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಸಲಹೆ ನೀಡಿದ್ದಾರೆ.
ಮೆಟ್ರೋ ನಿಲ್ದಾಣಕ್ಕೆ ಗುರುವಾರ ಭೇಟಿ ನೀಡಿದ ಅವರು, ರೈಲಿನಲ್ಲಿ ಮಹಿಳಾ ಬೋಗಿ ಸ್ಥಿತಿ ಗತಿ, ಮಹಿಳಾ ಸುರಕ್ಷತೆ ಕುರಿತು ಪರಿಶೀಲನೆ ನಡೆಸಿದರು. ನಂತರ ಅಲ್ಲಿ ನಿತ್ಯ ಸಂಚರಿಸುವ ಮಹಿಳಾ ಪ್ರಯಾಣಿಕರ ಜತೆ ಸುರಕ್ಷತೆ, ನಿಲ್ದಾಣ ಸ್ಥಿತಿಗತ, ಸಿಬ್ಬಂದಿ ವರ್ತನೆ ಸೇರಿದಂತೆ ಅಲ್ಲಿನ ಸೌಲಭ್ಯಗಳ ಕುರಿತು ಮಾತುಕತೆ ನಡೆಸಿದರು.
ಮಹಿಳೆಯರಿಗೆ ಪ್ರತ್ಯೇಕ ಬೋಗಿ ನಿಯೋಜಿಸಿರುವುದು ಸ್ವಾಗತಾರ್ಹ, ಆದರೆ ಪ್ರತಿನಿತ್ಯ ರೈಲಿನಲ್ಲಿ ಸಂಚರಿಸುವ ಮಹಿಳೆಯರಿಗೆ ಮಾತ್ರ ಈ ಬಗ್ಗೆ ತಿಳಿದಿರುತ್ತದೆ ಆದರೆ, ಅಪರೂಪಕ್ಕೆ ಆಗಮಿಸುವ ಮಹಿಳೆಯರಿಗೆ ಈ ಬಗ್ಗೆ ಅರಿವಿರುವುದಿಲ್ಲ, ಹಾಗಾಗಿ ಅಲ್ಲಲ್ಲಿ ನಾಮಫಲಕ ಅಳವಡಿಸಬೇಕು. ಈ ಬಗ್ಗೆ ಘೋಷಣೆ ಮಾಡಬೇಕು. ಅದರ ಜತೆಗೆ ಮುಖ್ಯವಾಗಿ ಆ ಬೋಗಿಗಳನ್ನು ಸಂಪೂರ್ಣ ಗುಲಾಬಿ ಬಣ್ಣವಾಗಿಸಬೇಕು. ಆಗ ಮಹಿಳೆಯರಿಗೆ ತಮಗಾಗಿಯೇ ಈ ಬೋಗಿ ಇರುವುದು ಎನ್ನುವುದು ಗೊತ್ತಾಗುತ್ತದೆ ಎಂದು ಹೇಳಿದರು.

ಸದ್ಯ ಒಂದು ಮಾರ್ಗದಲ್ಲಿ ಬೆಳಗ್ಗೆ ಹಾಗೂ ಸಂಜೆ ಮಹಿಳೆಯರಿಗೆ ಅನುಕೂಲವಾಗುವಂತೆ 6 ಟ್ರಿಪ್ಗಳಿದ್ದು, ಎರಡೂ ಮಾರ್ಗಗಳಲ್ಲೂ ಈ ವ್ಯವಸ್ಥೆ ತಂದರೆ ಅನುಕೂಲವಾಗುತ್ತದೆ. ಸಾಧ್ಯೌಆದರೆ ಈಗ ಇರುವ ರೈಲಿನಲ್ಲಿ ಮಹಿಳೆಯರಿಗೆ ಮತ್ತೊಂದು ಪ್ರತ್ಯೇಕ ಬೋಗಿಯನ್ನು ನೀಡಿದರೆ ಒಳಿತು ಎಂದು ಸಲಹೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
RCB Vs SRH: ಎಸ್ಆರ್ಎಚ್ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್ಸಿಬಿ ಬಿಗ್ ಅಪ್ಡೇಟ್ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ












Click it and Unblock the Notifications