ಬೆಂಗಳೂರಲ್ಲಿ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಮುಂದಾದರೆ ಮರು ಹೋರಾಟ
ಬೆಂಗಳೂರು, ಜನವರಿ 2: ಚಾಲುಕ್ಯ ವೃತ್ತದಿಂದ ಎಸ್ಟೀಮ್ ಮಾಲ್ವರೆಗೆ ಉಕ್ಕಿನ ಸೇತುವೆ ನಿರ್ಮಾಣ ವಿರೋಧಿಸಿ 201ರಲ್ಲೇ ಪ್ರತಿಭಟನೆ ನಡೆಸಿದ್ದರು. ಒಂದೊಮ್ಮೆ ಸಮ್ಮಿಶ್ರ ಸರ್ಕಾರ ಉಕ್ಕಿನ ಸೇತುವೆ ನಿರ್ಮಾಣಕ್ಕೆ ಮುಂದಾದರೆ ಹೋರಾಟ ತೀವ್ರಗೊಳ್ಳುವ ಎಲ್ಲಾ ಸಾಧ್ಯತೆಗಳಿವೆ.
ಸುಮಾರು ಒಂದೂವರೆ ವರ್ಷದ ಹಿಂದೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕೈಬಿಟ್ಟಿದ್ದ ಉಕ್ಕಿನ ಸೇತುವೆ ಯೋಜನೆ ಆರಂಭಿಸುವ ಇಂಗಿತವನ್ನು ಸಮ್ಮಿಶ್ರ ಸರ್ಕಾರ ವ್ಯಕ್ತಪಡಿಸಿರುವುದು ಮತ್ತೆ ಚರ್ಚೆಗೆ ಗ್ರಾಸವಾಗಿದೆ.
ಈ ಹಿಂದೆ 2016ರ ಜೂನ್-ಜುಲೈನಲ್ಲಿ ಘೋಷಿಸಿದ್ದ ಉಕ್ಕಿನ ಸೇತುವೆ ನಿರ್ಮಾಣ ಯೋಜನೆ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಯೋಜನೆಯಿಂದ ಕಾಂಗ್ರೆಸ್ ಹೈಕಮಾಂಡ್ಗೆ ಕಿಕ್ಬ್ಯಾಕ್ ಹೋಗಿದೆ ಎಂಬ ಆರೋಪ ಕೇಳಿಬಂದಿತ್ತು.

ಅಷ್ಟೇ ಅಲ್ಲ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ಕೆ ಗೋವಿಂದರಾಜು ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿದಾಗ, ವಶಪಡಿಸಿಕೊಂಡಿದ್ದ ಡೈರಿಯಲ್ಲಿ ಕೂಡ ಸ್ಟೀಲ್ ಬ್ರಿಡ್ಜ್ ಪ್ರಸ್ತಾಪ ಇತ್ತು. ಸರ್ಕಾರವೇ ಯೋಜನೆ ಕೈಬಿಟ್ಟಿದ್ದರಿಂದ ಎನ್ಜಿಟಿಯಲ್ಲಿದ್ದ ಪ್ರಕರಣ ತಾನಾಗಿಯೇ ವಜಾಗೊಂಡಿತ್ತು.
ಈಗ ಮತ್ತೆ ಸರ್ಕಾರ ಅದೇ ಯೋಜನೆ ಕೈಗೆತ್ತಿಕೊಂಡರೆ, ನಾವು ಪುನಃ ಎನ್ಜಿಟಿ ಮೊರೆ ಹೋಗಬೇಕಾಗುತ್ತದೆ, ಆಗ ಕಾನೂನು ಸಮರ ಮತ್ತೆ ಶುರುವಾಗಲಿದೆ ಎಂದು ನಿವೃತ್ತ ಐಎಎಸ್ ಅಧಿಕಾರಿ ವಿ ಬಾಲಸುಬ್ರಮಣಿಯನ್ ಹೇಳಿದ್ದಾರೆ.
ಸುಮಾರು 1800 ಕೋಟಿ ರೂ ವೆಚ್ಚದಲ್ಲಿ 6.7 ಕಿ.ಮೀ ಉದ್ದದ ಉಕ್ಕಿನ ಸೇತುವೆ ನಿರ್ಮಿಸುವುದಾಗಿ ಅಂದು ಬೆಂಗಳೂರು ಅಭಿವೃದ್ಧಿ ಸಚಿವರಾಗಿದ್ದ ಕೆಜೆ ಜಾರ್ಜ್ ತಿಳಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ ಯೋಜನಾ ವೆಚ್ಚ 200 ಕೋಟಿ ರೂ ಹೆಚ್ಚಳವಾಗಿತ್ತು. ಇದನ್ನು ವಿರೋಧಿಸಿ ಪರಿಸರವಾದಿಗಳು, ರಂಗಕರ್ಮಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ












Click it and Unblock the Notifications