ಸ್ಟೀಲ್ ಫ್ಲೈ ಓವರ್ ಕಿಕ್ ಬ್ಯಾಕ್; ಲೋಕಾಯುಕ್ತಕ್ಕೆ ದೂರು
ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಪಡೆದಿದ್ದಾರೆ ಎನ್ನಲಾದ ಕಮಿಷನ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಈ ದೂರು ದಾಖಲಿಸಿದ್ದಾರೆ.
ಬೆಂಗಳೂರು, ಫೆಬ್ರವರಿ 17: ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ ಪಡೆದಿದ್ದಾರೆ ಎನ್ನಲಾದ ಕಮಿಷನ್ ವಿರುದ್ಧ ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ದೂರು ನೀಡಲಾಗಿದೆ. ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಈ ದೂರು ದಾಖಲಿಸಿದ್ದಾರೆ.
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಈ ಕುರಿತು ದೂರು ನೀಡಿರುವ ರಾಜೀವ್, ಬಸವೇಶ್ವರ ವೃತ್ತ ಮತ್ತು ಹೆಬ್ಬಾಳದ ನಡುವೆ ನಿರ್ಮಿಸಲು ಉದ್ದೇಶಿಸಿರುವ ಸ್ಟೀಲ್ ಫ್ಲೈ ಓವರಿನಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅನ್ವಯ ತನಿಖೆ ನಡೆಸಬೇಕು. ಅಧಿಕಾರಿಗಳು, ಸಚಿವರು ಮತ್ತು ಇದರಲ್ಲಿ ತೊಡಗಿಸಿಕೊಂಡಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.[ಮಲ್ಲೇಶ್ವರಂ ಠಾಣೆ ಮೆಟ್ಟಿಲೇರಿದ ಯಡಿಯೂರಪ್ಪ -ಅನಂತ್ ಸಂಭಾಷಣೆ]

ಶುಕ್ರವಾರ ಲೋಕಾಯುಕ್ತ ಕಚೇರಿಗೆ ತೆರಳಿ ಅವರು ದೂರು ಸಲ್ಲಿಸಿದ್ದಾರೆ. ಸ್ಟೀಲ್ ಬ್ರಿಡ್ಜ್ ನಿರ್ಮಾಣ ಆರಂಭಿಸುತ್ತಿರುವ ಸರ್ಕಾರ ಯೋಜನೆಯಲ್ಲಿ ಕಿಕ್ ಬ್ಯಾಕ್ ಪಡೆದಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿದರು.
ಮಾತ್ರವಲ್ಲದೆ ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ ವಶಪಡಿಸಿಕೊಂಡ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಡೈರಿ ಬಗ್ಗೆಯೂ ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ. ಡೈರಿಯಲ್ಲಿ ಕಾಂಗ್ರೆಸ್ ಹೈಕಮಾಂಡಿಗೆ ಹಣ ನೀಡಿದ್ದರ ವಿವರಗಳಿವೆ ಎಂದು ಇತ್ತೀಚೆಗೆ ಯಡಿಯೂರಪ್ಪ ಆರೋಪಿಸಿದ್ದರು.[ವಿಶೇಷ ವಿಮಾನದಲ್ಲಿ ಕಾಂಗ್ರೆಸ್ಗೆ ಕಪ್ಪ ರವಾನೆ - ಹೆಚ್ಡಿಕೆ]
Tweet:Submttd petn to #LokAyukta on reports of kickbacks paid 4 #Bengaluru 's #SteelFlyover n seekng disclsre of Cong MLC Diary siezed in IT raid pic.twitter.com/DnVAPwc91q
— Rajeev Chandrasekhar (@rajeev_mp) February 17, 2017
ಕೆಲವು ದಿನಗಳ ಹಿಂದೆ ಸ್ಟೀಲ್ ಫ್ಲೈ ಓವರ್ ನಿರ್ಮಾಣದಲ್ಲಿ 150 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ. ಇದರಲ್ಲಿ 65 ಕೋಟಿ ಸಿದ್ದರಾಮಯ್ಯ ಕೈತಲುಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆರೋಪಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಜೀವ್ ಚಂದ್ರಶೇಖರ್ ಲೋಕಾಯುಕ್ತ ಮೆಟ್ಟಿಲೇರಿದ್ದಾರೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಕೇರಳದಲ್ಲಿ ಬದಲಾವಣೆಯ ಪರ್ವ ಆರಂಭ: ಅಭಿವೃದ್ಧಿಗಾಗಿ ಜನ ಕಾಂಗ್ರೆಸ್ ಕೈಹಿಡಿಯಲಿದ್ದಾರೆ-ಡಿ.ಕೆ.ಶಿವಕುಮಾರ್ ಭವಿಷ್ಯ -
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
Bagalkote: ಕೃಷ್ಣ ಮೇಲ್ದಂಡೆ ಯೋಜನೆ ವಿಳಂಬಕ್ಕೆ ಕಾಂಗ್ರೆಸ್ಸೇ ಕಾರಣ: ವಿವರ ಬಿಚ್ಚಿಟ್ಟ ಬಸವರಾಜ ಬೊಮ್ಮಾಯಿ -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ












Click it and Unblock the Notifications