ಬೆಳ್ಳಂದೂರು ಕೆರೆ ಕಸದಿಂದ ಸ್ವಲ್ಪ ಮುಕ್ತವಾಗಿದೆ ಆದರೆ ದುರ್ವಾಸನೆ?
ಬೆಂಗಳೂರು, ಏಪ್ರಿಲ್ 10: ಬೆಳ್ಳಂದೂರು ಕೆರೆಯಿಂದ ಇತ್ತೀಚಿನ ದಿನಗಳಲ್ಲಿ ವಿಪರೀತ ವಾಸನೆ ಬರುತ್ತಿರುವುದು ಅಲ್ಲಿರುವ ನಿವಾಸಿಗಳನ್ನು ಸಂಕಷ್ಟಕ್ಕೀಡುಮಾಡಿದೆ.
ಕೆರೆಗೆ ರಾಸಾಯನಿಕ ತ್ಯಾಜ್ಯ ಬಿಡುಗಡೆಯಾಗುತ್ತಿರುವುದರಿಂದ ಈ ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯರು ಶಂಕಿಸಿದ್ದಾರೆ, ಕರ್ನಾಟಕ ರಾಜ್ಯ ಮಾಲಿನ್ಯ ಮಂಡಳಿಗೆ ಈ ಬಗ್ಗೆ ದೂರು ನೀಡಿದ್ದು, ಕೆರೆಗೆ ತ್ಯಾಜ್ಯ ಸೇರುವುದನ್ನು ತಡೆಗಟ್ಟಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಬೆಳ್ಳಂದೂರು, ಇಬ್ಬಲೂರು ಮತ್ತು ಗ್ರೀನ್ ಗ್ಲೆನ್ ಲೇಔಟ್ ನ ನಿವಾಸಿಗಳು ಸೇರಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ದೂರು ನೀಡಿದ್ದಾರೆ.ಮೊದಲಿನಿಂದಲೂ ಬೆಳ್ಳಂದೂರು ಕೆರೆಯಿಂದ ಕೆಟ್ಟ ವಾಸನೆ ಬರುತ್ತಿತ್ತು. ಇದೀಗ ನಿರ್ದಿಷ್ಟ ಸಮಯದಲ್ಲಿ ಎಂದು ಬೆಳ್ಳಂದೂರಿನ ಸ್ಥಳೀಯ ನಿವಾಸಿಯೊಬ್ಬರು ಹೇಳಿದ್ದಾರೆ.
ಬೆಳಗಿನ ಜಾವ 1ರಿಂದ2 ಗಂಟೆಯ ವೇಳೆ ಇದ್ದಕ್ಕಿದ್ದಂತೆ ದುರ್ವಾಸನೆ ಹೆಚ್ಚುತ್ತದೆ.ಕಣ್ಣಿನಲ್ಲಿ ಉರಿ ಅನುಭವವಾಗುತ್ತದೆ.ವಾಸನೆಯಿಂದ ಉಸಿರುಗಟ್ಟಿದಂತಾಗುವುದರಿಂದ ಕಿಟಕಿ ಮುಚ್ಚುವುದು ಅನಿವಾರ್ಯವಾಗುತ್ತದೆ ಎಂದಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಪ್ರತಿಕ್ರಿಯಿಸಿ ಸ್ಥಳ ಪರಿಶೀಲಿಸಿ ವಾಸನೆ ಎಲ್ಲಿಂದ ಬರುತ್ತದೆ ಎಂಬುದನ್ನು ಕಂಡು ಹಿಡಿಯಲಾಗುವುದು. ಅಗತ್ಯ ಬಿದ್ದಲ್ಲಿ ನೀರಿನ ಪರೀಕ್ಷೆ ಮಾಡಿ ಬೆಳಗಿನ ಜಾವದ ಸಂದರ್ಭ ರಾಸಾಯನಿಕವನ್ನು ಬಿಡಿಗಡೆ ಮಾಡಲಾಗುತ್ತಿದೆಯೇ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತದೆ ಎಂದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ
ಕೆಲ ತಿಂಗಳಿನಿಂದ ಬೆಳ್ಳಂದೂರು ಕೆರೆಯನ್ನು ಉಳಿಸಲು ಮಾಜಿ ಸೈನಿಕರು ಪಣ ತೊಟ್ಟಿದ್ದಾರೆ, ಕೆರೆಯ ಸುತ್ತಮುತ್ತಲಿರುವ ತ್ಯಾಜ್ಯವನ್ನು ವಿಲೇವಾರಿ ಮಾಡಿದ್ದಾರೆ. ತ್ಯಾಜ್ಯವನ್ನು ಸುರಿಯದಂತೆ ಕಣ್ಗಾವಲಿಟ್ಟಿದ್ದಾರೆ. ಇದರ ಮಧ್ಯೆಯೂ ಇಂತಹ ಕಾರ್ಯಗಳು ನಡೆಯುತ್ತಿದೆ.
-
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ












Click it and Unblock the Notifications