ಕೇಂದ್ರ ಬಜೆಟ್ ಗೆ ಷೇರು ಮಾರುಕಟ್ಟೆ ಸಕಾರಾತ್ಮಕ ಪ್ರತಿಕ್ರಿಯೆ
ಬೆಂಗಳೂರು, ಫೆಬ್ರವರಿ 1: ಕೇಂದ್ರ ಬಜೆಟ್ ಗೆ ಸಕಾರಾತ್ಮಕ ಪ್ರತಿಕ್ರಿಯೆಗಳು ಬರುತ್ತಿವೆ. ಜನರ ನಿರೀಕ್ಷೆಯನ್ನು ಈ ಬಾರಿಯ ಬಜೆಟ್ ತಲುಪದೇ ಇರಬಹುದು. ಆದರೆ ಇದರಿಂದ ಆರ್ಥಿಕತೆಗೆ ಯಾವುದೇ ಹಾನಿಯಿಲ್ಲ ಎಂಬುದು ತಜ್ಞರ ಅಭಿಮತ. ದೀರ್ಘಕಾಲೀನ ಬಂಡವಾಳದ ಮೇಲಿನ ತೆರಿಗೆ ಹಾಕುವ ಅವಧಿಯನ್ನು ಮೂರು ವರ್ಷದಿಂದ ಎರಡು ವರ್ಷಕ್ಕೆ ಇಳಿಸಲಾಗಿದೆ.
ರಿಯಲ್ ಎಸ್ಟೇಟ್ ನಲ್ಲಿ ವ್ಯವಹಾರ ಹೆಚ್ಚಾಗಲು ಇದು ಪೂರಕವಾಗುತ್ತದೆ. ರಾಜ್ಯ ಸರಕಾರಗಳಿಗೆ ನೋಂದಣಿ ಹಾಗೂ ಮುದ್ರಾಂಕದ ಆದಾಯ ಹೆಚ್ಚಾಗುವ ಸಾಧ್ಯತೆಗಳಿವೆ. ಇನ್ನು ಆದಾಯ ತೆರಿಗೆ ವಿಚಾರ. 2.5 ಲಕ್ಷದಿಂದ 5 ಲಕ್ಷ ರುಪಾಯಿವರೆಗಿನ ಆದಾಯ ಇರುವವರಿಗೆ ಈ ಹಿಂದೆ ಶೇ 10ರಷ್ಟು ತೆರಿಗೆ ಹಾಕಲಾಗುತ್ತಿತ್ತು. ಅದನ್ನು ಶೇ 5ಕ್ಕೆ ಇಳಿಸಲಾಗಿದೆ. ಇದರಿಂದ ತೆರಿಗೆ ಪಾವತಿಸಲು ಉತ್ತೇಜನ ನೀಡಿದಂತಾಗುತ್ತದೆ.

ಇನ್ನು ಕೃಷಿಗಾಗಿ, ನರೇಗಾ ಯೋಜನೆಗಾಗಿ ಮೀಸಲಿಟ್ಟಿರುವ ಹಣದಿಂದ ಉದ್ಯೋಗಾವಕಾಶಗಳು ಹೆಚ್ಚಾಗುತ್ತವೆ. "ಈ ಬಾರಿಯ ಬಜೆಟ್ ಗೆ ಷೇರು ಮಾರುಕಟ್ಟೆ ಪ್ರತಿಸ್ಪಂದನೆ ಸಕಾರಾತ್ಮಕವಾಗಿದೆ. ಸೆನ್ಸೆಕ್ಸ್ 400 ಅಂಶ ಹಾಗೂ ನಿಫ್ಟಿ 100ಕ್ಕೂ ಹೆಚ್ಚು ಅಂಶ ಏರಿಕೆ ಕಂಡಿದೆ. ಗೃಹ ನಿರ್ಮಾಣ, ಮೂಲ ಸೌಕರ್ಯ ಅಭಿವೃದ್ಧಿ, ವಿದೇಶಿ ಬಂಡವಾಳಕ್ಕೆ ಪೂರಕವಾಗಿದೆ" ಎಂದು ಷೇರು ದಲ್ಲಾಳಿಗಳು, ಅಂಕಣಕಾರರು ಆದ ಕೆ.ಜಿ.ಕೃಪಾಲ್ ಅವರು ಒನ್ಇಂಡಿಯಾ ಕನ್ನಡಕ್ಕೆ ಪ್ರತಿಕ್ರಿಯೆ ನೀಡಿದರು.
ಇನ್ನು ಮೂರು ಲಕ್ಷಕ್ಕಿಂತ ಹೆಚ್ಚಿನ ನಗದು ವ್ಯವಹಾರಕ್ಕೆ ಬ್ರೇಕ್ ಬಿದ್ದಿದೆ. ಇದರಿಂದ ಪಾರದರ್ಶಕತೆ ಹೆಚ್ಚಲಿದೆ. ಆರ್ಥಿಕ ಅಪರಾಧಗಳ ತಡೆಗೆ ಹೊಸ ಕಾನೂನು ಜಾರಿ ಮಾಡಲು ಕೇಂದ್ರ ಸರಕಾರ ಮುಮ್ದಾಗಿರುವುದರಿಂದ ಬ್ಯಾಂಕ್ ಗಳ ಅನುತ್ಪಾದಕ ಸಾಲಗಳ ಹೊಡೆತಕ್ಕೆ ಒಂದು ಪರಿಹಾರ ಸಿಗುವ ಸಾಧ್ಯತೆ ಇದೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications