ಬೆಂಗಳೂರಿನ ಸಂತ ಫ್ರಾನ್ಸಿಸ್ ಚರ್ಚ್ನಲ್ಲಿ ದುಷ್ಕರ್ಮಿಗಳಿಂದ ದಾಂಧಲೆ
ಬೆಂಗಳೂರು, ಜನವರಿ 21: ರಾತ್ರೋ ರಾತ್ರಿ ಚರ್ಚಿಗೆ ನುಗ್ಗಿ ದುಷ್ಕರ್ಮಿಗಳು ದಾಂಧಲೆ ನಡೆಸಿರುವ ಘಟನೆ ನಗರದ ಕೆಂಗೇರಿಯಲ್ಲಿ ನಡೆದಿದೆ.
ಕೆಂಗೇರಿಯ ಸಂತ ಫ್ರಾನ್ಸಿಸ್ ಚರ್ಚ್ನಲ್ಲಿ ರಾತ್ರಿ ದುಷ್ಕರ್ಮಿಗಳು ನುಗ್ಗಿ, ಕಿಟಗಿ ಗಾಜುಗಳು, ಬಾಗಿಲುಗಳನ್ನು ಒಡೆದಿದ್ದಾರೆ. ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ಎಲ್ಲವೂ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಈ ದುಷ್ಕರ್ಮಿಗಳು ಯಾರು, ಯಾಕಾಗಿ ಈ ರೀತಿಯ ಕೃತ್ಯ ಎಸಗಿದ್ದಾರೆ ಎನ್ನುವ ಮಾಹಿತಿ ಹೊರಬೀಳಬೇಕಿದೆ.ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
Comments
English summary
Stone Pelting On St Francis Church Near Kengeri By Some Miscreants, Police Investigation is going on.