Stories of strength; ಕೋವಿಡ್ಗೆದ್ದ ದೇವನಹಳ್ಳಿಯ 110ರ ವೃದ್ಧೆ!
ಕೋವಿಡ್ 2ನೇ ಅಲೆ ಹೊಡೆತಕ್ಕ ಹಲವಾರು ಯುವಕರು ಮೃತಪಟ್ಟಿದ್ದಾರೆ. ಉಸಿರಾಟದ ಸಮಸ್ಯೆ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಧೈರ್ಯವಿದ್ದರೆ ಕೊರೊನಾ ಗೆಲ್ಲಬಹುದು ಎಂಬುದಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವೃದ್ಧೆಯೊಬ್ಬರು ಸಾಕ್ಷಿಯಾಗಿದ್ದಾರೆ.
ಕೋವಿಡ್ ಸೋಂಕು ತಗುಲಿದೆ ದೇವನಹಳ್ಳಿ ಕೋವಿಡ್ ಕೇರ್ ಸೆಂಟರ್ಗೆ ದಾಖಲಾಗಿದ್ದ 110 ವರ್ಷದ ಅಕ್ಕಯಮ್ಮ ಸಂಪೂರ್ಣ ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಸ್ಯಾಚುರೇಶನ್ 98 ಇದ್ದು ತಾಲೂಕು ಆರೋಗ್ಯಾಧಿಕಾರಿ ಡಾ. ಸಂಜಯ್ ಸೂಚನೆಯಂತೆಯೇ ಡಿಸ್ಚಾರ್ಜ್ ಮಾಡಲಾಗಿದೆ.
ಅಕ್ಕಯಮ್ಮ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ನಿವಾಸಿ. ಬಿಪಿ, ಶುಗರ್ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಮೇ 22ರಂದು ಅಕ್ಕಮ್ಮಗೆ ಸೋಂಕು ತಗುಲಿದಾಗ ಆಸ್ಪತ್ರೆಗೆ ದಾಖಲಿಸಲಾಯಿತು. ಉಸಿರಾಟ ಸಮಸ್ಯೆ ಕಂಡುಬಂದಾಗ ವೆಂಟಿಲೇಟರ್ನಲ್ಲಿಟ್ಟು ಚಿಕಿತ್ಸೆ ನೀಡಲಾಯಿತು.

110 ವರ್ಷವಾದ್ದರಿಂದ ವೈದ್ಯರು, ನರ್ಸ್ಗಳು ವಿಶೇಷ ಕಾಳಜಿ ವಹಿಸಿದರು. ಬೇರೆ ಆರೋಗ್ಯ ಸಮಸ್ಯೆ ಇಲ್ಲದ ಒಟ್ಟು 12 ದಿನಗಳ ಚಿಕಿತ್ಸೆ ಬಳಿಕ ಅಕ್ಕಯಮ್ಮ ಸಂಪೂರ್ಣ ಗುಣಮುಖಗೊಂಡಿದ್ದಾರೆ.
ಅಕ್ಕಯಮ್ಮ ಮನೆಯಲ್ಲಿ ಮೂವರಿಗೆ ಕೋವಿಡ್ ಸೋಂಕು ತಗುಲಿತ್ತು. ಎಲ್ಲರೂ ಚಿಕಿತ್ಸೆ ಪಡೆದು ಗುಣಮುಖಗೊಂಡಿದ್ದಾರೆ. ಹಿಂದೆ ಅಕ್ಕಯಮ್ಮನಿಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದೆಲ್ಲ ತಿಳಿದಿಲ್ಲ, ಅಷ್ಟು ಆರೋಗ್ಯವಂತರಾಗಿದ್ದಾರೆ.
"ಧೈರ್ಯದಿಂದ ಇದ್ದರೆ ಕೋವಿಡ್ ಗೆಲ್ಲಬಹುದು ಎಂಬುದಕ್ಕೆ ಅಜ್ಜಿಯೇ ಮಾದರಿ. ಅವರನ್ನು ಡಿಸ್ಚಾರ್ಜ್ ಮಾಡಿ ಮನೆಗೆ ಕರೆದುಕೊಂಡು ಬಂದಿದ್ದೇವೆ" ಎಂದು ಮೊಮ್ಮಗ ಚನ್ನಕೃಷ್ಣಪ್ಪ ಮಾಧ್ಯಮಗಳ ಜೊತೆ ಮಾತನಾಡಿದರು.
ಕೋವಿಡ್ ಕೇರ್ ಸೆಂಟರ್ನಿಂದ ಅಕ್ಕಯಮ್ಮ ಡಿಸ್ಚಾರ್ಜ್ ಆಗುತ್ತಿದ್ದಂತೆ ಅಲ್ಲಿನ ಸಿಬ್ಬಂದಿಗಳು ಫೋಟೋ ತೆಗೆಸಿಕೊಂಡರು. ಕೋವಿಡ್ಗೆ ಭಯಪಡದೇ ಚಿಕಿತ್ಸೆ ಪಡೆಯಿರಿ ಎಂದು ಸಿಬ್ಬಂದಿಗಳು ಸಹ ಕರೆ ನೀಡಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications