ಹಲಸೂರು ಕೆರೆಗೆ STP:ಫೆಬ್ರವರಿಯಿಂದ ಕಾರ್ಯಾರಂಭ
ಬೆಂಗಳೂರು, ಜನವರಿ 12: ಹಲಸೂರು ಕೆರೆಗೆ ತ್ಯಾಜ್ಯ ನೀರು ಸೇರದಂತೆ ತಡೆಯಲು ನಿರ್ಮಿಸುತ್ತಿರುವ ಎಸ್ ಟಿಪಿ ಫೆಬ್ರವರಿಯಿಂದ ಕಾರ್ಯಾರಂಭಗೊಳ್ಳಲಿದೆ. ನಗರದ ಸ್ವಚ್ಛ ಕೆರೆ ಎಂದು ಹೆಸರು ಪಡೆದಿರುವ ಹಲಸೂರು ಕೆರೆಗೆ ಶೀಘ್ರವೇ ಎಸ್ ಟಿಪಿ ಭಾಗ್ಯ ದೊರೆಯಲಿದೆ.
126 ಎಕರೆ ವಿಸ್ತೀರ್ಣವಿರುವ ಹಲಸೂರು ಕೆರೆ ಮಡಿವಾಳ ಹಾಗೂ ಸ್ಯಾಂಕಿ ಕೆರೆಯಂತೆಯೇ ಹೆಸರು ಪಡೆದಿದೆ. ಪ್ರತಿನಿತ್ಯ ಬೆಳಗ್ಗೆ ಹಾಗೂ ಸಂಜೆ ಸಾರ್ವಜನಿಕರು ವಾಯುವಿಹಾರ, ಜಾಗಿಂಗ್ ಮಾಡುತ್ತಾರೆ. ಪ್ರತಿ ವರ್ಷ ಗಣೇಶ ಮೂರ್ತಿಗಳು ವಿಸರ್ಜನೆಯಾಗುತ್ತಿದ್ದರಿಂದ ಕೆರೆ ಕಲುಷಿತಗೊಳ್ಳುತ್ತಿತ್ತು. ಬಳಿಕ ಇದಕ್ಕಾಗಿ ಕೆರೆ ಸಮೀಪದ ಪ್ರತ್ಯೇಕವಾಗಿ ಕಲ್ಯಾಣಿ ನಿರ್ಮಿಸಲಾಯಿತು.
ಇದರಿಂದಾಗಿ ಕೆರೆಗೆ ರಾಸಾಯನಿಕ ಸೇರುವುದು ಕಡಿಮೆಯಾಯಿತು. ಆದರೆ ಕೆರೆಗೆ ರಾಜಕಾಲುವೆಯಿಂದ ತ್ಯಾಜ್ಯ ನೀರು ಸೇರುವುದನ್ನು ತಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಬೆಂಗಳೂರು ಜಲಮಂಡಳಿಯು ೨ ಎಂಎಲ್ ಡಿ ಸಾಮರ್ಥ್ಯದ ಎಸ್ ಟಿಪಿ ನಿರ್ಮಿಸುತ್ತಿದ್ದು, ಬಹುತೇಕ ಪೂರ್ಣಗೊಂಡಿದೆ. ಫೆಬ್ರವರಿ ಮಧ್ಯಭಾಗದಲ್ಲಿ ಇದಕ್ಕೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ.

ಬಿಬಿಎಂಪಿ ನಿರ್ವಹಣೆ ಮಾಡುತ್ತಿರುವ ಹಲಸೂರು ಕೆರೆಯಲ್ಲಿ ಕಳೆದ ವರ್ಷ ಬೃಹತ್ ಪ್ರಮಾಣದಲ್ಲಿ ಮೀನುಗಳು ಸತ್ತು ರಾಶಿ ಬಿದ್ದತ್ತು. ಕೆರೆಗೆ ಕೊಳಚೆ ನೀಡು ಹರಿದಿದ್ದರಿಂದ ಈ ಸಮಸ್ಯೆ ಸೃಷ್ಟಿಯಾಗಿತ್ತು. ಕೆರೆಯಲ್ಲಿ ಮೀನುಗಾರಿಕೆ ಮಾಡುತ್ತಿದ್ದವರಿಗೆ ಅಪಾರ ನಷ್ಟ ಉಂಟಾಗಿತ್ತು. ಪ್ರಮುಖವಾಗಿ ಕದಿರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ಕೆರೆಗೆ ಕೊಳಚೆ ನೀಡು ಹರಿಯುತ್ತಿದೆ.
ಇದಕ್ಕೆ ಕಡಿವಾಣ ಹಾಕಲು ಕೆರೆ ಆವರಣದಲ್ಲಿ 30/30 ವಿಸ್ತೀರ್ಣದ ಜಾಗದಲ್ಲಿ ದ್ವತೀಯ ಹಂತದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗಿದೆ. ಈ ಎಸ್ ಟಿಪಿ ಕದಿರೇನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಂದ ರಾಜಕಾಲುವೆ ಮೂಲಕ ಹರಿದುಬರುತ್ತಿರು ತ್ಯಾಜ್ಯ ನೀರನ್ನುಶುದ್ಧೀಕರಣ ಮಾಡಲಿದೆ.
ಬಳಿಕ ಇದನ್ನು ಕೆರೆಗೆ ಹರಿಸಲಾಗುತ್ತದೆ. ಎಸ್ ಟಿಪಿಯಲ್ಲಿ ಸಂಸ್ಕರಣೆಗೊಂಡ ನಂತರ ಈ ನೀರು ಮರುಬಳಕೆಗೆ ಯೋಗ್ಯವಾಗಲಿದೆ. ಸದ್ಯಕ್ಕೆ ಈ ನೀರನ್ನು ಕೆರೆಗೆ ಬಿಡಲು ಚಿಂತಿಸಲಾಗಿದೆ. ಪ್ರತಿನಿತ್ಯ 2 ದಶಲಕ್ಷ ಲೀಟರ್ ನೀರನ್ನು ಎಸ್ಟಿಪಿ ಶುದ್ಧೀಕರಿಸುತ್ತದೆ. 8ಕೋಟಿ ವೆಚ್ಚದಲ್ಲಿ ಎಸ್ ಟಿ ಪಿ ನಿರ್ಮಿಸಲಾಗುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications