ಎರಡು ತಿಂಗಳಲ್ಲಿ ಇ-ತ್ಯಾಜ್ಯ ಕಾರ್ಖಾನೆಗಳ ಪರಿಶೀಲನೆ: ನಿರ್ದಾಕ್ಷಿಣ್ಯ ಕ್ರಮ
ಬೆಂಗಳೂರು, ಏಪ್ರಿಲ್ 02: ಇನ್ನೆರಡು ತಿಂಗಳಲ್ಲಿ ಇ-ತ್ಯಾಜ್ಯ ಕಾರ್ಖಾನೆಗಳನ್ನು ಪರಿಶೀಲಿಸಲಾಗುತ್ತದೆ. ಅಲ್ಲಿ ಬೇಕಾದ ದಾಖಲೆಗಳಿಲ್ಲದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಸರ ಅಧಿಕಾರಿ ಸುರೇಶ್ ತಿಳಿಸಿದರು.
ಆಲ್ ಇಂಡಿಯಾ ಇ-ವೇಸ್ಟ್ ರಿಸೈಕ್ಲರ್ಸ್ ಅಸೋಸಿಯೇಷನ್ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸಾಕಷ್ಟು ಇ-ಘಟಕಗಳು ಪರವಾನಗಿ ಇನ್ನಿತರೆ ಪ್ರಮುಖ ದಾಖಲೆಗಳನ್ನು ಹೊಂದಿಲ್ಲ ಎಂದು ದೂರುಗಳು ಕೇಳಿಬಂದಿವೆ. ಹೀಗಾಗಿ ರಾಜ್ಯದಲ್ಲಿರುವ ಎಲ್ಲ ಇ-ಕಾರ್ಖಾನೆ ಹಾಗೂ ಇ-ಘಟಕಗಳನ್ನು ಪರಿಶೀಲಿಸಲಾಗುತ್ತದೆ. ದಾಖಲೆಗಳು ಸರಿ ಇಲ್ಲದಿದ್ದ ಪಕ್ಷದಲ್ಲಿ ಅಂತಹ ಕಾರ್ಖಾನೆ ಅಥವಾ ಘಟಕಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.
ಕಾನೂನು ರೀತಿಯಲ್ಲಿ ಎಲ್ಲಾ ದಾಖಲೆಗಳು ಸರಿ ಇದ್ದರೆ ಅಂತಹ ಘಟಕ ಅಥವಾ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಎಲ್ಲಾ ರೀತಿಯ ಸಹಾಯವನ್ನು ಮಾಡಲಾಗುತ್ತದೆ ಒಂದೊಮ್ಮೆ ದಾಖಲೆಗಳು ತಪ್ಪಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಕೇಂದ್ರವು ನೇರವಾಗಿಯೇ ಎಚ್ಚರಿಕೆ ನೀಡಲು ತಿಳಿಸಿದೆ ಎಂದರು.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ದಕ್ಷಿಣ ವಿಭಾಗದ ಪರಿಸರ ಅಧಿಕಾರಿ ಎಂ.ಸಿ. ರಮೇಶ್ ಮಾತನಾಡಿ, ನಮ್ಮ ವಿಭಾಗದ ವ್ಯಾಪ್ತಿಯಲ್ಲಿ ಒಟ್ಟು 5 ಇ-ತ್ಯಾಜ್ಯ ನಿರ್ವಹಣಾ ಘಟಕಗಳಿವೆ. ಕರ್ನಾಟಕದಲ್ಲಿರುವ ಪರವಾನಗಿ ಪಡೆಯದ ಘಕಟಗಳಿಗೆ ಕಾರ್ಖಾನೆಗಳಿಂದ ಇ-ತ್ಯಾಜ್ಯ ರವಾನೆಯಾಗುತ್ತಿದೆ ಎಂಬ ದೂರುಗಳು ಕೇಳಿಬಂದಿವೆ. ಅಂತಹ ಕಾರ್ಖಾನೆಗಳ ಬಗ್ಗೆ ಮಾಹಿತಿ ನೀಡಿದರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಅಸೋಸೊಯೇಷನ್ ಅಧ್ಯಕ್ಷ ಕಾಳೀರೇಗೌಡ ಮಾತನಾಡಿ, ದೇಶಾದ್ಯಂತ ಇರುವ 118 ಕಾರ್ಖಾನೆಗಳು, ರಾಜ್ಯದಲ್ಲಿರುವ 78 ಕಾರ್ಖಾನೆಗಳು ಸೇರಿ ಸಂಸ್ಥೆಯನ್ನು ಹುಟ್ಟುಹಾಕಿದ್ದೇವೆ. ಇದರಿಂದ ಇ-ತ್ಯಾಜ್ಯ ನಿರ್ವಹಣೆ, ಇ-ತ್ಯಾಜ್ಯ ಉತ್ಪಾದನೆ, ಇ-ತ್ಯಾಜ್ಯದ ಕುರಿತು ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಹಾಗೆಯೇ ಇ-ತ್ಯಾಜ್ಯ ಮರುಬಳಕೆ ಕುರಿತು ತಿಳಿ ಹೇಳಲಾಗುತ್ತದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications